Homeಮುಖಪುಟತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ತಮಿಳುನಾಡು ಲಾಕಪ್ ಡೆತ್ ಕೇಸ್: ಮೃತರಿಗೆ ಸತತ 6 ಗಂಟೆ ಚಿತ್ರಹಿಂಸೆ ನೀಡಲಾಗಿತ್ತು- ಸಿಬಿಐ

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಸಿಬಿಐ ಹೇಳಿದೆ.

- Advertisement -
- Advertisement -

ಕಳೆದ ಜೂನ್‌ನಲ್ಲಿ ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನ್ನಿಕ್ಸ್ ಅವರ ಲಾಕಪ್ ಡೆತ್  ಪ್ರಕರಣದಲ್ಲಿ ಪೊಲೀಸರು ಸತತ ಆರುಗಂಟೆಗಳ ಕಾಲ ಇಬ್ಬರನ್ನು ಹಿಂಸಿದ್ದಾರೆ ಎಂದು ಸಿಬಿಐ ದೃಢಪಡಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ  ಜೈಲಿನಲ್ಲೇ ಮೃತಪಟ್ಟಿದ್ದರು.

ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಇವರಿಬ್ಬರನ್ನು “ಸಂಜೆ 7.45 ರಿಂದ ಮುಂಜಾನೆ 3 ಗಂಟೆಯ ವರೆಗೂ ಹಲವಾರು ಬಾರಿ ಕ್ರೂರ ಚಿತ್ರಹಿಂಸೆಗೊಳಪಡಿಸಲಾಗಿದೆ” ಎಂದು ಹೇಳಿದೆ. ತಂದೆ-ಮಗನನ್ನು ಎಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು ಎಂದರೆ, ಪೊಲೀಸ್ ಠಾಣೆಯ ಗೋಡೆಗಳ ಮೇಲೆಲ್ಲಾ ರಕ್ತ ಚೆಲ್ಲಿತ್ತು ಎಂದು ವಿಧಿವಿಜ್ಞಾನದ ಸಾಕ್ಷ್ಯಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಚಿತ್ರಹಿಂಸೆಯಿಂದಾದ ಗಾಯಗಳು ಬೆನ್ನಿಕ್ಸ್‌ ಸಾವಿಗೆ ಕಾರಣವಾಗಿವೆ ಎಂದು ಮರಣೋತ್ತರ ವರದಿಯಲ್ಲಿ ತಿಳಿಸಲಾಗಿದೆ. ಚಿತ್ರಹಿಂಸೆಯಿಂದ  ಪೊಲೀಸ್ ಠಾಣೆಯಲ್ಲಿ ಚೆಲ್ಲಿದ ರಕ್ತದ ಕಲೆಗಳನ್ನು ತನ್ನದೆ ಬಟ್ಟೆಯಲ್ಲಿ ಒರೆಸಲು ಬೆನ್ನಿಕ್ಸ್‌ಗೆ ಪೊಲೀಸರು ಒತ್ತಾಯಿಸಿದ್ದರು.

ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಹಾಕಲು ಬೆನ್ನಿಕ್ಸ್ ಮತ್ತು ಜಯರಾಜ್ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ.

ಪೊಲೀಸರು ಸಾಕ್ಷಿಗಳನ್ನು ನಾಶಪಡಿಸಿದರು. ರಕ್ತದಿಂದ ತುಂಬಿದ್ದ ತಂದೆ ಮತ್ತು ಮಗನ ಬಟ್ಟೆಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಡಸ್ಟ್‌ಬಿನ್‌ನಲ್ಲಿ ಎಸೆದಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

“ಬೆನ್ನಿಕ್ಸ್ ಮತ್ತು ಜಯರಾಜ್ ಅವರಿಗೆ ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಜೂನ್ 19 ಮತ್ತು20ರ ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳು ಕ್ರೂರ ಚಿತ್ರಹಿಂಸೆ ಮಾಡಿದ್ದಾರೆ ಎಂಬ ಅಂಶವು ದೃಢಪಟ್ಟಿದೆ” ಎಂದು ಸಿಬಿಐ ತಿಳಿಸಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ಇಬ್ಬರಿಗೂ ಚಿತ್ರಹಿಂಸೆ ನೀಡಿದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ರೀತಿ ಸೆಟ್ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ತಿಳಿಸಿದ್ದರು.

ಲಾಕಪ್ ಡೆತ್ ಪ್ರಕರಣ ರಾಷ್ಟ್ರವ್ಯಾಪಿ ಆಘಾತ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಅಭಿಯಾನವನ್ನು ಆರಂಭವಾಗಿತ್ತು. ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿತ್ತು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...