Homeಮುಖಪುಟತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಜೂನ್ 12ರಂದು (ಭಾನುವಾರ) ಚೆನ್ನೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 33 ವರ್ಷದ ರಾಜಶೇಖರ್ ಅವರ ಮೃತದೇಹವನ್ನು ಸ್ವೀಕರಿಸಲು ಅವರ ಕುಟುಂಬ ಸೋಮವಾರ ನಿರಾಕರಿಸಿದೆ.

ರಾಜಶೇಖರ್ ಅವರನ್ನು ‘ಬಿ ಕೆಟಗರಿ’ ಹಿಸ್ಟರಿ-ಶೀಟರ್ (ವೃತ್ತಿಪರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು) ಎಂದು ಶೋಲವರಂ ಪೊಲೀಸರು ವರ್ಗೀಕರಿಸಿದ್ದಾರೆ. ರಾಜಶೇಖರ್‌‌ ವಿರುದ್ಧ ಸುಮಾರು 30 ಪ್ರಕರಣಗಳಿವೆ. ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಂಗಯ್ಯೂರು ಪೊಲೀಸರು ರಾಜಶೇಖರ್‌ ಅವರನ್ನು ಕರೆದೊಯ್ದಿದ್ದು, ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ನಂತರ ಅವರನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಶೇಖರ್‌ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದರಿಂದ ಕುಸಿದುಬಿದ್ದರು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರೆ, ಅವರ ಕುಟುಂಬವು ಇದನ್ನು ನಿರಾಕರಿಸಿದೆ. ಪೊಲೀಸರು ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಶೇಖರ್ ಅವರ ತಾಯಿ ಉಷಾ ರಾಣಿ, “ನೀನು ಎಲ್ಲಿಗೂ ಹೋಗಬೇಡ ಎಂದಿದ್ದೆ.  ಆದರೆ ಆತ- ಹೋಗಲೇಬೇಕಾಗಿದ್ದು, ಇಲ್ಲವಾದರೆ ಪೊಲೀಸರಿಂದ ತೊಂದರೆಯಾಗುತ್ತದೆ- ಎಂದ. ಟಿವಿಯಲ್ಲಿ ಸುದ್ದಿ ನೋಡಿದ ನಂತರ ಆತನ ನಿಧನದ ಬಗ್ಗೆ ತಿಳಿಯಿತು. ಯಾರೂ ನನಗೆ ಕರೆ ಮಾಡಿ ಮಾಹಿತಿ ನೀಡಿರಲಿಲ್ಲ. ಪೊಲೀಸರು ಆತನನ್ನು ಬಂಧಿಸಬಹುದು. ಆದರೆ ನನ್ನ ಮಗನನ್ನು ಕೊಲ್ಲುವ ಹಕ್ಕು ಅವರಿಗೆ ನೀಡಿದವರು ಯಾರು? ಮುಖ್ಯಮಂತ್ರಿಯವರು ಕ್ರಮ ಕೈಗೊಳ್ಳಬೇಕು. ಕಸ್ಟಡಿಯಲ್ಲಿ ಸಾವನಪ್ಪುವ ಪ್ರಕರಣಗಳು ಇಲ್ಲಿಗೇ ನಿಲ್ಲಬೇಕು” ಎಂದು ಆಗ್ರಹಿಸಿದರು.

ರಾಜಶೇಖರ್‌ ಅವರನ್ನು ಪೊಲೀಸರು ಮನೆಯಲ್ಲಿದ್ದಾಗಲೇ ಬಂಧಿಸಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಅದನ್ನು ಉಷಾ ರಾಣಿ ನಿರಾಕರಿಸಿದ್ದಾರೆ.

“ಅವರು ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ. ಆದರೆ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದರೆಂದು ಪೊಲೀಸರು ಹೇಳುತ್ತಿದ್ದಾರೆ. ನನ್ನ ಮಗ ಎಂದಿಗೂ ಮೂರ್ಛೆ ಹೋದವನಲ್ಲ. ನನಗೆ ನ್ಯಾಯ ಬೇಕು. ನಾನು ಅವನ ಮೃತ ದೇಹವನ್ನು ಸ್ವೀಕರಿಸುವುದಿಲ್ಲ. ನಾನು ಪೊಲೀಸ್ ಠಾಣೆಗೆ ಹೋಗುವುದಿಲ್ಲ” ಎಂದು ರಾಜಶೇಖರ್‌ ತಾಯಿ ಹೇಳಿದರು.

ರಾಜಶೇಖರ್ ಅವರ ಸಹೋದರ ಮಣಿಕಂದನ್ ಸುದ್ದಿಗಾರರೊಂದಿಗೆ ಮಾತನಾಡಿ, “ಆತ ಜೂನ್ 10ರಂದು ಶನಿವಾರ ನನ್ನ ತಾಯಿಯನ್ನು ಭೇಟಿಯಾಗಿ ಮನೆಯಲ್ಲಿ ಊಟ ಮಾಡಿದ್ದ. ಭಾನುವಾರ ಬೆಳಗ್ಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಂತರ, ಸುದ್ದಿ ನೋಡಿದಾಗ ಸಾವಿನ ವಿಚಾರ ತಿಳಿಯಿತು. ಆದರೆ ನಮಗೆ ಪೊಲೀಸ್ ಠಾಣೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಯನವರಂ, ವಿಲ್ಲಿವಕ್ಕಂ ಮತ್ತು ಶೋಲವರಂ ಪೊಲೀಸ್ ಠಾಣೆಗಳು ನಮ್ಮ ಕರೆಗಳಿಗೆ ಪ್ರತಿಕ್ರಿಯಿಸುತ್ತಿದ್ದವು. ಆದರೆ ಪೊಲೀಸ್ ಸಿಬ್ಬಂದಿ ನಮಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಪೊಲೀಸರು ಇಂದು (ಸೋಮವಾರ) ನಮಗೆ ಕರೆ ಮಾಡಿದರು. ನನ್ನ ಸಹೋದರ ನಿಧನರಾಗಿರುವುದಾಗಿ ತಿಳಿಸಿದರು. ಮನೆಯ ವಿಳಾಸ ಕೇಳಿದರು” ಎಂದಿದ್ದಾರೆ.

“ನನ್ನ ಸಹೋದರನ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರು ಹೇಳಿರುವುದು ನಿಜವಲ್ಲ. ಆತ ಎಂದಿಗೂ ಆಸ್ಪತ್ರೆಗೆ ದಾಖಲಾದವನಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ. ಪೊಲೀಸರು ಆತನಿಗೆ ಥಳಿಸಿ ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ ಮಣಿಕಂದನ್‌.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ಇತ್ತ ರಾಜ್ಯ ಮಾನವ ಹಕ್ಕುಗಳ ಆಯೋಗವೂ (ಎಸ್‌ಎಚ್‌ಆರ್‌ಸಿ) ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನಾಲ್ಕು ವಾರಗಳಲ್ಲಿ ಚೆನ್ನೈ ಪೊಲೀಸ್ ಆಯುಕ್ತರು ವರದಿ ನೀಡಬೇಕೆಂದು ಸೂಚಿಸಿದೆ.

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಜಾರ್ಜ್ ಮಿಲ್ಲರ್ ಪೊನ್‌ರಾಜ್, ಸಬ್ ಇನ್‌ಸ್ಪೆಕ್ಟರ್ ಕಣ್ಣಿಯಪ್ಪನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಯಶೇಖರ್, ಮಣಿವಣ್ಣನ್ ಮತ್ತು ಗ್ರೇಡ್ 1 ಪೊಲೀಸ್ ಪೇದೆ ಸತ್ಯಮೂರ್ತಿ ಅಮಾನತಾದವರು.

ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 176(1)(ಎ) ಅಡಿಯಲ್ಲಿ ಎಂಕೆಬಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು, ಕೊಡುಂಗಯ್ಯೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರನ್ನು ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಎಸ್ ಲಕ್ಷ್ಮಿ ವಿಚಾರಣೆಗೆ ಒಳಪಡಿಸಿದ್ದಾರೆ. ಸಹಾಯಕ ಕಮಿಷನರ್ ಸೆಂಬೇಡು ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...