Homeಮುಖಪುಟತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಜೂನ್ 12ರಂದು (ಭಾನುವಾರ) ಚೆನ್ನೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 33 ವರ್ಷದ ರಾಜಶೇಖರ್ ಅವರ ಮೃತದೇಹವನ್ನು ಸ್ವೀಕರಿಸಲು ಅವರ ಕುಟುಂಬ ಸೋಮವಾರ ನಿರಾಕರಿಸಿದೆ.

ರಾಜಶೇಖರ್ ಅವರನ್ನು ‘ಬಿ ಕೆಟಗರಿ’ ಹಿಸ್ಟರಿ-ಶೀಟರ್ (ವೃತ್ತಿಪರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು) ಎಂದು ಶೋಲವರಂ ಪೊಲೀಸರು ವರ್ಗೀಕರಿಸಿದ್ದಾರೆ. ರಾಜಶೇಖರ್‌‌ ವಿರುದ್ಧ ಸುಮಾರು 30 ಪ್ರಕರಣಗಳಿವೆ. ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಂಗಯ್ಯೂರು ಪೊಲೀಸರು ರಾಜಶೇಖರ್‌ ಅವರನ್ನು ಕರೆದೊಯ್ದಿದ್ದು, ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ನಂತರ ಅವರನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಶೇಖರ್‌ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದರಿಂದ ಕುಸಿದುಬಿದ್ದರು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರೆ, ಅವರ ಕುಟುಂಬವು ಇದನ್ನು ನಿರಾಕರಿಸಿದೆ. ಪೊಲೀಸರು ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಶೇಖರ್ ಅವರ ತಾಯಿ ಉಷಾ ರಾಣಿ, “ನೀನು ಎಲ್ಲಿಗೂ ಹೋಗಬೇಡ ಎಂದಿದ್ದೆ.  ಆದರೆ ಆತ- ಹೋಗಲೇಬೇಕಾಗಿದ್ದು, ಇಲ್ಲವಾದರೆ ಪೊಲೀಸರಿಂದ ತೊಂದರೆಯಾಗುತ್ತದೆ- ಎಂದ. ಟಿವಿಯಲ್ಲಿ ಸುದ್ದಿ ನೋಡಿದ ನಂತರ ಆತನ ನಿಧನದ ಬಗ್ಗೆ ತಿಳಿಯಿತು. ಯಾರೂ ನನಗೆ ಕರೆ ಮಾಡಿ ಮಾಹಿತಿ ನೀಡಿರಲಿಲ್ಲ. ಪೊಲೀಸರು ಆತನನ್ನು ಬಂಧಿಸಬಹುದು. ಆದರೆ ನನ್ನ ಮಗನನ್ನು ಕೊಲ್ಲುವ ಹಕ್ಕು ಅವರಿಗೆ ನೀಡಿದವರು ಯಾರು? ಮುಖ್ಯಮಂತ್ರಿಯವರು ಕ್ರಮ ಕೈಗೊಳ್ಳಬೇಕು. ಕಸ್ಟಡಿಯಲ್ಲಿ ಸಾವನಪ್ಪುವ ಪ್ರಕರಣಗಳು ಇಲ್ಲಿಗೇ ನಿಲ್ಲಬೇಕು” ಎಂದು ಆಗ್ರಹಿಸಿದರು.

ರಾಜಶೇಖರ್‌ ಅವರನ್ನು ಪೊಲೀಸರು ಮನೆಯಲ್ಲಿದ್ದಾಗಲೇ ಬಂಧಿಸಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಅದನ್ನು ಉಷಾ ರಾಣಿ ನಿರಾಕರಿಸಿದ್ದಾರೆ.

“ಅವರು ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ. ಆದರೆ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದರೆಂದು ಪೊಲೀಸರು ಹೇಳುತ್ತಿದ್ದಾರೆ. ನನ್ನ ಮಗ ಎಂದಿಗೂ ಮೂರ್ಛೆ ಹೋದವನಲ್ಲ. ನನಗೆ ನ್ಯಾಯ ಬೇಕು. ನಾನು ಅವನ ಮೃತ ದೇಹವನ್ನು ಸ್ವೀಕರಿಸುವುದಿಲ್ಲ. ನಾನು ಪೊಲೀಸ್ ಠಾಣೆಗೆ ಹೋಗುವುದಿಲ್ಲ” ಎಂದು ರಾಜಶೇಖರ್‌ ತಾಯಿ ಹೇಳಿದರು.

ರಾಜಶೇಖರ್ ಅವರ ಸಹೋದರ ಮಣಿಕಂದನ್ ಸುದ್ದಿಗಾರರೊಂದಿಗೆ ಮಾತನಾಡಿ, “ಆತ ಜೂನ್ 10ರಂದು ಶನಿವಾರ ನನ್ನ ತಾಯಿಯನ್ನು ಭೇಟಿಯಾಗಿ ಮನೆಯಲ್ಲಿ ಊಟ ಮಾಡಿದ್ದ. ಭಾನುವಾರ ಬೆಳಗ್ಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಂತರ, ಸುದ್ದಿ ನೋಡಿದಾಗ ಸಾವಿನ ವಿಚಾರ ತಿಳಿಯಿತು. ಆದರೆ ನಮಗೆ ಪೊಲೀಸ್ ಠಾಣೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಯನವರಂ, ವಿಲ್ಲಿವಕ್ಕಂ ಮತ್ತು ಶೋಲವರಂ ಪೊಲೀಸ್ ಠಾಣೆಗಳು ನಮ್ಮ ಕರೆಗಳಿಗೆ ಪ್ರತಿಕ್ರಿಯಿಸುತ್ತಿದ್ದವು. ಆದರೆ ಪೊಲೀಸ್ ಸಿಬ್ಬಂದಿ ನಮಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಪೊಲೀಸರು ಇಂದು (ಸೋಮವಾರ) ನಮಗೆ ಕರೆ ಮಾಡಿದರು. ನನ್ನ ಸಹೋದರ ನಿಧನರಾಗಿರುವುದಾಗಿ ತಿಳಿಸಿದರು. ಮನೆಯ ವಿಳಾಸ ಕೇಳಿದರು” ಎಂದಿದ್ದಾರೆ.

“ನನ್ನ ಸಹೋದರನ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರು ಹೇಳಿರುವುದು ನಿಜವಲ್ಲ. ಆತ ಎಂದಿಗೂ ಆಸ್ಪತ್ರೆಗೆ ದಾಖಲಾದವನಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ. ಪೊಲೀಸರು ಆತನಿಗೆ ಥಳಿಸಿ ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ ಮಣಿಕಂದನ್‌.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ಇತ್ತ ರಾಜ್ಯ ಮಾನವ ಹಕ್ಕುಗಳ ಆಯೋಗವೂ (ಎಸ್‌ಎಚ್‌ಆರ್‌ಸಿ) ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನಾಲ್ಕು ವಾರಗಳಲ್ಲಿ ಚೆನ್ನೈ ಪೊಲೀಸ್ ಆಯುಕ್ತರು ವರದಿ ನೀಡಬೇಕೆಂದು ಸೂಚಿಸಿದೆ.

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಜಾರ್ಜ್ ಮಿಲ್ಲರ್ ಪೊನ್‌ರಾಜ್, ಸಬ್ ಇನ್‌ಸ್ಪೆಕ್ಟರ್ ಕಣ್ಣಿಯಪ್ಪನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಯಶೇಖರ್, ಮಣಿವಣ್ಣನ್ ಮತ್ತು ಗ್ರೇಡ್ 1 ಪೊಲೀಸ್ ಪೇದೆ ಸತ್ಯಮೂರ್ತಿ ಅಮಾನತಾದವರು.

ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 176(1)(ಎ) ಅಡಿಯಲ್ಲಿ ಎಂಕೆಬಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು, ಕೊಡುಂಗಯ್ಯೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರನ್ನು ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಎಸ್ ಲಕ್ಷ್ಮಿ ವಿಚಾರಣೆಗೆ ಒಳಪಡಿಸಿದ್ದಾರೆ. ಸಹಾಯಕ ಕಮಿಷನರ್ ಸೆಂಬೇಡು ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...