Homeಮುಖಪುಟತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಜೂನ್ 12ರಂದು (ಭಾನುವಾರ) ಚೆನ್ನೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 33 ವರ್ಷದ ರಾಜಶೇಖರ್ ಅವರ ಮೃತದೇಹವನ್ನು ಸ್ವೀಕರಿಸಲು ಅವರ ಕುಟುಂಬ ಸೋಮವಾರ ನಿರಾಕರಿಸಿದೆ.

ರಾಜಶೇಖರ್ ಅವರನ್ನು ‘ಬಿ ಕೆಟಗರಿ’ ಹಿಸ್ಟರಿ-ಶೀಟರ್ (ವೃತ್ತಿಪರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು) ಎಂದು ಶೋಲವರಂ ಪೊಲೀಸರು ವರ್ಗೀಕರಿಸಿದ್ದಾರೆ. ರಾಜಶೇಖರ್‌‌ ವಿರುದ್ಧ ಸುಮಾರು 30 ಪ್ರಕರಣಗಳಿವೆ. ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಂಗಯ್ಯೂರು ಪೊಲೀಸರು ರಾಜಶೇಖರ್‌ ಅವರನ್ನು ಕರೆದೊಯ್ದಿದ್ದು, ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ನಂತರ ಅವರನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಶೇಖರ್‌ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದರಿಂದ ಕುಸಿದುಬಿದ್ದರು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರೆ, ಅವರ ಕುಟುಂಬವು ಇದನ್ನು ನಿರಾಕರಿಸಿದೆ. ಪೊಲೀಸರು ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಶೇಖರ್ ಅವರ ತಾಯಿ ಉಷಾ ರಾಣಿ, “ನೀನು ಎಲ್ಲಿಗೂ ಹೋಗಬೇಡ ಎಂದಿದ್ದೆ.  ಆದರೆ ಆತ- ಹೋಗಲೇಬೇಕಾಗಿದ್ದು, ಇಲ್ಲವಾದರೆ ಪೊಲೀಸರಿಂದ ತೊಂದರೆಯಾಗುತ್ತದೆ- ಎಂದ. ಟಿವಿಯಲ್ಲಿ ಸುದ್ದಿ ನೋಡಿದ ನಂತರ ಆತನ ನಿಧನದ ಬಗ್ಗೆ ತಿಳಿಯಿತು. ಯಾರೂ ನನಗೆ ಕರೆ ಮಾಡಿ ಮಾಹಿತಿ ನೀಡಿರಲಿಲ್ಲ. ಪೊಲೀಸರು ಆತನನ್ನು ಬಂಧಿಸಬಹುದು. ಆದರೆ ನನ್ನ ಮಗನನ್ನು ಕೊಲ್ಲುವ ಹಕ್ಕು ಅವರಿಗೆ ನೀಡಿದವರು ಯಾರು? ಮುಖ್ಯಮಂತ್ರಿಯವರು ಕ್ರಮ ಕೈಗೊಳ್ಳಬೇಕು. ಕಸ್ಟಡಿಯಲ್ಲಿ ಸಾವನಪ್ಪುವ ಪ್ರಕರಣಗಳು ಇಲ್ಲಿಗೇ ನಿಲ್ಲಬೇಕು” ಎಂದು ಆಗ್ರಹಿಸಿದರು.

ರಾಜಶೇಖರ್‌ ಅವರನ್ನು ಪೊಲೀಸರು ಮನೆಯಲ್ಲಿದ್ದಾಗಲೇ ಬಂಧಿಸಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಅದನ್ನು ಉಷಾ ರಾಣಿ ನಿರಾಕರಿಸಿದ್ದಾರೆ.

“ಅವರು ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ. ಆದರೆ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದರೆಂದು ಪೊಲೀಸರು ಹೇಳುತ್ತಿದ್ದಾರೆ. ನನ್ನ ಮಗ ಎಂದಿಗೂ ಮೂರ್ಛೆ ಹೋದವನಲ್ಲ. ನನಗೆ ನ್ಯಾಯ ಬೇಕು. ನಾನು ಅವನ ಮೃತ ದೇಹವನ್ನು ಸ್ವೀಕರಿಸುವುದಿಲ್ಲ. ನಾನು ಪೊಲೀಸ್ ಠಾಣೆಗೆ ಹೋಗುವುದಿಲ್ಲ” ಎಂದು ರಾಜಶೇಖರ್‌ ತಾಯಿ ಹೇಳಿದರು.

ರಾಜಶೇಖರ್ ಅವರ ಸಹೋದರ ಮಣಿಕಂದನ್ ಸುದ್ದಿಗಾರರೊಂದಿಗೆ ಮಾತನಾಡಿ, “ಆತ ಜೂನ್ 10ರಂದು ಶನಿವಾರ ನನ್ನ ತಾಯಿಯನ್ನು ಭೇಟಿಯಾಗಿ ಮನೆಯಲ್ಲಿ ಊಟ ಮಾಡಿದ್ದ. ಭಾನುವಾರ ಬೆಳಗ್ಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಂತರ, ಸುದ್ದಿ ನೋಡಿದಾಗ ಸಾವಿನ ವಿಚಾರ ತಿಳಿಯಿತು. ಆದರೆ ನಮಗೆ ಪೊಲೀಸ್ ಠಾಣೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಯನವರಂ, ವಿಲ್ಲಿವಕ್ಕಂ ಮತ್ತು ಶೋಲವರಂ ಪೊಲೀಸ್ ಠಾಣೆಗಳು ನಮ್ಮ ಕರೆಗಳಿಗೆ ಪ್ರತಿಕ್ರಿಯಿಸುತ್ತಿದ್ದವು. ಆದರೆ ಪೊಲೀಸ್ ಸಿಬ್ಬಂದಿ ನಮಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಪೊಲೀಸರು ಇಂದು (ಸೋಮವಾರ) ನಮಗೆ ಕರೆ ಮಾಡಿದರು. ನನ್ನ ಸಹೋದರ ನಿಧನರಾಗಿರುವುದಾಗಿ ತಿಳಿಸಿದರು. ಮನೆಯ ವಿಳಾಸ ಕೇಳಿದರು” ಎಂದಿದ್ದಾರೆ.

“ನನ್ನ ಸಹೋದರನ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರು ಹೇಳಿರುವುದು ನಿಜವಲ್ಲ. ಆತ ಎಂದಿಗೂ ಆಸ್ಪತ್ರೆಗೆ ದಾಖಲಾದವನಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ. ಪೊಲೀಸರು ಆತನಿಗೆ ಥಳಿಸಿ ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ ಮಣಿಕಂದನ್‌.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ಇತ್ತ ರಾಜ್ಯ ಮಾನವ ಹಕ್ಕುಗಳ ಆಯೋಗವೂ (ಎಸ್‌ಎಚ್‌ಆರ್‌ಸಿ) ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನಾಲ್ಕು ವಾರಗಳಲ್ಲಿ ಚೆನ್ನೈ ಪೊಲೀಸ್ ಆಯುಕ್ತರು ವರದಿ ನೀಡಬೇಕೆಂದು ಸೂಚಿಸಿದೆ.

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಜಾರ್ಜ್ ಮಿಲ್ಲರ್ ಪೊನ್‌ರಾಜ್, ಸಬ್ ಇನ್‌ಸ್ಪೆಕ್ಟರ್ ಕಣ್ಣಿಯಪ್ಪನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಯಶೇಖರ್, ಮಣಿವಣ್ಣನ್ ಮತ್ತು ಗ್ರೇಡ್ 1 ಪೊಲೀಸ್ ಪೇದೆ ಸತ್ಯಮೂರ್ತಿ ಅಮಾನತಾದವರು.

ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 176(1)(ಎ) ಅಡಿಯಲ್ಲಿ ಎಂಕೆಬಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು, ಕೊಡುಂಗಯ್ಯೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರನ್ನು ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಎಸ್ ಲಕ್ಷ್ಮಿ ವಿಚಾರಣೆಗೆ ಒಳಪಡಿಸಿದ್ದಾರೆ. ಸಹಾಯಕ ಕಮಿಷನರ್ ಸೆಂಬೇಡು ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...