Homeಮುಖಪುಟತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಜೂನ್ 12ರಂದು (ಭಾನುವಾರ) ಚೆನ್ನೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 33 ವರ್ಷದ ರಾಜಶೇಖರ್ ಅವರ ಮೃತದೇಹವನ್ನು ಸ್ವೀಕರಿಸಲು ಅವರ ಕುಟುಂಬ ಸೋಮವಾರ ನಿರಾಕರಿಸಿದೆ.

ರಾಜಶೇಖರ್ ಅವರನ್ನು ‘ಬಿ ಕೆಟಗರಿ’ ಹಿಸ್ಟರಿ-ಶೀಟರ್ (ವೃತ್ತಿಪರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು) ಎಂದು ಶೋಲವರಂ ಪೊಲೀಸರು ವರ್ಗೀಕರಿಸಿದ್ದಾರೆ. ರಾಜಶೇಖರ್‌‌ ವಿರುದ್ಧ ಸುಮಾರು 30 ಪ್ರಕರಣಗಳಿವೆ. ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಂಗಯ್ಯೂರು ಪೊಲೀಸರು ರಾಜಶೇಖರ್‌ ಅವರನ್ನು ಕರೆದೊಯ್ದಿದ್ದು, ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ನಂತರ ಅವರನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಶೇಖರ್‌ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದರಿಂದ ಕುಸಿದುಬಿದ್ದರು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರೆ, ಅವರ ಕುಟುಂಬವು ಇದನ್ನು ನಿರಾಕರಿಸಿದೆ. ಪೊಲೀಸರು ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಶೇಖರ್ ಅವರ ತಾಯಿ ಉಷಾ ರಾಣಿ, “ನೀನು ಎಲ್ಲಿಗೂ ಹೋಗಬೇಡ ಎಂದಿದ್ದೆ.  ಆದರೆ ಆತ- ಹೋಗಲೇಬೇಕಾಗಿದ್ದು, ಇಲ್ಲವಾದರೆ ಪೊಲೀಸರಿಂದ ತೊಂದರೆಯಾಗುತ್ತದೆ- ಎಂದ. ಟಿವಿಯಲ್ಲಿ ಸುದ್ದಿ ನೋಡಿದ ನಂತರ ಆತನ ನಿಧನದ ಬಗ್ಗೆ ತಿಳಿಯಿತು. ಯಾರೂ ನನಗೆ ಕರೆ ಮಾಡಿ ಮಾಹಿತಿ ನೀಡಿರಲಿಲ್ಲ. ಪೊಲೀಸರು ಆತನನ್ನು ಬಂಧಿಸಬಹುದು. ಆದರೆ ನನ್ನ ಮಗನನ್ನು ಕೊಲ್ಲುವ ಹಕ್ಕು ಅವರಿಗೆ ನೀಡಿದವರು ಯಾರು? ಮುಖ್ಯಮಂತ್ರಿಯವರು ಕ್ರಮ ಕೈಗೊಳ್ಳಬೇಕು. ಕಸ್ಟಡಿಯಲ್ಲಿ ಸಾವನಪ್ಪುವ ಪ್ರಕರಣಗಳು ಇಲ್ಲಿಗೇ ನಿಲ್ಲಬೇಕು” ಎಂದು ಆಗ್ರಹಿಸಿದರು.

ರಾಜಶೇಖರ್‌ ಅವರನ್ನು ಪೊಲೀಸರು ಮನೆಯಲ್ಲಿದ್ದಾಗಲೇ ಬಂಧಿಸಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಅದನ್ನು ಉಷಾ ರಾಣಿ ನಿರಾಕರಿಸಿದ್ದಾರೆ.

“ಅವರು ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ. ಆದರೆ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದರೆಂದು ಪೊಲೀಸರು ಹೇಳುತ್ತಿದ್ದಾರೆ. ನನ್ನ ಮಗ ಎಂದಿಗೂ ಮೂರ್ಛೆ ಹೋದವನಲ್ಲ. ನನಗೆ ನ್ಯಾಯ ಬೇಕು. ನಾನು ಅವನ ಮೃತ ದೇಹವನ್ನು ಸ್ವೀಕರಿಸುವುದಿಲ್ಲ. ನಾನು ಪೊಲೀಸ್ ಠಾಣೆಗೆ ಹೋಗುವುದಿಲ್ಲ” ಎಂದು ರಾಜಶೇಖರ್‌ ತಾಯಿ ಹೇಳಿದರು.

ರಾಜಶೇಖರ್ ಅವರ ಸಹೋದರ ಮಣಿಕಂದನ್ ಸುದ್ದಿಗಾರರೊಂದಿಗೆ ಮಾತನಾಡಿ, “ಆತ ಜೂನ್ 10ರಂದು ಶನಿವಾರ ನನ್ನ ತಾಯಿಯನ್ನು ಭೇಟಿಯಾಗಿ ಮನೆಯಲ್ಲಿ ಊಟ ಮಾಡಿದ್ದ. ಭಾನುವಾರ ಬೆಳಗ್ಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಂತರ, ಸುದ್ದಿ ನೋಡಿದಾಗ ಸಾವಿನ ವಿಚಾರ ತಿಳಿಯಿತು. ಆದರೆ ನಮಗೆ ಪೊಲೀಸ್ ಠಾಣೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಯನವರಂ, ವಿಲ್ಲಿವಕ್ಕಂ ಮತ್ತು ಶೋಲವರಂ ಪೊಲೀಸ್ ಠಾಣೆಗಳು ನಮ್ಮ ಕರೆಗಳಿಗೆ ಪ್ರತಿಕ್ರಿಯಿಸುತ್ತಿದ್ದವು. ಆದರೆ ಪೊಲೀಸ್ ಸಿಬ್ಬಂದಿ ನಮಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಪೊಲೀಸರು ಇಂದು (ಸೋಮವಾರ) ನಮಗೆ ಕರೆ ಮಾಡಿದರು. ನನ್ನ ಸಹೋದರ ನಿಧನರಾಗಿರುವುದಾಗಿ ತಿಳಿಸಿದರು. ಮನೆಯ ವಿಳಾಸ ಕೇಳಿದರು” ಎಂದಿದ್ದಾರೆ.

“ನನ್ನ ಸಹೋದರನ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರು ಹೇಳಿರುವುದು ನಿಜವಲ್ಲ. ಆತ ಎಂದಿಗೂ ಆಸ್ಪತ್ರೆಗೆ ದಾಖಲಾದವನಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ. ಪೊಲೀಸರು ಆತನಿಗೆ ಥಳಿಸಿ ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ ಮಣಿಕಂದನ್‌.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ಇತ್ತ ರಾಜ್ಯ ಮಾನವ ಹಕ್ಕುಗಳ ಆಯೋಗವೂ (ಎಸ್‌ಎಚ್‌ಆರ್‌ಸಿ) ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನಾಲ್ಕು ವಾರಗಳಲ್ಲಿ ಚೆನ್ನೈ ಪೊಲೀಸ್ ಆಯುಕ್ತರು ವರದಿ ನೀಡಬೇಕೆಂದು ಸೂಚಿಸಿದೆ.

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಜಾರ್ಜ್ ಮಿಲ್ಲರ್ ಪೊನ್‌ರಾಜ್, ಸಬ್ ಇನ್‌ಸ್ಪೆಕ್ಟರ್ ಕಣ್ಣಿಯಪ್ಪನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಯಶೇಖರ್, ಮಣಿವಣ್ಣನ್ ಮತ್ತು ಗ್ರೇಡ್ 1 ಪೊಲೀಸ್ ಪೇದೆ ಸತ್ಯಮೂರ್ತಿ ಅಮಾನತಾದವರು.

ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 176(1)(ಎ) ಅಡಿಯಲ್ಲಿ ಎಂಕೆಬಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು, ಕೊಡುಂಗಯ್ಯೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರನ್ನು ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಎಸ್ ಲಕ್ಷ್ಮಿ ವಿಚಾರಣೆಗೆ ಒಳಪಡಿಸಿದ್ದಾರೆ. ಸಹಾಯಕ ಕಮಿಷನರ್ ಸೆಂಬೇಡು ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...