Homeಮುಖಪುಟತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಜೂನ್ 12ರಂದು (ಭಾನುವಾರ) ಚೆನ್ನೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 33 ವರ್ಷದ ರಾಜಶೇಖರ್ ಅವರ ಮೃತದೇಹವನ್ನು ಸ್ವೀಕರಿಸಲು ಅವರ ಕುಟುಂಬ ಸೋಮವಾರ ನಿರಾಕರಿಸಿದೆ.

ರಾಜಶೇಖರ್ ಅವರನ್ನು ‘ಬಿ ಕೆಟಗರಿ’ ಹಿಸ್ಟರಿ-ಶೀಟರ್ (ವೃತ್ತಿಪರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು) ಎಂದು ಶೋಲವರಂ ಪೊಲೀಸರು ವರ್ಗೀಕರಿಸಿದ್ದಾರೆ. ರಾಜಶೇಖರ್‌‌ ವಿರುದ್ಧ ಸುಮಾರು 30 ಪ್ರಕರಣಗಳಿವೆ. ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಂಗಯ್ಯೂರು ಪೊಲೀಸರು ರಾಜಶೇಖರ್‌ ಅವರನ್ನು ಕರೆದೊಯ್ದಿದ್ದು, ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ನಂತರ ಅವರನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಶೇಖರ್‌ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದರಿಂದ ಕುಸಿದುಬಿದ್ದರು ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರೆ, ಅವರ ಕುಟುಂಬವು ಇದನ್ನು ನಿರಾಕರಿಸಿದೆ. ಪೊಲೀಸರು ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಶೇಖರ್ ಅವರ ತಾಯಿ ಉಷಾ ರಾಣಿ, “ನೀನು ಎಲ್ಲಿಗೂ ಹೋಗಬೇಡ ಎಂದಿದ್ದೆ.  ಆದರೆ ಆತ- ಹೋಗಲೇಬೇಕಾಗಿದ್ದು, ಇಲ್ಲವಾದರೆ ಪೊಲೀಸರಿಂದ ತೊಂದರೆಯಾಗುತ್ತದೆ- ಎಂದ. ಟಿವಿಯಲ್ಲಿ ಸುದ್ದಿ ನೋಡಿದ ನಂತರ ಆತನ ನಿಧನದ ಬಗ್ಗೆ ತಿಳಿಯಿತು. ಯಾರೂ ನನಗೆ ಕರೆ ಮಾಡಿ ಮಾಹಿತಿ ನೀಡಿರಲಿಲ್ಲ. ಪೊಲೀಸರು ಆತನನ್ನು ಬಂಧಿಸಬಹುದು. ಆದರೆ ನನ್ನ ಮಗನನ್ನು ಕೊಲ್ಲುವ ಹಕ್ಕು ಅವರಿಗೆ ನೀಡಿದವರು ಯಾರು? ಮುಖ್ಯಮಂತ್ರಿಯವರು ಕ್ರಮ ಕೈಗೊಳ್ಳಬೇಕು. ಕಸ್ಟಡಿಯಲ್ಲಿ ಸಾವನಪ್ಪುವ ಪ್ರಕರಣಗಳು ಇಲ್ಲಿಗೇ ನಿಲ್ಲಬೇಕು” ಎಂದು ಆಗ್ರಹಿಸಿದರು.

ರಾಜಶೇಖರ್‌ ಅವರನ್ನು ಪೊಲೀಸರು ಮನೆಯಲ್ಲಿದ್ದಾಗಲೇ ಬಂಧಿಸಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ಅದನ್ನು ಉಷಾ ರಾಣಿ ನಿರಾಕರಿಸಿದ್ದಾರೆ.

“ಅವರು ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ. ಆದರೆ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದರೆಂದು ಪೊಲೀಸರು ಹೇಳುತ್ತಿದ್ದಾರೆ. ನನ್ನ ಮಗ ಎಂದಿಗೂ ಮೂರ್ಛೆ ಹೋದವನಲ್ಲ. ನನಗೆ ನ್ಯಾಯ ಬೇಕು. ನಾನು ಅವನ ಮೃತ ದೇಹವನ್ನು ಸ್ವೀಕರಿಸುವುದಿಲ್ಲ. ನಾನು ಪೊಲೀಸ್ ಠಾಣೆಗೆ ಹೋಗುವುದಿಲ್ಲ” ಎಂದು ರಾಜಶೇಖರ್‌ ತಾಯಿ ಹೇಳಿದರು.

ರಾಜಶೇಖರ್ ಅವರ ಸಹೋದರ ಮಣಿಕಂದನ್ ಸುದ್ದಿಗಾರರೊಂದಿಗೆ ಮಾತನಾಡಿ, “ಆತ ಜೂನ್ 10ರಂದು ಶನಿವಾರ ನನ್ನ ತಾಯಿಯನ್ನು ಭೇಟಿಯಾಗಿ ಮನೆಯಲ್ಲಿ ಊಟ ಮಾಡಿದ್ದ. ಭಾನುವಾರ ಬೆಳಗ್ಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಂತರ, ಸುದ್ದಿ ನೋಡಿದಾಗ ಸಾವಿನ ವಿಚಾರ ತಿಳಿಯಿತು. ಆದರೆ ನಮಗೆ ಪೊಲೀಸ್ ಠಾಣೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅಯನವರಂ, ವಿಲ್ಲಿವಕ್ಕಂ ಮತ್ತು ಶೋಲವರಂ ಪೊಲೀಸ್ ಠಾಣೆಗಳು ನಮ್ಮ ಕರೆಗಳಿಗೆ ಪ್ರತಿಕ್ರಿಯಿಸುತ್ತಿದ್ದವು. ಆದರೆ ಪೊಲೀಸ್ ಸಿಬ್ಬಂದಿ ನಮಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಪೊಲೀಸರು ಇಂದು (ಸೋಮವಾರ) ನಮಗೆ ಕರೆ ಮಾಡಿದರು. ನನ್ನ ಸಹೋದರ ನಿಧನರಾಗಿರುವುದಾಗಿ ತಿಳಿಸಿದರು. ಮನೆಯ ವಿಳಾಸ ಕೇಳಿದರು” ಎಂದಿದ್ದಾರೆ.

“ನನ್ನ ಸಹೋದರನ ಆರೋಗ್ಯ ಸ್ಥಿತಿಯ ಬಗ್ಗೆ ಪೊಲೀಸರು ಹೇಳಿರುವುದು ನಿಜವಲ್ಲ. ಆತ ಎಂದಿಗೂ ಆಸ್ಪತ್ರೆಗೆ ದಾಖಲಾದವನಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ. ಪೊಲೀಸರು ಆತನಿಗೆ ಥಳಿಸಿ ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ ಮಣಿಕಂದನ್‌.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

ಇತ್ತ ರಾಜ್ಯ ಮಾನವ ಹಕ್ಕುಗಳ ಆಯೋಗವೂ (ಎಸ್‌ಎಚ್‌ಆರ್‌ಸಿ) ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನಾಲ್ಕು ವಾರಗಳಲ್ಲಿ ಚೆನ್ನೈ ಪೊಲೀಸ್ ಆಯುಕ್ತರು ವರದಿ ನೀಡಬೇಕೆಂದು ಸೂಚಿಸಿದೆ.

ಘಟನೆಯ ನಂತರ ಕೊಡುಂಗಯ್ಯೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಜಾರ್ಜ್ ಮಿಲ್ಲರ್ ಪೊನ್‌ರಾಜ್, ಸಬ್ ಇನ್‌ಸ್ಪೆಕ್ಟರ್ ಕಣ್ಣಿಯಪ್ಪನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಯಶೇಖರ್, ಮಣಿವಣ್ಣನ್ ಮತ್ತು ಗ್ರೇಡ್ 1 ಪೊಲೀಸ್ ಪೇದೆ ಸತ್ಯಮೂರ್ತಿ ಅಮಾನತಾದವರು.

ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 176(1)(ಎ) ಅಡಿಯಲ್ಲಿ ಎಂಕೆಬಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು, ಕೊಡುಂಗಯ್ಯೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಮೃತರ ಸಂಬಂಧಿಕರನ್ನು ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಎಸ್ ಲಕ್ಷ್ಮಿ ವಿಚಾರಣೆಗೆ ಒಳಪಡಿಸಿದ್ದಾರೆ. ಸಹಾಯಕ ಕಮಿಷನರ್ ಸೆಂಬೇಡು ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....