Homeದಲಿತ್ ಫೈಲ್ಸ್ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

- Advertisement -
- Advertisement -

ಚೆನ್ನೈ ಮೂಲದ ಲೇಖಕಿ ಮತ್ತು ದಲಿತ ಹೋರಾಟಗಾರ್ತಿ ಶಾಲಿನ್ ಮರಿಯಾ ಲಾರೆನ್ಸ್‌ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಕಿರುಕುಳವನ್ನು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ (ಎನ್‌ಡಬ್ಲ್ಯುಎಂಐ) ಸಂಸ್ಥೆ ಖಂಡಿಸಿದೆ.

“ಡಿಎಂಕೆ ಮತ್ತು ಬಿಜೆಪಿ ಎರಡನ್ನೂ ಬೆಂಬಲಿಸುವ ಹ್ಯಾಂಡಲ್‌ಗಳಿಂದ ಈ ಕಿರುಕುಳ ನೀಡಲಾಗುತ್ತಿದೆ” ಎಂದು ಎನ್‌ಡಬ್ಲ್ಯುಎಂಐ ಹೇಳಿದೆ.

ಜಾತಿ-ಸಂಬಂಧಿತ ದೌರ್ಜನ್ಯಗಳ ಬಗ್ಗೆ ಟ್ವಿಟರ್‌ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶಾಲಿನ್ ಅವರು 2018ರಿಂದಲೂ ಮಾಡುತ್ತಿದ್ದಾರೆ. ಆಡಳಿತರೂಢ ಡಿಎಂಕೆ ಮತ್ತು ಬಲಪಂಥೀಯ ಗುಂಪುಗಳೆರಡೂ ಶಾಲಿನ್‌ ಅವರ ಮೇಲೆ ದಾಳಿ ನಡೆಸುತ್ತಿವೆ.

“ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವ ಬದಲು, ಅಂಕಿ-ಅಂಶಗಳನ್ನು ಅವಲೋಕಿಸುವ ಬದಲು ಸಂಘಟಿತ ದಾಳಿಗಳನ್ನು ಕೈಗೊಂಡಿದ್ದಾರೆ. ಜಾತಿವಾದಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಬಾಡಿ ಶೇಮಿಂಗ್ ನಡೆಯುತ್ತಿದೆ, ಶಾಲಿನ್‌ ಅವರ ಧರ್ಮದ ಆಧಾರದ ಮೇಲೆ ನಿಂದನೆಗಳನ್ನು ಮಾಡಿ ಕೆಟ್ಟ ಭಾಷೆಯನ್ನು ಬಳಸಲಾಗುತ್ತಿದೆ. ಈ ಗುಂಪುಗಳು ಶಾಲಿನ್ ಅವರ ಕುಟುಂಬ ಸದಸ್ಯರನ್ನೂ ಟಾರ್ಗೆಟ್ ಮಾಡಿವೆ” ಎಂದು ಎನ್‌ಡಬ್ಲ್ಯುಎಂಐ ವಿವರಿಸಿದೆ.

“ಭಾರತದ ಪ್ರತಿಯೊಂದು ರಾಜಕೀಯ ಪಕ್ಷವೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ಕುರಿತು ಮಾತನಾಡುತ್ತವೆ. ಪ್ರತಿಯೊಂದು ರಾಜಕೀಯ ಪಕ್ಷವೂ ಲಿಂಗ ಆಧಾರಿತ ಹಿಂಸೆ ಮತ್ತು ಜಾತಿ ಆಧಾರಿತ ಹಿಂಸೆಯನ್ನು ಅಮೂರ್ತವಾಗಿ ಖಂಡಿಸುತ್ತವೆಯಷ್ಟೇ. ಆದರೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮಹಿಳೆಯರ ಮೇಲೆ, ಅದರಲ್ಲೂ ಶೋಷಿತ ಸಮುದಾಯದ ಹೆಣ್ಣಿನ ಮೇಲೆ ಲಿಂಗ, ಜಾತಿ ಆಧಾರಿತ ದಾಳಿಯನ್ನು ನಡೆಸುವ ರಾಜಕೀಯ ಪಕ್ಷಗಳ ಅನುಯಾಯಿಗಳಿಗೆ ಯಾವುದೇ ಕಡಿವಾಣ ಬೀಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ತಮಿಳುನಾಡಿನ ಪ್ರಮುಖ ದಲಿತ ಹೋರಾಟಗಾರ್ತಿಯಾಗಿರುವ ಶಾಲಿನ್ ಅವರು ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅವರು, ಇತ್ತೀಚೆಗೆ ಚೆನ್ನೈಗೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

“ನನ್ನ ಹೋರಾಟದ ಕಾರಣಕ್ಕೆ ನನ್ನ ಮೇಲೆ ಆಕ್ರಮಣಗಳು ನಡೆಯುತ್ತಿವೆ. ಆದರೆ ಹಿಂದೆಂದೂ ನಡೆಯದಷ್ಟು ಸಂಘಟಿತ ದಾಳಿ ಇತ್ತೀಚೆಗೆ ಆಗಿದೆ” ಎಂದು ಶಾಲಿನ್ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

“ಬಿಜೆಪಿ-ಆರ್‌ಎಸ್‌ಎಸ್ ಸೈಬರ್ ಗುಂಪುಗಳಂತೆ ಡಿಎಂಕೆ ಕೂಡ ಸೈಬರ್‌ ಗುಂಪುಗಳನ್ನು ಹೊಂದಿದೆ. ವಾಟ್ಸ್‌ಅಪ್‌ ಗ್ರೂಪ್‌ ಮಾಡಿಕೊಂಡು, ಒಂದೇ ರೀತಿಯ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಟ್ವೀಟ್ ಮಾಡಿ ದಾಳಿ ಮಾಡಲಾಗುತ್ತದೆ. ವ್ಯಕ್ತಿಯೊಬ್ಬರ ಮೇಲೆ ಟಾರ್ಗೆಟ್ ಮಾಡಲು ಗ್ರೂಪ್‌ಗಳಲ್ಲಿ ಚರ್ಚಿಸುತ್ತಾರೆ” ಎಂದಿದ್ದಾರೆ.

ದಲಿತ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ತೊಟ್ಟಿಯಲ್ಲಿ ಮಾನವ ಮಲ ಪತ್ತೆಯಾದ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಬೇಕು, ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಹೋರಾಟಗಾರರಲ್ಲಿ ಶಾಲಿನ್ ಕೂಡ ಒಬ್ಬರಾಗಿದ್ದಾರೆ. ದಲಿತರ ಭೂ ಸಮಸ್ಯೆಗಳು, ತಮಿಳುನಾಡಿನ ಹಳ್ಳಿಗಳಲ್ಲಿ ಚುನಾಯಿತ ದಲಿತ ಪ್ರತಿನಿಧಿಗಳ ಎದುರಿಸುವ ತಾರತಮ್ಯಗಳು ಸೇರಿದಂತೆ ಮೊದಲ ವಿಷಯಗಳ ಕುರಿತು ಶಾಲಿನ್ ದನಿ ಎತ್ತುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...