Homeದಲಿತ್ ಫೈಲ್ಸ್ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

- Advertisement -
- Advertisement -

ಚೆನ್ನೈ ಮೂಲದ ಲೇಖಕಿ ಮತ್ತು ದಲಿತ ಹೋರಾಟಗಾರ್ತಿ ಶಾಲಿನ್ ಮರಿಯಾ ಲಾರೆನ್ಸ್‌ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಕಿರುಕುಳವನ್ನು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ (ಎನ್‌ಡಬ್ಲ್ಯುಎಂಐ) ಸಂಸ್ಥೆ ಖಂಡಿಸಿದೆ.

“ಡಿಎಂಕೆ ಮತ್ತು ಬಿಜೆಪಿ ಎರಡನ್ನೂ ಬೆಂಬಲಿಸುವ ಹ್ಯಾಂಡಲ್‌ಗಳಿಂದ ಈ ಕಿರುಕುಳ ನೀಡಲಾಗುತ್ತಿದೆ” ಎಂದು ಎನ್‌ಡಬ್ಲ್ಯುಎಂಐ ಹೇಳಿದೆ.

ಜಾತಿ-ಸಂಬಂಧಿತ ದೌರ್ಜನ್ಯಗಳ ಬಗ್ಗೆ ಟ್ವಿಟರ್‌ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶಾಲಿನ್ ಅವರು 2018ರಿಂದಲೂ ಮಾಡುತ್ತಿದ್ದಾರೆ. ಆಡಳಿತರೂಢ ಡಿಎಂಕೆ ಮತ್ತು ಬಲಪಂಥೀಯ ಗುಂಪುಗಳೆರಡೂ ಶಾಲಿನ್‌ ಅವರ ಮೇಲೆ ದಾಳಿ ನಡೆಸುತ್ತಿವೆ.

“ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವ ಬದಲು, ಅಂಕಿ-ಅಂಶಗಳನ್ನು ಅವಲೋಕಿಸುವ ಬದಲು ಸಂಘಟಿತ ದಾಳಿಗಳನ್ನು ಕೈಗೊಂಡಿದ್ದಾರೆ. ಜಾತಿವಾದಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಬಾಡಿ ಶೇಮಿಂಗ್ ನಡೆಯುತ್ತಿದೆ, ಶಾಲಿನ್‌ ಅವರ ಧರ್ಮದ ಆಧಾರದ ಮೇಲೆ ನಿಂದನೆಗಳನ್ನು ಮಾಡಿ ಕೆಟ್ಟ ಭಾಷೆಯನ್ನು ಬಳಸಲಾಗುತ್ತಿದೆ. ಈ ಗುಂಪುಗಳು ಶಾಲಿನ್ ಅವರ ಕುಟುಂಬ ಸದಸ್ಯರನ್ನೂ ಟಾರ್ಗೆಟ್ ಮಾಡಿವೆ” ಎಂದು ಎನ್‌ಡಬ್ಲ್ಯುಎಂಐ ವಿವರಿಸಿದೆ.

“ಭಾರತದ ಪ್ರತಿಯೊಂದು ರಾಜಕೀಯ ಪಕ್ಷವೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ಕುರಿತು ಮಾತನಾಡುತ್ತವೆ. ಪ್ರತಿಯೊಂದು ರಾಜಕೀಯ ಪಕ್ಷವೂ ಲಿಂಗ ಆಧಾರಿತ ಹಿಂಸೆ ಮತ್ತು ಜಾತಿ ಆಧಾರಿತ ಹಿಂಸೆಯನ್ನು ಅಮೂರ್ತವಾಗಿ ಖಂಡಿಸುತ್ತವೆಯಷ್ಟೇ. ಆದರೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮಹಿಳೆಯರ ಮೇಲೆ, ಅದರಲ್ಲೂ ಶೋಷಿತ ಸಮುದಾಯದ ಹೆಣ್ಣಿನ ಮೇಲೆ ಲಿಂಗ, ಜಾತಿ ಆಧಾರಿತ ದಾಳಿಯನ್ನು ನಡೆಸುವ ರಾಜಕೀಯ ಪಕ್ಷಗಳ ಅನುಯಾಯಿಗಳಿಗೆ ಯಾವುದೇ ಕಡಿವಾಣ ಬೀಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ತಮಿಳುನಾಡಿನ ಪ್ರಮುಖ ದಲಿತ ಹೋರಾಟಗಾರ್ತಿಯಾಗಿರುವ ಶಾಲಿನ್ ಅವರು ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅವರು, ಇತ್ತೀಚೆಗೆ ಚೆನ್ನೈಗೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

“ನನ್ನ ಹೋರಾಟದ ಕಾರಣಕ್ಕೆ ನನ್ನ ಮೇಲೆ ಆಕ್ರಮಣಗಳು ನಡೆಯುತ್ತಿವೆ. ಆದರೆ ಹಿಂದೆಂದೂ ನಡೆಯದಷ್ಟು ಸಂಘಟಿತ ದಾಳಿ ಇತ್ತೀಚೆಗೆ ಆಗಿದೆ” ಎಂದು ಶಾಲಿನ್ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

“ಬಿಜೆಪಿ-ಆರ್‌ಎಸ್‌ಎಸ್ ಸೈಬರ್ ಗುಂಪುಗಳಂತೆ ಡಿಎಂಕೆ ಕೂಡ ಸೈಬರ್‌ ಗುಂಪುಗಳನ್ನು ಹೊಂದಿದೆ. ವಾಟ್ಸ್‌ಅಪ್‌ ಗ್ರೂಪ್‌ ಮಾಡಿಕೊಂಡು, ಒಂದೇ ರೀತಿಯ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಟ್ವೀಟ್ ಮಾಡಿ ದಾಳಿ ಮಾಡಲಾಗುತ್ತದೆ. ವ್ಯಕ್ತಿಯೊಬ್ಬರ ಮೇಲೆ ಟಾರ್ಗೆಟ್ ಮಾಡಲು ಗ್ರೂಪ್‌ಗಳಲ್ಲಿ ಚರ್ಚಿಸುತ್ತಾರೆ” ಎಂದಿದ್ದಾರೆ.

ದಲಿತ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ತೊಟ್ಟಿಯಲ್ಲಿ ಮಾನವ ಮಲ ಪತ್ತೆಯಾದ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಬೇಕು, ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಹೋರಾಟಗಾರರಲ್ಲಿ ಶಾಲಿನ್ ಕೂಡ ಒಬ್ಬರಾಗಿದ್ದಾರೆ. ದಲಿತರ ಭೂ ಸಮಸ್ಯೆಗಳು, ತಮಿಳುನಾಡಿನ ಹಳ್ಳಿಗಳಲ್ಲಿ ಚುನಾಯಿತ ದಲಿತ ಪ್ರತಿನಿಧಿಗಳ ಎದುರಿಸುವ ತಾರತಮ್ಯಗಳು ಸೇರಿದಂತೆ ಮೊದಲ ವಿಷಯಗಳ ಕುರಿತು ಶಾಲಿನ್ ದನಿ ಎತ್ತುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...