Homeದಲಿತ್ ಫೈಲ್ಸ್ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

- Advertisement -
- Advertisement -

ಚೆನ್ನೈ ಮೂಲದ ಲೇಖಕಿ ಮತ್ತು ದಲಿತ ಹೋರಾಟಗಾರ್ತಿ ಶಾಲಿನ್ ಮರಿಯಾ ಲಾರೆನ್ಸ್‌ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಕಿರುಕುಳವನ್ನು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ (ಎನ್‌ಡಬ್ಲ್ಯುಎಂಐ) ಸಂಸ್ಥೆ ಖಂಡಿಸಿದೆ.

“ಡಿಎಂಕೆ ಮತ್ತು ಬಿಜೆಪಿ ಎರಡನ್ನೂ ಬೆಂಬಲಿಸುವ ಹ್ಯಾಂಡಲ್‌ಗಳಿಂದ ಈ ಕಿರುಕುಳ ನೀಡಲಾಗುತ್ತಿದೆ” ಎಂದು ಎನ್‌ಡಬ್ಲ್ಯುಎಂಐ ಹೇಳಿದೆ.

ಜಾತಿ-ಸಂಬಂಧಿತ ದೌರ್ಜನ್ಯಗಳ ಬಗ್ಗೆ ಟ್ವಿಟರ್‌ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶಾಲಿನ್ ಅವರು 2018ರಿಂದಲೂ ಮಾಡುತ್ತಿದ್ದಾರೆ. ಆಡಳಿತರೂಢ ಡಿಎಂಕೆ ಮತ್ತು ಬಲಪಂಥೀಯ ಗುಂಪುಗಳೆರಡೂ ಶಾಲಿನ್‌ ಅವರ ಮೇಲೆ ದಾಳಿ ನಡೆಸುತ್ತಿವೆ.

“ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವ ಬದಲು, ಅಂಕಿ-ಅಂಶಗಳನ್ನು ಅವಲೋಕಿಸುವ ಬದಲು ಸಂಘಟಿತ ದಾಳಿಗಳನ್ನು ಕೈಗೊಂಡಿದ್ದಾರೆ. ಜಾತಿವಾದಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಬಾಡಿ ಶೇಮಿಂಗ್ ನಡೆಯುತ್ತಿದೆ, ಶಾಲಿನ್‌ ಅವರ ಧರ್ಮದ ಆಧಾರದ ಮೇಲೆ ನಿಂದನೆಗಳನ್ನು ಮಾಡಿ ಕೆಟ್ಟ ಭಾಷೆಯನ್ನು ಬಳಸಲಾಗುತ್ತಿದೆ. ಈ ಗುಂಪುಗಳು ಶಾಲಿನ್ ಅವರ ಕುಟುಂಬ ಸದಸ್ಯರನ್ನೂ ಟಾರ್ಗೆಟ್ ಮಾಡಿವೆ” ಎಂದು ಎನ್‌ಡಬ್ಲ್ಯುಎಂಐ ವಿವರಿಸಿದೆ.

“ಭಾರತದ ಪ್ರತಿಯೊಂದು ರಾಜಕೀಯ ಪಕ್ಷವೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ಕುರಿತು ಮಾತನಾಡುತ್ತವೆ. ಪ್ರತಿಯೊಂದು ರಾಜಕೀಯ ಪಕ್ಷವೂ ಲಿಂಗ ಆಧಾರಿತ ಹಿಂಸೆ ಮತ್ತು ಜಾತಿ ಆಧಾರಿತ ಹಿಂಸೆಯನ್ನು ಅಮೂರ್ತವಾಗಿ ಖಂಡಿಸುತ್ತವೆಯಷ್ಟೇ. ಆದರೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮಹಿಳೆಯರ ಮೇಲೆ, ಅದರಲ್ಲೂ ಶೋಷಿತ ಸಮುದಾಯದ ಹೆಣ್ಣಿನ ಮೇಲೆ ಲಿಂಗ, ಜಾತಿ ಆಧಾರಿತ ದಾಳಿಯನ್ನು ನಡೆಸುವ ರಾಜಕೀಯ ಪಕ್ಷಗಳ ಅನುಯಾಯಿಗಳಿಗೆ ಯಾವುದೇ ಕಡಿವಾಣ ಬೀಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ತಮಿಳುನಾಡಿನ ಪ್ರಮುಖ ದಲಿತ ಹೋರಾಟಗಾರ್ತಿಯಾಗಿರುವ ಶಾಲಿನ್ ಅವರು ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅವರು, ಇತ್ತೀಚೆಗೆ ಚೆನ್ನೈಗೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

“ನನ್ನ ಹೋರಾಟದ ಕಾರಣಕ್ಕೆ ನನ್ನ ಮೇಲೆ ಆಕ್ರಮಣಗಳು ನಡೆಯುತ್ತಿವೆ. ಆದರೆ ಹಿಂದೆಂದೂ ನಡೆಯದಷ್ಟು ಸಂಘಟಿತ ದಾಳಿ ಇತ್ತೀಚೆಗೆ ಆಗಿದೆ” ಎಂದು ಶಾಲಿನ್ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

“ಬಿಜೆಪಿ-ಆರ್‌ಎಸ್‌ಎಸ್ ಸೈಬರ್ ಗುಂಪುಗಳಂತೆ ಡಿಎಂಕೆ ಕೂಡ ಸೈಬರ್‌ ಗುಂಪುಗಳನ್ನು ಹೊಂದಿದೆ. ವಾಟ್ಸ್‌ಅಪ್‌ ಗ್ರೂಪ್‌ ಮಾಡಿಕೊಂಡು, ಒಂದೇ ರೀತಿಯ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಟ್ವೀಟ್ ಮಾಡಿ ದಾಳಿ ಮಾಡಲಾಗುತ್ತದೆ. ವ್ಯಕ್ತಿಯೊಬ್ಬರ ಮೇಲೆ ಟಾರ್ಗೆಟ್ ಮಾಡಲು ಗ್ರೂಪ್‌ಗಳಲ್ಲಿ ಚರ್ಚಿಸುತ್ತಾರೆ” ಎಂದಿದ್ದಾರೆ.

ದಲಿತ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ತೊಟ್ಟಿಯಲ್ಲಿ ಮಾನವ ಮಲ ಪತ್ತೆಯಾದ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಬೇಕು, ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಹೋರಾಟಗಾರರಲ್ಲಿ ಶಾಲಿನ್ ಕೂಡ ಒಬ್ಬರಾಗಿದ್ದಾರೆ. ದಲಿತರ ಭೂ ಸಮಸ್ಯೆಗಳು, ತಮಿಳುನಾಡಿನ ಹಳ್ಳಿಗಳಲ್ಲಿ ಚುನಾಯಿತ ದಲಿತ ಪ್ರತಿನಿಧಿಗಳ ಎದುರಿಸುವ ತಾರತಮ್ಯಗಳು ಸೇರಿದಂತೆ ಮೊದಲ ವಿಷಯಗಳ ಕುರಿತು ಶಾಲಿನ್ ದನಿ ಎತ್ತುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...