Homeದಲಿತ್ ಫೈಲ್ಸ್ತಮಿಳುನಾಡು: ತಿರುನಲ್ವೇಲಿಯಲ್ಲಿ ದಲಿತ ಬಾಲಕನ ಮೇಲೆ ಅಮಾನುಷ ಹಲ್ಲೆ, ಮನೆಗೆ ಹಾನಿ

ತಮಿಳುನಾಡು: ತಿರುನಲ್ವೇಲಿಯಲ್ಲಿ ದಲಿತ ಬಾಲಕನ ಮೇಲೆ ಅಮಾನುಷ ಹಲ್ಲೆ, ಮನೆಗೆ ಹಾನಿ

- Advertisement -
- Advertisement -

ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಅಪ್ರಾಪ್ತ ದಲಿತ ಬಾಲಕನ ಮೇಲೆ ನಡೆದ ಆಪಾದಿತ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪಳಯಂಕೊಟ್ಟೈ ಪೊಲೀಸರು ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರನ್ನು ಮಂಗಳವಾರ ಬಂಧಿಸಿದ್ದು, ಏಳು ಮಂದಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ‘ದಿ ಸೌತ್ ಫಸ್ಟ್‌’ ವರದಿ ಮಾಡಿದೆ.

ದಾಳಿಯನ್ನು ಮಾಜಿ ಸಚಿವ ಹಾಗೂ ಎಐಎಡಿಎಂಕೆ ಮುಖಂಡ ಜಯಕುಮಾರ್ ಖಂಡಿಸಿದ್ದಾರೆ. ಅವರು ಡಿಎಂಕೆ ಸರ್ಕಾರವನ್ನು ಟೀಕಿಸಿದ್ದು, ಡಿಎಂಕೆಯು ಚುನಾವಣೆಗೆ ಮುಂಚಿತವಾಗಿ ಮಾತ್ರ ಅಂಚಿನಲ್ಲಿರುವ ಸಮುದಾಯಗಳ ಜನರ ಬಗ್ಗೆ ಕಾಳಜಿ ವಹಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ನವೆಂಬರ್ 4 ರಂದು, ಮೆಲಪಟ್ಟಂ ನಿವಾಸಿ ಮನೋಜ್ ಕುಮಾರ್ ಅವರು ಮೋಟಾರು ಬೈಕ್‌ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ತಿರುನೆಲ್ವೇಲಿಯ ಖಾಸಗಿ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ವಿದ್ಯಾರ್ಥಿಯಾಗಿದ್ದ ಅವರು ಇದರಿಂದ ಗಾಬರಿಗೊಂಡು ಕಾರಿನಲ್ಲಿದ್ದವರ ಮೇಲೆ ಕೂಗಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಅವರು ಕಾರಿನಿಂದ ಇಳಿದು ಅಪ್ರಾಪ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಮಧ್ಯಪ್ರವೇಶಿಸಿದ ನಂತರ ಅವರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೂ ಆರೋಪಿ ಅಷ್ಟಕ್ಕೇ ನಿಲ್ಲಲಿಲ್ಲ. ಅಪ್ರಾಪ್ತ ಬಾಲಕ ಮನೆಯಲ್ಲಿ ಒಬ್ಬನೇ ಇದ್ದಾನೆ ಎಂದು ತಿಳಿದ ವ್ಯಕ್ತಿಗಳು ಸಂಜೆಯ ನಂತರ ಮೆಲಪಟ್ಟಂ ಗ್ರಾಮಕ್ಕೆ ಕಾರು ಚಲಾಯಿಸಿ ಬಾಲಕನ ಮನೆಗೆ ಹಾನಿ ಮಾಡಿದ್ದಾರೆ.

ಹತ್ತು ಮಂದಿ ಆರೋಪಿಗಳು ವಿದ್ಯುತ್ ಫ್ಯಾನ್, ಅಡುಗೆ ಪಾತ್ರೆ ಸೇರಿದಂತೆ ಹಲವು ಗೃಹೋಪಯೋಗಿ ವಸ್ತುಗಳನ್ನು ಒಡೆದಿದ್ದಾರೆ. ನಂತರ ಆರೋಪಿಗಳು ಮನೋಜ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಕುಡುಗೋಲುಗಳಿಂದ ಹೊಡೆದು ಬಿಯರ್ ಬಾಟಲಿಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ತೀವ್ರವಾಗಿ ಗಾಯಗೊಂಡ ಬಾಲಕನನ್ನು ನಂತರ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ ಪಳಯಂಕೊಟ್ಟೈ ತಾಲೂಕು ಪೊಲೀಸರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹತ್ತು ಆರೋಪಿಗಳ ವಿರುದ್ಧ ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಬಾಲಾಪರಾಧಿ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭವಿಷ್ಯದ ದಾಳಿಗಳ ಬಗ್ಗೆ ಆತಂಕಗೊಂಡ ಬಾಲಕನ ಪೋಷಕರು ಪೊಲೀಸ್ ರಕ್ಷಣೆಯನ್ನು ಕೋರಿದ್ದಾರೆ.

ದಲಿತ ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ?

ದಾಳಿಯ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮನೋಜ್‌ನ ತಾಯಿ, ಆರೋಪಿಗಳು ಹುಡುಗನ ಜಾತಿಯ ಗುರುತನ್ನು ಉಲ್ಲೇಖಿಸಿದ್ದಾರೆ. ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಅವರನ್ನು ಯಾರು ಹೊಣೆಗಾರರನ್ನಾಗಿ ಮಾಡುತ್ತಾರೆ ಎಂದು ಕೇಳಿದರು.

“ನಮ್ಮ ಮನೆಯೊಳಗೆ ದಾಳಿ ಮಾಡಿದಾಗ ನಮಗೆ ಯಾವ ರೀತಿಯ ರಕ್ಷಣೆ ಇದೆ? ನನ್ನ ಮಗ ರಾಶ್ ಡ್ರೈವಿಂಗ್ ಬಗ್ಗೆ ಕೇಳಿದ್ದು ಬಿಟ್ಟರೆ ನಮ್ಮ ತಪ್ಪೇನು? ನಾವು ಆತ್ಮಹತ್ಯೆಯಿಂದ ಸಾಯಬೇಕೇ? ಎಂದು ಅಸಹಾಯಕತೆ ಹೊರಹಾಕಿದರು.

ದಲಿತರ ಮೇಲೆ ಇಂತಹ ಹೆಚ್ಚಿನ ಹಲ್ಲೆಗಳು ನಡೆಯದಂತೆ ನೋಡಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಲ್ಲಿ ಮನವಿ ಮಾಡಿದರು.

ಮೂವರ ಬಂಧನ, ಉಳಿದವರಿಗಾಗಿ ಶೋಧ

ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿರುವ 10 ಜನರನ್ನು ಹುಡುಕಲು ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡವು ನವೆಂಬರ್ 4 ರಂದು ತಡರಾತ್ರಿ ಸಮೀಪದ ತಿರುಮಲೈಕೊಲುಂತುಪುರಂ ಗ್ರಾಮದಲ್ಲಿ ಮೂವರನ್ನು ಬಂಧಿಸಿದ್ದಾರೆ. ಇದು ರಾಶ್ ಡ್ರೈವಿಂಗ್ ಗಲಾಟೆ ನಡೆದ ಗ್ರಾಮವಾಗಿದೆ.

ಬಂಧಿತರನ್ನು ಮುತ್ತುಮಲೈ, ಲಕ್ಷ್ಮಣನ್ ಮತ್ತು 17 ವರ್ಷದ ಬಾಲಕನನ್ನು ಪ್ರಸ್ತುತ ಸುರಕ್ಷಿತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಉಳಿದ ಏಳು ಆರೋಪಿಗಳ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ; ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...