Homeದಲಿತ್ ಫೈಲ್ಸ್ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

- Advertisement -
- Advertisement -

ಶಿಕ್ಷಕಿಯರಿಂದ ಸತತ ಜಾತಿನಿಂದನೆಗೆ ಬೇಸೆತ್ತ 9ನೇ ತರಗತಿಯ ದಲಿತ ಬಾಲಕಿಯರಿಬ್ಬರು ಶೌಚಾಲಯ ಸ್ವಚ್ಚಗೊಳಿಸುವ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ತೊಪ್ಪಪ್ಪಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಸದ್ಯ ಆ ಇಬ್ಬರು ಬಾಲಕಿಯರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

ಚಿನ್ನಾಲಪಟ್ಟಿಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರಿಗೆ ಅವರ ತರಗತಿ ಶಿಕ್ಷಕರಾದ ಸವರ್ಣೀಯ ಜಾತಿಯ ಪ್ರೇಮಲತಾ ಎಂಬುವವರು ಜಾತಿ ಹೆಸರಿಡಿದು ಬೈಯ್ದು ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಹಾಗಾಗಿ ಫೆಬ್ರವರಿ 15 ರಂದು ಶಾಲಾ ಬಸ್ ಅನ್ನು ತಡೆದು ಪ್ರತಿಭಟನೆ ನಡೆಸಿದ್ದರು.

ಇದರಿಂದ ಕುಪಿತಗೊಮಡ ಗಣಿತ ಶಿಕ್ಷಕಿಯಾದ ಪ್ರೇಮಲತಾ ಈ ಇಬ್ಬರೂ ದಲಿತ ವಿದ್ಯಾರ್ಥಿನಿಯರ ಮೇಲೆ ಹಗೆ ಸಾಧಿಸುತ್ತಿದ್ದರು. ಉಳಿದ ಯಾವ ವಿದ್ಯಾರ್ಥಿಗಳು ಸಹ ಇವರಿಬ್ಬರೊಂದಿಗೆ ಮಾತನಾಡಬಾರದೆಂದು ತಾಕೀತು ಮಾಡಿದ್ದರು. ಗುರುವಾರ ಶಾಲೆಗೆ ಬಂದ ದಲಿತ ವಿದ್ಯಾರ್ಥಿನಿಯರನ್ನು ಯಾರು ಮಾತನಾಡಿಸಿಲ್ಲ. ಇದರಿಂದ ನೊಂದ ಆ ಇಬ್ಬರು ವಿದ್ಯಾರ್ಥಿನಿಯರು ಊಟದ ವೇಳೆಯಲ್ಲಿ ಶೌಚಾಲಯದಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯೊಬ್ಬರ ತಾಯಿ ದೂರು ನೀಡಿದ್ದಾರೆ.

ಜಾತಿನಿಂದನೆ ಮಾಡಿದ ಶಿಕ್ಷಕಿಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತ ವಿದ್ಯಾರ್ಥಿನಿಯರ ಸಂಬಂಧಿಕರು ಮಧುರೈ-ದಿಂಡುಗಲ್ ಹೆದ್ದಾರಿ ತಡೆದು ಮತ್ತು ಚಿನ್ನಾಲಪಟ್ಟಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಪಟ್ಟ ಶಾಲೆ ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದು, ರಾಜ್ಯ ಎಸ್‌ಸಿ ಮತ್ತು ಎಸ್‌ಟಿ ಆಯೋಗವು ಬಂದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿನಿಯರ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಾಲೆಯ ಆಡಳಿತ ಮಂಡಳಿ ಗಣಿತ ಶಿಕ್ಷಕಿ ಪ್ರೇಮಲತಾರನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಅದೇ ರೀತಿ ಜಾತಿ ನಿಂದನೆ ಮಾಡಿದ ಆರೋಪ ಹೊತ್ತಿರುವ ಮತ್ತೊಬ್ಬ ಶಿಕ್ಷಕಿಗೆ ಕಡ್ಡಾಯ ವೈದ್ಯಕೀಯ ರಜೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...