Homeದಲಿತ್ ಫೈಲ್ಸ್ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

- Advertisement -
- Advertisement -

ಶಿಕ್ಷಕಿಯರಿಂದ ಸತತ ಜಾತಿನಿಂದನೆಗೆ ಬೇಸೆತ್ತ 9ನೇ ತರಗತಿಯ ದಲಿತ ಬಾಲಕಿಯರಿಬ್ಬರು ಶೌಚಾಲಯ ಸ್ವಚ್ಚಗೊಳಿಸುವ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ತೊಪ್ಪಪ್ಪಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಸದ್ಯ ಆ ಇಬ್ಬರು ಬಾಲಕಿಯರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

ಚಿನ್ನಾಲಪಟ್ಟಿಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರಿಗೆ ಅವರ ತರಗತಿ ಶಿಕ್ಷಕರಾದ ಸವರ್ಣೀಯ ಜಾತಿಯ ಪ್ರೇಮಲತಾ ಎಂಬುವವರು ಜಾತಿ ಹೆಸರಿಡಿದು ಬೈಯ್ದು ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಹಾಗಾಗಿ ಫೆಬ್ರವರಿ 15 ರಂದು ಶಾಲಾ ಬಸ್ ಅನ್ನು ತಡೆದು ಪ್ರತಿಭಟನೆ ನಡೆಸಿದ್ದರು.

ಇದರಿಂದ ಕುಪಿತಗೊಮಡ ಗಣಿತ ಶಿಕ್ಷಕಿಯಾದ ಪ್ರೇಮಲತಾ ಈ ಇಬ್ಬರೂ ದಲಿತ ವಿದ್ಯಾರ್ಥಿನಿಯರ ಮೇಲೆ ಹಗೆ ಸಾಧಿಸುತ್ತಿದ್ದರು. ಉಳಿದ ಯಾವ ವಿದ್ಯಾರ್ಥಿಗಳು ಸಹ ಇವರಿಬ್ಬರೊಂದಿಗೆ ಮಾತನಾಡಬಾರದೆಂದು ತಾಕೀತು ಮಾಡಿದ್ದರು. ಗುರುವಾರ ಶಾಲೆಗೆ ಬಂದ ದಲಿತ ವಿದ್ಯಾರ್ಥಿನಿಯರನ್ನು ಯಾರು ಮಾತನಾಡಿಸಿಲ್ಲ. ಇದರಿಂದ ನೊಂದ ಆ ಇಬ್ಬರು ವಿದ್ಯಾರ್ಥಿನಿಯರು ಊಟದ ವೇಳೆಯಲ್ಲಿ ಶೌಚಾಲಯದಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯೊಬ್ಬರ ತಾಯಿ ದೂರು ನೀಡಿದ್ದಾರೆ.

ಜಾತಿನಿಂದನೆ ಮಾಡಿದ ಶಿಕ್ಷಕಿಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತ ವಿದ್ಯಾರ್ಥಿನಿಯರ ಸಂಬಂಧಿಕರು ಮಧುರೈ-ದಿಂಡುಗಲ್ ಹೆದ್ದಾರಿ ತಡೆದು ಮತ್ತು ಚಿನ್ನಾಲಪಟ್ಟಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಪಟ್ಟ ಶಾಲೆ ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದು, ರಾಜ್ಯ ಎಸ್‌ಸಿ ಮತ್ತು ಎಸ್‌ಟಿ ಆಯೋಗವು ಬಂದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿನಿಯರ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಾಲೆಯ ಆಡಳಿತ ಮಂಡಳಿ ಗಣಿತ ಶಿಕ್ಷಕಿ ಪ್ರೇಮಲತಾರನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಅದೇ ರೀತಿ ಜಾತಿ ನಿಂದನೆ ಮಾಡಿದ ಆರೋಪ ಹೊತ್ತಿರುವ ಮತ್ತೊಬ್ಬ ಶಿಕ್ಷಕಿಗೆ ಕಡ್ಡಾಯ ವೈದ್ಯಕೀಯ ರಜೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...