Homeಮುಖಪುಟಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಪಂಚಾಯಿತಿ ಮಂಡಳಿಯ ಎಲ್ಲಾ ಸಭೆಗಳಲ್ಲಿಯೂ ಉಪಾಧ್ಯಕ್ಷರು, ಪರಿಶಿಷ್ಠ ಜಾತಿಗೆ ಸೇರಿದ ನನ್ನನ್ನು ನೆಲದ ಮೇಲೆಯೇ ಕುಳಿತುಕೊಳ್ಳುವಂತೆ ಮಾಡಿದ್ದಾರೆ’ ಎಂದು  ಗ್ರಾಮಪಂಚಾಯಿತಿ ಅಧ್ಯಕ್ಷೆ ಎಸ್.ರಾಜೇಶ್ವರಿ ಆರೋಪಿಸಿದ್ದಾರೆ.

- Advertisement -
- Advertisement -

ತಮಿಳುನಾಡಿನ ಕಡಲೂರಿನಲ್ಲಿ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೇ ಜಾತಿ ಆಧಾರದ ಮೇಲೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಪಂಚಾಯಿತಿಯ ಇನ್ನಿತರ ಸದಸ್ಯರಿಗೆ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ.

ಕಡಲೂರಿನ ತೆರ್ಕುತಿಟ್ಟೈ ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆಳವರ್ಗಕ್ಕೆ ಸೇರಿದ ಹಿನ್ನಲೆಯಲ್ಲಿ ಸದಸ್ಯರು ಅವರೊಟ್ಟಿಗೆ ಈ ರೀತಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ’ಪಂಚಾಯಿತಿ ಮಂಡಳಿಯ ಎಲ್ಲಾ ಸಭೆಗಳಲ್ಲಿಯೂ ಉಪಾಧ್ಯಕ್ಷರು, ಪರಿಶಿಷ್ಠ ಜಾತಿಗೆ ಸೇರಿದ ನನ್ನನ್ನು ನೆಲದ ಮೇಲೆಯೇ ಕುಳಿತುಕೊಳ್ಳುವಂತೆ ಮಾಡಿದ್ದಾರೆ’ ಎಂದು  ಗ್ರಾಮಪಂಚಾಯಿತಿ ಅಧ್ಯಕ್ಷೆ ಎಸ್.ರಾಜೇಶ್ವರಿ ಆರೋಪಿಸಿದ್ದಾರೆ.

ಆಗಸ್ಟ್‌ ತಿಂಗಳಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಪಂಚಾಯಿತಿ ಉಪಾಧ್ಯಕ್ಷರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಗಿದೆ. ಪಂಚಾಯಿತಿಯಲ್ಲಿ ನಡೆಯುತ್ತಿರುವ ಈ ಘಟನೆಯನ್ನು ನಮ್ಮ ಗಮನಕ್ಕೆ ತರುವಲ್ಲಿ ಅಲ್ಲಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವಿಫಲರಾಗಿದ್ದಾರೆ. ಈ ಹಿನ್ನಲೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಕಡಲೂರು ಜಿಲ್ಲಾಧಿಕಾರಿ ಚಂದ್ರಶೇಖರ್​ ಶಖಾಮುರಿ ತಿಳಿಸಿದ್ದಾರೆ. ಈ ಕುರಿತು ತನಿಖೆಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಗ್ರಾಮಪಂಚಾಯಿತಿ ಅಧ್ಯಕ್ಷೆ ಎಸ್.ರಾಜೇಶ್ವರಿ ’ನನ್ನ ಜಾತಿ ಆಧಾರದಿಂದ ಉಪಾಧ್ಯಕ್ಷರು ನನಗೆ ಸಭೆಯ ಅಧ್ಯಕ್ಷತೆ ವಹಿಸಲು ಬಿಡುವುದಿಲ್ಲ. ಯಾವುದೇ ಸಮಾರಂಭದಲ್ಲಿ ಧ್ವಜಾರೋಹಣಕ್ಕೂ ಅವಕಾಶ ನೀಡುವುದಿಲ್ಲ. ನನ್ನ ಬದಲಾಗಿ ಅವರ ತಂದೆಗೆ ಈ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ ರಾಜೇಶ್ವರಿ ಅಧ್ಯಕ್ಷೆ ಹುದ್ದೆಗೆ ಆಯ್ಕೆಯಾಗಿದ್ದರು. ತೆರ್ಕುತಿಟ್ಟೈ ಗ್ರಾಮವು ಸುಮಾರು 500 ಕುಟುಂಬಗಳನ್ನು ಒಳಗೊಂಡಿದೆ. ಅಲ್ಲಿ ಹೆಚ್ಚಾಗಿ ವನ್ನಿಯರು ಹಾಗೂ ಎಸ್‌ಸಿ ಸಮುದಾಯದ 100 ಕುಟುಂಬಗಳಿವೆ. ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಎಸ್‌ಸಿ ಸಮುದಾಯಕ್ಕೆ ಮೀಸಲಿರಿಸಲಾಗಿತ್ತು.

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಅತುಪಕ್ಕಂ ಪಂಚಾಯತ್ ಅಧ್ಯಕ್ಷ ಅರ್ಮಿಥಾಮ್ ಕೂಡ ಇದೇ ರೀತಿಯ ಅವಮಾನ ಎದುರಿಸಬೇಕಾಗಿತ್ತು. ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜವನ್ನು ಹಾರಿಸಲು ಉಪಾಧ್ಯಕ್ಷರು ಅನುಮತಿ ನೀಡಲಿಲ್ಲ ಎಂದು ಅವರು ಆರೋಪಿಸಿದ್ದರು.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...