Homeಮುಖಪುಟತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟು ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಆರು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ಜನವರಿ 22 ರ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ವರದಿಗಳು ತಿಳಿಸಿವೆ. ತನ್ನ ತಂದೆಯೊಂದಿಗೆ ಕುಡಿಯುವ ನೀರಿನ ಕ್ಯಾನ್‌ಗಳನ್ನು ತುಂಬಲು ಪ್ರದೀಪ್ ತೆರಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ತಂದೆ ಮಣಿಕಂಡನ್ (35) ಖಾಸಗಿ ಕಂಪನಿಯೊಂದರಲ್ಲಿ ಲಾರಿ ಚಾಲಕನಾಗಿದ್ದು, ತಾಯಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಪಾಲೂರು ಸಮೀಪದ ವೆಂಕಟಾಪುರ ಗ್ರಾಮದಲ್ಲಿ ಕುಟುಂಬ ವಾಸವಾಗಿದೆ. ಮಣಿಕಂಡನ್ ನೀರು ಸಂಗ್ರಹಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದು, ಈ ವೇಳೆ ಪ್ರದೀಪ್ ಜತೆಗಿದ್ದರು. ಮಣಿಕಂಡನ್ ಕ್ಯಾನ್‌ಗಳಿಗೆ ನೀರಿನ್ನು ತುಂಬಿಸುತ್ತಿದ್ದಾಗ ಪ್ರದೀಪ್ ಆಟವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಸಮಯದ ನಂತರ ಪ್ರದೀಪ್ ನಾಪತ್ತೆಯಾಗಿದ್ದು, ಮಣಿಕಂಡನ್ ಇತರರ ಸಹಾಯದಿಂದ ಆತನನ್ನು ಹುಡುಕಲು ಪ್ರಾರಂಭಿಸಿದ್ದರು. ಆದರೆ ಪ್ರದೀಪ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕಚೇರಿ ಆವರಣದಲ್ಲಿ ಮಣಿಕಂಡನ್‌ ತೆರೆದ ಸೆಪ್ಟಿಕ್ ಟ್ಯಾಂಕ್ ಅನ್ನು ಕಂಡು ಒಳಗೆ ನೋಡಿದಾಗ ಅಲ್ಲಿ ಮಗನನ್ನು ಪತ್ತೆ ಹಚ್ಚಿದ್ದರು.

ನಂತರ ಇತರರ ಸಹಾಯದಿಂದ ಮಣಿಕಂಡನ್ ಪ್ರದೀಪ್‌ನನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

“ಸೆಪ್ಟಿಕ್ ಟ್ಯಾಂಕ್ ಬಾಯಿ ಕಿರಿದಾಗಿದೆ. ಪ್ರದೀಪ್ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿರಬಹುದು ಎಂದು ಶಂಕಿಸಿದ್ದೇವೆ. ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪೊಲೀಸರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯನ್ನು ಕಾರ್ಯದರ್ಶಿ ರೇಣುಕಾ ಮತ್ತು ಪಂಪ್ ಆಪರೇಟರ್ ಗುಣಶೇಖರನ್ ನಿರ್ವಹಿಸುತ್ತಿದ್ದಾರೆ. ಘಟನೆಯ ಕುರಿತು ಚೆಂಗಲ್ಪಟ್ಟು ಜಿಲ್ಲಾಧಿಕಾರಿ ಎ.ಆರ್. ರಾಹುಲ್ ನಾಥ್‌ ಅವರಿಗೆ ಮಾಹಿತಿ ನೀಡಲಾಗಿದ್ದು, ರೇಣುಕಾ ಮತ್ತು ಗುಣಶೇಖರನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಾಲೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿರುವ ವರದಿಗಳು ಲಭ್ಯವಾಗಿಲ್ಲ.

ಇದನ್ನೂ ಓದಿ: ತೆಲಂಗಾಣ: 10ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...