Homeಮುಖಪುಟತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟು ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಆರು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ಜನವರಿ 22 ರ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ವರದಿಗಳು ತಿಳಿಸಿವೆ. ತನ್ನ ತಂದೆಯೊಂದಿಗೆ ಕುಡಿಯುವ ನೀರಿನ ಕ್ಯಾನ್‌ಗಳನ್ನು ತುಂಬಲು ಪ್ರದೀಪ್ ತೆರಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ತಂದೆ ಮಣಿಕಂಡನ್ (35) ಖಾಸಗಿ ಕಂಪನಿಯೊಂದರಲ್ಲಿ ಲಾರಿ ಚಾಲಕನಾಗಿದ್ದು, ತಾಯಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಪಾಲೂರು ಸಮೀಪದ ವೆಂಕಟಾಪುರ ಗ್ರಾಮದಲ್ಲಿ ಕುಟುಂಬ ವಾಸವಾಗಿದೆ. ಮಣಿಕಂಡನ್ ನೀರು ಸಂಗ್ರಹಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದು, ಈ ವೇಳೆ ಪ್ರದೀಪ್ ಜತೆಗಿದ್ದರು. ಮಣಿಕಂಡನ್ ಕ್ಯಾನ್‌ಗಳಿಗೆ ನೀರಿನ್ನು ತುಂಬಿಸುತ್ತಿದ್ದಾಗ ಪ್ರದೀಪ್ ಆಟವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಸಮಯದ ನಂತರ ಪ್ರದೀಪ್ ನಾಪತ್ತೆಯಾಗಿದ್ದು, ಮಣಿಕಂಡನ್ ಇತರರ ಸಹಾಯದಿಂದ ಆತನನ್ನು ಹುಡುಕಲು ಪ್ರಾರಂಭಿಸಿದ್ದರು. ಆದರೆ ಪ್ರದೀಪ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕಚೇರಿ ಆವರಣದಲ್ಲಿ ಮಣಿಕಂಡನ್‌ ತೆರೆದ ಸೆಪ್ಟಿಕ್ ಟ್ಯಾಂಕ್ ಅನ್ನು ಕಂಡು ಒಳಗೆ ನೋಡಿದಾಗ ಅಲ್ಲಿ ಮಗನನ್ನು ಪತ್ತೆ ಹಚ್ಚಿದ್ದರು.

ನಂತರ ಇತರರ ಸಹಾಯದಿಂದ ಮಣಿಕಂಡನ್ ಪ್ರದೀಪ್‌ನನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

“ಸೆಪ್ಟಿಕ್ ಟ್ಯಾಂಕ್ ಬಾಯಿ ಕಿರಿದಾಗಿದೆ. ಪ್ರದೀಪ್ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿರಬಹುದು ಎಂದು ಶಂಕಿಸಿದ್ದೇವೆ. ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪೊಲೀಸರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯನ್ನು ಕಾರ್ಯದರ್ಶಿ ರೇಣುಕಾ ಮತ್ತು ಪಂಪ್ ಆಪರೇಟರ್ ಗುಣಶೇಖರನ್ ನಿರ್ವಹಿಸುತ್ತಿದ್ದಾರೆ. ಘಟನೆಯ ಕುರಿತು ಚೆಂಗಲ್ಪಟ್ಟು ಜಿಲ್ಲಾಧಿಕಾರಿ ಎ.ಆರ್. ರಾಹುಲ್ ನಾಥ್‌ ಅವರಿಗೆ ಮಾಹಿತಿ ನೀಡಲಾಗಿದ್ದು, ರೇಣುಕಾ ಮತ್ತು ಗುಣಶೇಖರನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಾಲೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿರುವ ವರದಿಗಳು ಲಭ್ಯವಾಗಿಲ್ಲ.

ಇದನ್ನೂ ಓದಿ: ತೆಲಂಗಾಣ: 10ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...