Homeಮುಖಪುಟತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟು ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಆರು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ಜನವರಿ 22 ರ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ವರದಿಗಳು ತಿಳಿಸಿವೆ. ತನ್ನ ತಂದೆಯೊಂದಿಗೆ ಕುಡಿಯುವ ನೀರಿನ ಕ್ಯಾನ್‌ಗಳನ್ನು ತುಂಬಲು ಪ್ರದೀಪ್ ತೆರಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ತಂದೆ ಮಣಿಕಂಡನ್ (35) ಖಾಸಗಿ ಕಂಪನಿಯೊಂದರಲ್ಲಿ ಲಾರಿ ಚಾಲಕನಾಗಿದ್ದು, ತಾಯಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಪಾಲೂರು ಸಮೀಪದ ವೆಂಕಟಾಪುರ ಗ್ರಾಮದಲ್ಲಿ ಕುಟುಂಬ ವಾಸವಾಗಿದೆ. ಮಣಿಕಂಡನ್ ನೀರು ಸಂಗ್ರಹಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದು, ಈ ವೇಳೆ ಪ್ರದೀಪ್ ಜತೆಗಿದ್ದರು. ಮಣಿಕಂಡನ್ ಕ್ಯಾನ್‌ಗಳಿಗೆ ನೀರಿನ್ನು ತುಂಬಿಸುತ್ತಿದ್ದಾಗ ಪ್ರದೀಪ್ ಆಟವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಸಮಯದ ನಂತರ ಪ್ರದೀಪ್ ನಾಪತ್ತೆಯಾಗಿದ್ದು, ಮಣಿಕಂಡನ್ ಇತರರ ಸಹಾಯದಿಂದ ಆತನನ್ನು ಹುಡುಕಲು ಪ್ರಾರಂಭಿಸಿದ್ದರು. ಆದರೆ ಪ್ರದೀಪ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕಚೇರಿ ಆವರಣದಲ್ಲಿ ಮಣಿಕಂಡನ್‌ ತೆರೆದ ಸೆಪ್ಟಿಕ್ ಟ್ಯಾಂಕ್ ಅನ್ನು ಕಂಡು ಒಳಗೆ ನೋಡಿದಾಗ ಅಲ್ಲಿ ಮಗನನ್ನು ಪತ್ತೆ ಹಚ್ಚಿದ್ದರು.

ನಂತರ ಇತರರ ಸಹಾಯದಿಂದ ಮಣಿಕಂಡನ್ ಪ್ರದೀಪ್‌ನನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

“ಸೆಪ್ಟಿಕ್ ಟ್ಯಾಂಕ್ ಬಾಯಿ ಕಿರಿದಾಗಿದೆ. ಪ್ರದೀಪ್ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿರಬಹುದು ಎಂದು ಶಂಕಿಸಿದ್ದೇವೆ. ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪೊಲೀಸರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯನ್ನು ಕಾರ್ಯದರ್ಶಿ ರೇಣುಕಾ ಮತ್ತು ಪಂಪ್ ಆಪರೇಟರ್ ಗುಣಶೇಖರನ್ ನಿರ್ವಹಿಸುತ್ತಿದ್ದಾರೆ. ಘಟನೆಯ ಕುರಿತು ಚೆಂಗಲ್ಪಟ್ಟು ಜಿಲ್ಲಾಧಿಕಾರಿ ಎ.ಆರ್. ರಾಹುಲ್ ನಾಥ್‌ ಅವರಿಗೆ ಮಾಹಿತಿ ನೀಡಲಾಗಿದ್ದು, ರೇಣುಕಾ ಮತ್ತು ಗುಣಶೇಖರನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಾಲೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿರುವ ವರದಿಗಳು ಲಭ್ಯವಾಗಿಲ್ಲ.

ಇದನ್ನೂ ಓದಿ: ತೆಲಂಗಾಣ: 10ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....