Homeಮುಖಪುಟತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟು ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಆರು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ಜನವರಿ 22 ರ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ವರದಿಗಳು ತಿಳಿಸಿವೆ. ತನ್ನ ತಂದೆಯೊಂದಿಗೆ ಕುಡಿಯುವ ನೀರಿನ ಕ್ಯಾನ್‌ಗಳನ್ನು ತುಂಬಲು ಪ್ರದೀಪ್ ತೆರಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ತಂದೆ ಮಣಿಕಂಡನ್ (35) ಖಾಸಗಿ ಕಂಪನಿಯೊಂದರಲ್ಲಿ ಲಾರಿ ಚಾಲಕನಾಗಿದ್ದು, ತಾಯಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಪಾಲೂರು ಸಮೀಪದ ವೆಂಕಟಾಪುರ ಗ್ರಾಮದಲ್ಲಿ ಕುಟುಂಬ ವಾಸವಾಗಿದೆ. ಮಣಿಕಂಡನ್ ನೀರು ಸಂಗ್ರಹಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದು, ಈ ವೇಳೆ ಪ್ರದೀಪ್ ಜತೆಗಿದ್ದರು. ಮಣಿಕಂಡನ್ ಕ್ಯಾನ್‌ಗಳಿಗೆ ನೀರಿನ್ನು ತುಂಬಿಸುತ್ತಿದ್ದಾಗ ಪ್ರದೀಪ್ ಆಟವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಸಮಯದ ನಂತರ ಪ್ರದೀಪ್ ನಾಪತ್ತೆಯಾಗಿದ್ದು, ಮಣಿಕಂಡನ್ ಇತರರ ಸಹಾಯದಿಂದ ಆತನನ್ನು ಹುಡುಕಲು ಪ್ರಾರಂಭಿಸಿದ್ದರು. ಆದರೆ ಪ್ರದೀಪ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕಚೇರಿ ಆವರಣದಲ್ಲಿ ಮಣಿಕಂಡನ್‌ ತೆರೆದ ಸೆಪ್ಟಿಕ್ ಟ್ಯಾಂಕ್ ಅನ್ನು ಕಂಡು ಒಳಗೆ ನೋಡಿದಾಗ ಅಲ್ಲಿ ಮಗನನ್ನು ಪತ್ತೆ ಹಚ್ಚಿದ್ದರು.

ನಂತರ ಇತರರ ಸಹಾಯದಿಂದ ಮಣಿಕಂಡನ್ ಪ್ರದೀಪ್‌ನನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

“ಸೆಪ್ಟಿಕ್ ಟ್ಯಾಂಕ್ ಬಾಯಿ ಕಿರಿದಾಗಿದೆ. ಪ್ರದೀಪ್ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿರಬಹುದು ಎಂದು ಶಂಕಿಸಿದ್ದೇವೆ. ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪೊಲೀಸರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯನ್ನು ಕಾರ್ಯದರ್ಶಿ ರೇಣುಕಾ ಮತ್ತು ಪಂಪ್ ಆಪರೇಟರ್ ಗುಣಶೇಖರನ್ ನಿರ್ವಹಿಸುತ್ತಿದ್ದಾರೆ. ಘಟನೆಯ ಕುರಿತು ಚೆಂಗಲ್ಪಟ್ಟು ಜಿಲ್ಲಾಧಿಕಾರಿ ಎ.ಆರ್. ರಾಹುಲ್ ನಾಥ್‌ ಅವರಿಗೆ ಮಾಹಿತಿ ನೀಡಲಾಗಿದ್ದು, ರೇಣುಕಾ ಮತ್ತು ಗುಣಶೇಖರನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಾಲೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿರುವ ವರದಿಗಳು ಲಭ್ಯವಾಗಿಲ್ಲ.

ಇದನ್ನೂ ಓದಿ: ತೆಲಂಗಾಣ: 10ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...