Homeಮುಖಪುಟತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟು ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಆರು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ಜನವರಿ 22 ರ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ವರದಿಗಳು ತಿಳಿಸಿವೆ. ತನ್ನ ತಂದೆಯೊಂದಿಗೆ ಕುಡಿಯುವ ನೀರಿನ ಕ್ಯಾನ್‌ಗಳನ್ನು ತುಂಬಲು ಪ್ರದೀಪ್ ತೆರಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ತಂದೆ ಮಣಿಕಂಡನ್ (35) ಖಾಸಗಿ ಕಂಪನಿಯೊಂದರಲ್ಲಿ ಲಾರಿ ಚಾಲಕನಾಗಿದ್ದು, ತಾಯಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಪಾಲೂರು ಸಮೀಪದ ವೆಂಕಟಾಪುರ ಗ್ರಾಮದಲ್ಲಿ ಕುಟುಂಬ ವಾಸವಾಗಿದೆ. ಮಣಿಕಂಡನ್ ನೀರು ಸಂಗ್ರಹಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದು, ಈ ವೇಳೆ ಪ್ರದೀಪ್ ಜತೆಗಿದ್ದರು. ಮಣಿಕಂಡನ್ ಕ್ಯಾನ್‌ಗಳಿಗೆ ನೀರಿನ್ನು ತುಂಬಿಸುತ್ತಿದ್ದಾಗ ಪ್ರದೀಪ್ ಆಟವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಸಮಯದ ನಂತರ ಪ್ರದೀಪ್ ನಾಪತ್ತೆಯಾಗಿದ್ದು, ಮಣಿಕಂಡನ್ ಇತರರ ಸಹಾಯದಿಂದ ಆತನನ್ನು ಹುಡುಕಲು ಪ್ರಾರಂಭಿಸಿದ್ದರು. ಆದರೆ ಪ್ರದೀಪ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕಚೇರಿ ಆವರಣದಲ್ಲಿ ಮಣಿಕಂಡನ್‌ ತೆರೆದ ಸೆಪ್ಟಿಕ್ ಟ್ಯಾಂಕ್ ಅನ್ನು ಕಂಡು ಒಳಗೆ ನೋಡಿದಾಗ ಅಲ್ಲಿ ಮಗನನ್ನು ಪತ್ತೆ ಹಚ್ಚಿದ್ದರು.

ನಂತರ ಇತರರ ಸಹಾಯದಿಂದ ಮಣಿಕಂಡನ್ ಪ್ರದೀಪ್‌ನನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

“ಸೆಪ್ಟಿಕ್ ಟ್ಯಾಂಕ್ ಬಾಯಿ ಕಿರಿದಾಗಿದೆ. ಪ್ರದೀಪ್ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿರಬಹುದು ಎಂದು ಶಂಕಿಸಿದ್ದೇವೆ. ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪೊಲೀಸರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯನ್ನು ಕಾರ್ಯದರ್ಶಿ ರೇಣುಕಾ ಮತ್ತು ಪಂಪ್ ಆಪರೇಟರ್ ಗುಣಶೇಖರನ್ ನಿರ್ವಹಿಸುತ್ತಿದ್ದಾರೆ. ಘಟನೆಯ ಕುರಿತು ಚೆಂಗಲ್ಪಟ್ಟು ಜಿಲ್ಲಾಧಿಕಾರಿ ಎ.ಆರ್. ರಾಹುಲ್ ನಾಥ್‌ ಅವರಿಗೆ ಮಾಹಿತಿ ನೀಡಲಾಗಿದ್ದು, ರೇಣುಕಾ ಮತ್ತು ಗುಣಶೇಖರನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಾಲೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿರುವ ವರದಿಗಳು ಲಭ್ಯವಾಗಿಲ್ಲ.

ಇದನ್ನೂ ಓದಿ: ತೆಲಂಗಾಣ: 10ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...