Homeಮುಖಪುಟತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಉದಯನಿಧಿಗೆ ಟಿಕೆಟ್ ಬಗ್ಗೆ ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.

- Advertisement -
- Advertisement -

ಪಂಚರಾಜ್ಯ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷಗಳು ಬಿರುಸಿನ ತಯಾರಿ ನಡೆಸಿವೆ. ತಮಿಳುನಾಡಿನ ಡಿಎಂಕೆ ಯುವ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಟಿಕೆಟ್‌ಗಾಗಿ ಸಂದರ್ಶನ ಕೂಡ ಎದುರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ, ಚೆಪಾಕ್-ತಿರುವಳ್ಳಿಕೇಣಿ ಕ್ಷೇತ್ರದಿಂದ ಸ್ಪರ್ಧಿಸಲು ಉದಯನಿಧಿ ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಊಹಪೋಹಗಳ ನಂತರ ಅವರ ಸುತ್ತ ವಿವಿಧ ಟೀಕೆಗಳು ಮತ್ತು ಪ್ರಶ್ನೆಗಳು ಎದ್ದಿವೆ. ಪ್ರತಿಪಕ್ಷಗಳು ಡಿಎಂಕೆ ವಿರುದ್ಧ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದು, ಇದು ಉತ್ತರಾಧಿಕಾರ ರಾಜಕೀಯ ಮತ್ತು ಕುಟುಂಬ ರಾಜಕಾರಣವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದೆ. ಇದನ್ನು ಕೊನೆಗೊಳಿಸಲು, ಉದಯನಿಧಿ ಸ್ಟಾಲಿನ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವರದಿಯಾಗಿತ್ತು.

ಆದರೆ, ಶನಿವಾರ ತಮಿಳುನಾಡಿನ ಚೆನ್ನೈನಲ್ಲಿರುವ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಉದಯನಿಧಿ ಸ್ಟಾಲಿನ್, ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡಿದ್ದಾರೆ. ಡಿಎಂಕೆ ಪಕ್ಷದ ಟಿಕೆಟ್ ಪಡೆದುಕೊಳ್ಳುವ ಆಕಾಂಕ್ಷಿಗಳು ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ಪ್ರಮುಖ ಡಿಎಂಕೆ ಚುನಾವಣಾ ಅಧಿಕಾರಿಗಳು ಉದಯನಿಧಿ ಸ್ಪರ್ಧೆ 100% ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಏನು ಬೇಕಾದರೂ ಆಗುವುದರಿಂದ, ಡಿಎಂಕೆ ಯುವ ಕಾರ್ಯದರ್ಶಿ ವಿರುದ್ಧ ಪ್ರತಿಪಕ್ಷಗಳು ಅವರನ್ನು ಸೋಲಿಸಲು ಅಗತ್ಯವಾದ ಎಲ್ಲ ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

ದಿವಂಗತ ಕರುಣಾನಿಧಿಯವರ ಮೊಮ್ಮಗ ಸ್ಪರ್ಧಿಸಲು ಯೋಜಿಸಿದ್ದಾರೆ ಎನ್ನಲಾದ ಚೆಪಾಕ್-ತಿರುವಳ್ಳಿಕೆಣಿ ಕ್ಷೇತ್ರದಲ್ಲಿ, ಡಿಎಂಕೆಯ ಪ್ರಮುಖ ಪ್ರತಿಸ್ಪರ್ಧಿ ಪಕ್ಷ ಎಐಎಡಿಎಂಕೆ-ಬಿಜೆಪಿ ಮೈತ್ರಿಯ ಅಭ್ಯರ್ಥಿ ನಟಿ ಖುಷ್ಬೂ ಅವರನ್ನು ಕಣಕ್ಕಿಳಿಸಲು ಯೋಜಿಸುತ್ತಿದೆ.

ಸಂದರ್ಶನದಲ್ಲಿ ಭಾಗಿಯಾಗಿರುವ ಕುರಿತು ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗೆ, “ಪಕ್ಷದ ಅನೇಕ ಕಾರ್ಯಕರ್ತರು ಸಂದರ್ಶನದಲ್ಲಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಭೇಟಿಯಾಗಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ತಂದೆ-ಮಗನ ಸಂಬಂಧ ಏನೇ ಇರಲಿ, ಪಕ್ಷದ ಕಾರ್ಯಕರ್ತರಾಗಿ ಉದಯನಿಧಿ ಸ್ಟಾಲಿನ್ ಸಂದರ್ಶನಕ್ಕೆ ಹಾಜರಾಗಬೇಕಾಗಿತ್ತು. ಆ ಭಾವನೆಯಿಂದ ಉದಯನಿಧಿ ಅವರು ಸಂದರ್ಶನದಲ್ಲಿ ಭಾಗವಹಿಸಿದರು” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಪಕ್ಷದಲ್ಲಿ ಈವರೆಗೆ ಕರುಣಾನಿಧಿ ಮೊಮ್ಮಗನಿಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರವಾಗಿಲ್ಲ. ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.


ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...