Homeಮುಖಪುಟತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಉದಯನಿಧಿಗೆ ಟಿಕೆಟ್ ಬಗ್ಗೆ ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.

- Advertisement -
- Advertisement -

ಪಂಚರಾಜ್ಯ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷಗಳು ಬಿರುಸಿನ ತಯಾರಿ ನಡೆಸಿವೆ. ತಮಿಳುನಾಡಿನ ಡಿಎಂಕೆ ಯುವ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಟಿಕೆಟ್‌ಗಾಗಿ ಸಂದರ್ಶನ ಕೂಡ ಎದುರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ, ಚೆಪಾಕ್-ತಿರುವಳ್ಳಿಕೇಣಿ ಕ್ಷೇತ್ರದಿಂದ ಸ್ಪರ್ಧಿಸಲು ಉದಯನಿಧಿ ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಊಹಪೋಹಗಳ ನಂತರ ಅವರ ಸುತ್ತ ವಿವಿಧ ಟೀಕೆಗಳು ಮತ್ತು ಪ್ರಶ್ನೆಗಳು ಎದ್ದಿವೆ. ಪ್ರತಿಪಕ್ಷಗಳು ಡಿಎಂಕೆ ವಿರುದ್ಧ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದು, ಇದು ಉತ್ತರಾಧಿಕಾರ ರಾಜಕೀಯ ಮತ್ತು ಕುಟುಂಬ ರಾಜಕಾರಣವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದೆ. ಇದನ್ನು ಕೊನೆಗೊಳಿಸಲು, ಉದಯನಿಧಿ ಸ್ಟಾಲಿನ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವರದಿಯಾಗಿತ್ತು.

ಆದರೆ, ಶನಿವಾರ ತಮಿಳುನಾಡಿನ ಚೆನ್ನೈನಲ್ಲಿರುವ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಉದಯನಿಧಿ ಸ್ಟಾಲಿನ್, ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡಿದ್ದಾರೆ. ಡಿಎಂಕೆ ಪಕ್ಷದ ಟಿಕೆಟ್ ಪಡೆದುಕೊಳ್ಳುವ ಆಕಾಂಕ್ಷಿಗಳು ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ಪ್ರಮುಖ ಡಿಎಂಕೆ ಚುನಾವಣಾ ಅಧಿಕಾರಿಗಳು ಉದಯನಿಧಿ ಸ್ಪರ್ಧೆ 100% ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಏನು ಬೇಕಾದರೂ ಆಗುವುದರಿಂದ, ಡಿಎಂಕೆ ಯುವ ಕಾರ್ಯದರ್ಶಿ ವಿರುದ್ಧ ಪ್ರತಿಪಕ್ಷಗಳು ಅವರನ್ನು ಸೋಲಿಸಲು ಅಗತ್ಯವಾದ ಎಲ್ಲ ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

ದಿವಂಗತ ಕರುಣಾನಿಧಿಯವರ ಮೊಮ್ಮಗ ಸ್ಪರ್ಧಿಸಲು ಯೋಜಿಸಿದ್ದಾರೆ ಎನ್ನಲಾದ ಚೆಪಾಕ್-ತಿರುವಳ್ಳಿಕೆಣಿ ಕ್ಷೇತ್ರದಲ್ಲಿ, ಡಿಎಂಕೆಯ ಪ್ರಮುಖ ಪ್ರತಿಸ್ಪರ್ಧಿ ಪಕ್ಷ ಎಐಎಡಿಎಂಕೆ-ಬಿಜೆಪಿ ಮೈತ್ರಿಯ ಅಭ್ಯರ್ಥಿ ನಟಿ ಖುಷ್ಬೂ ಅವರನ್ನು ಕಣಕ್ಕಿಳಿಸಲು ಯೋಜಿಸುತ್ತಿದೆ.

ಸಂದರ್ಶನದಲ್ಲಿ ಭಾಗಿಯಾಗಿರುವ ಕುರಿತು ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗೆ, “ಪಕ್ಷದ ಅನೇಕ ಕಾರ್ಯಕರ್ತರು ಸಂದರ್ಶನದಲ್ಲಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಭೇಟಿಯಾಗಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ತಂದೆ-ಮಗನ ಸಂಬಂಧ ಏನೇ ಇರಲಿ, ಪಕ್ಷದ ಕಾರ್ಯಕರ್ತರಾಗಿ ಉದಯನಿಧಿ ಸ್ಟಾಲಿನ್ ಸಂದರ್ಶನಕ್ಕೆ ಹಾಜರಾಗಬೇಕಾಗಿತ್ತು. ಆ ಭಾವನೆಯಿಂದ ಉದಯನಿಧಿ ಅವರು ಸಂದರ್ಶನದಲ್ಲಿ ಭಾಗವಹಿಸಿದರು” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಪಕ್ಷದಲ್ಲಿ ಈವರೆಗೆ ಕರುಣಾನಿಧಿ ಮೊಮ್ಮಗನಿಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರವಾಗಿಲ್ಲ. ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.


ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...