Homeಮುಖಪುಟತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ತಮಿಳುನಾಡು ಚುನಾವಣೆ: ಟಿಕೆಟ್‌ಗಾಗಿ ಸಂದರ್ಶನ ಎದುರಿಸಿದ ಉದಯಾನಿಧಿ ಸ್ಟಾಲಿನ್?

ಉದಯನಿಧಿಗೆ ಟಿಕೆಟ್ ಬಗ್ಗೆ ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.

- Advertisement -
- Advertisement -

ಪಂಚರಾಜ್ಯ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷಗಳು ಬಿರುಸಿನ ತಯಾರಿ ನಡೆಸಿವೆ. ತಮಿಳುನಾಡಿನ ಡಿಎಂಕೆ ಯುವ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಟಿಕೆಟ್‌ಗಾಗಿ ಸಂದರ್ಶನ ಕೂಡ ಎದುರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ, ಚೆಪಾಕ್-ತಿರುವಳ್ಳಿಕೇಣಿ ಕ್ಷೇತ್ರದಿಂದ ಸ್ಪರ್ಧಿಸಲು ಉದಯನಿಧಿ ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಊಹಪೋಹಗಳ ನಂತರ ಅವರ ಸುತ್ತ ವಿವಿಧ ಟೀಕೆಗಳು ಮತ್ತು ಪ್ರಶ್ನೆಗಳು ಎದ್ದಿವೆ. ಪ್ರತಿಪಕ್ಷಗಳು ಡಿಎಂಕೆ ವಿರುದ್ಧ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದು, ಇದು ಉತ್ತರಾಧಿಕಾರ ರಾಜಕೀಯ ಮತ್ತು ಕುಟುಂಬ ರಾಜಕಾರಣವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದೆ. ಇದನ್ನು ಕೊನೆಗೊಳಿಸಲು, ಉದಯನಿಧಿ ಸ್ಟಾಲಿನ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವರದಿಯಾಗಿತ್ತು.

ಆದರೆ, ಶನಿವಾರ ತಮಿಳುನಾಡಿನ ಚೆನ್ನೈನಲ್ಲಿರುವ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಉದಯನಿಧಿ ಸ್ಟಾಲಿನ್, ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡಿದ್ದಾರೆ. ಡಿಎಂಕೆ ಪಕ್ಷದ ಟಿಕೆಟ್ ಪಡೆದುಕೊಳ್ಳುವ ಆಕಾಂಕ್ಷಿಗಳು ಡಿಎಂಕೆ ಚುನಾವಣಾ ಸಮಿತಿಯ ಎದುರು ಹಾಜರಾಗಿ ಸಂದರ್ಶನ ನೀಡುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ಪ್ರಮುಖ ಡಿಎಂಕೆ ಚುನಾವಣಾ ಅಧಿಕಾರಿಗಳು ಉದಯನಿಧಿ ಸ್ಪರ್ಧೆ 100% ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಏನು ಬೇಕಾದರೂ ಆಗುವುದರಿಂದ, ಡಿಎಂಕೆ ಯುವ ಕಾರ್ಯದರ್ಶಿ ವಿರುದ್ಧ ಪ್ರತಿಪಕ್ಷಗಳು ಅವರನ್ನು ಸೋಲಿಸಲು ಅಗತ್ಯವಾದ ಎಲ್ಲ ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

ದಿವಂಗತ ಕರುಣಾನಿಧಿಯವರ ಮೊಮ್ಮಗ ಸ್ಪರ್ಧಿಸಲು ಯೋಜಿಸಿದ್ದಾರೆ ಎನ್ನಲಾದ ಚೆಪಾಕ್-ತಿರುವಳ್ಳಿಕೆಣಿ ಕ್ಷೇತ್ರದಲ್ಲಿ, ಡಿಎಂಕೆಯ ಪ್ರಮುಖ ಪ್ರತಿಸ್ಪರ್ಧಿ ಪಕ್ಷ ಎಐಎಡಿಎಂಕೆ-ಬಿಜೆಪಿ ಮೈತ್ರಿಯ ಅಭ್ಯರ್ಥಿ ನಟಿ ಖುಷ್ಬೂ ಅವರನ್ನು ಕಣಕ್ಕಿಳಿಸಲು ಯೋಜಿಸುತ್ತಿದೆ.

ಸಂದರ್ಶನದಲ್ಲಿ ಭಾಗಿಯಾಗಿರುವ ಕುರಿತು ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗೆ, “ಪಕ್ಷದ ಅನೇಕ ಕಾರ್ಯಕರ್ತರು ಸಂದರ್ಶನದಲ್ಲಿ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಭೇಟಿಯಾಗಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ತಂದೆ-ಮಗನ ಸಂಬಂಧ ಏನೇ ಇರಲಿ, ಪಕ್ಷದ ಕಾರ್ಯಕರ್ತರಾಗಿ ಉದಯನಿಧಿ ಸ್ಟಾಲಿನ್ ಸಂದರ್ಶನಕ್ಕೆ ಹಾಜರಾಗಬೇಕಾಗಿತ್ತು. ಆ ಭಾವನೆಯಿಂದ ಉದಯನಿಧಿ ಅವರು ಸಂದರ್ಶನದಲ್ಲಿ ಭಾಗವಹಿಸಿದರು” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಪಕ್ಷದಲ್ಲಿ ಈವರೆಗೆ ಕರುಣಾನಿಧಿ ಮೊಮ್ಮಗನಿಗೆ ಟಿಕೆಟ್ ನೀಡುವ ಬಗ್ಗೆ ನಿರ್ಧಾರವಾಗಿಲ್ಲ. ಪಕ್ಷದಿಂದ ಯಾವುದೇ ಅಧಿಕೃತ ಘೋಷಣೆಗಳು ಬಂದಿಲ್ಲ. ಆದರೆ ಪ್ರತಿಪಕ್ಷಗಳು ಉದಯನಿಧಿ ವಿರುದ್ಧ ಈಗಾಗಲೇ ಹಲವು ಯೋಜನೆಗಳನ್ನು ಮಾಡಿಕೊಂಡಿವೆ.


ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...