Homeರಾಜಕೀಯತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

- Advertisement -
- Advertisement -

ದ್ರಾವಿಡ ಮುನ್ನೇತ್ರ ಕಳಗಂ ಸರ್ಕಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಭಾರತದ ರಾಷ್ಟ್ರಪತಿಗಳಿಗೆ ಸಲ್ಲಿಸಲಾದ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ರಾಜ್ಯದ ಎಲ್ಲಾ ಪಕ್ಷಗಳಲ್ಲಿರುವ ‘ಸಮಾನ ಮನಸ್ಸಿನ’ ಸಂಸದರನ್ನು ಒತ್ತಾಯಿಸಿದೆ.

ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಂಸತ್ತಿನ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದ್ದು, ಇತರೆ ಪಕ್ಷಗಳು ಈ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಯೊಂದು ದೇಶವೂ ಒಂದಲ್ಲ ಒಂದು ಧರ್ಮದ ಮೇಲೆ ಅವಲಂಬಿತವಾಗಿದ್ದು, ಭಾರತ ಕೂಡಾ ಇದಕ್ಕೆ ಹೊರತಾಗಿಲ್ಲ ಎಂಬ ರಾಜ್ಯಪಾಲ ರವಿ ಅವರ ಇತ್ತೀಚಿನ ಹೇಳಿಕೆಯನ್ನು ಟೀಕಿಸಿ 11 ರಾಜಕೀಯ ಪಕ್ಷಗಳು ಜಂಟಿ ಹೇಳಿಕೆ ನೀಡಿದ ಎರಡು ದಿನಗಳ ನಂತರ ದ್ರಾವಿಡ ಮುನ್ನೇತ್ರ ಕಳಗಂ ಇತರೆ ಪಕ್ಷಗಳ ಸಂಸದರನ್ನು ವಿನಂತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉಚಿತ ಕೊಡುಗೆ ಚರ್ಚೆ; ಅಭಿವೃದ್ಧಿ ಜಿಡಿಪಿ ಮಾತ್ರವಾದಾಗ ಅನ್‌ಪ್ರೊಡಕ್ಟಿವ್ ಆಗುವ ಸವಲತ್ತುಗಳು

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರ್.ಎನ್. ರವಿ ಅವರು ತಮಿಳುನಾಡು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದರ ನಂತರ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಸರ್ಕಾರದೊಂದಿಗೆ ಸಂಘರ್ಷದಲ್ಲೆ ನಡೆಸುತ್ತಿದ್ದಾರೆ.

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಪರೀಕ್ಷೆಯನ್ನು ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಫೆಬ್ರವರಿಯಲ್ಲಿ ಮರುಪರಿಶೀಲನೆಗಾಗಿ ಅಸೆಂಬ್ಲಿಗೆ ಹಿಂದಿರುಗಿಸಿದ್ದರು. 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

NEET ನ ಪ್ರಶ್ನೆ ಪತ್ರಿಕೆಯು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಭಿನ್ನವಾಗಿದೆ. ನೀಟ್‌ ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಈ ಪರೀಕ್ಷೆಯನ್ನು ವಿರೋಧಿಸುತ್ತಿದೆ.

ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರ್ಬಲಗೊಳಿಸಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಆರೋಪಿಸಿತ್ತು.

ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ತಮಿಳುನಾಡಿಗೆ ರಾಜ್ಯಪಾಲರಾಗಿ ಆಗಮಿಸುವ ಮೊದಲು, ರವಿ ಅವರು ನಾಗಾಲ್ಯಾಂಡ್‌ನ ರಾಜ್ಯಪಾಲರಾಗಿದ್ದರು ಮತ್ತು ನಾಗಾ ಶಾಂತಿ ಮಾತುಕತೆಗೆ ಕೇಂದ್ರದ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.  2020 ರಲ್ಲಿ ಕೇಂದ್ರ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲಿಮ್ (ಇಸಾಕ್-ಮುಯಿವಾ) ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡು, ಸಂವಾದಕರಾಗಿದ್ದ ರವಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...