Homeರಾಜಕೀಯತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

- Advertisement -
- Advertisement -

ದ್ರಾವಿಡ ಮುನ್ನೇತ್ರ ಕಳಗಂ ಸರ್ಕಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಭಾರತದ ರಾಷ್ಟ್ರಪತಿಗಳಿಗೆ ಸಲ್ಲಿಸಲಾದ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ರಾಜ್ಯದ ಎಲ್ಲಾ ಪಕ್ಷಗಳಲ್ಲಿರುವ ‘ಸಮಾನ ಮನಸ್ಸಿನ’ ಸಂಸದರನ್ನು ಒತ್ತಾಯಿಸಿದೆ.

ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಂಸತ್ತಿನ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದ್ದು, ಇತರೆ ಪಕ್ಷಗಳು ಈ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಯೊಂದು ದೇಶವೂ ಒಂದಲ್ಲ ಒಂದು ಧರ್ಮದ ಮೇಲೆ ಅವಲಂಬಿತವಾಗಿದ್ದು, ಭಾರತ ಕೂಡಾ ಇದಕ್ಕೆ ಹೊರತಾಗಿಲ್ಲ ಎಂಬ ರಾಜ್ಯಪಾಲ ರವಿ ಅವರ ಇತ್ತೀಚಿನ ಹೇಳಿಕೆಯನ್ನು ಟೀಕಿಸಿ 11 ರಾಜಕೀಯ ಪಕ್ಷಗಳು ಜಂಟಿ ಹೇಳಿಕೆ ನೀಡಿದ ಎರಡು ದಿನಗಳ ನಂತರ ದ್ರಾವಿಡ ಮುನ್ನೇತ್ರ ಕಳಗಂ ಇತರೆ ಪಕ್ಷಗಳ ಸಂಸದರನ್ನು ವಿನಂತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉಚಿತ ಕೊಡುಗೆ ಚರ್ಚೆ; ಅಭಿವೃದ್ಧಿ ಜಿಡಿಪಿ ಮಾತ್ರವಾದಾಗ ಅನ್‌ಪ್ರೊಡಕ್ಟಿವ್ ಆಗುವ ಸವಲತ್ತುಗಳು

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರ್.ಎನ್. ರವಿ ಅವರು ತಮಿಳುನಾಡು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದರ ನಂತರ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಸರ್ಕಾರದೊಂದಿಗೆ ಸಂಘರ್ಷದಲ್ಲೆ ನಡೆಸುತ್ತಿದ್ದಾರೆ.

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಪರೀಕ್ಷೆಯನ್ನು ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಫೆಬ್ರವರಿಯಲ್ಲಿ ಮರುಪರಿಶೀಲನೆಗಾಗಿ ಅಸೆಂಬ್ಲಿಗೆ ಹಿಂದಿರುಗಿಸಿದ್ದರು. 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

NEET ನ ಪ್ರಶ್ನೆ ಪತ್ರಿಕೆಯು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಭಿನ್ನವಾಗಿದೆ. ನೀಟ್‌ ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಈ ಪರೀಕ್ಷೆಯನ್ನು ವಿರೋಧಿಸುತ್ತಿದೆ.

ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರ್ಬಲಗೊಳಿಸಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಆರೋಪಿಸಿತ್ತು.

ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ತಮಿಳುನಾಡಿಗೆ ರಾಜ್ಯಪಾಲರಾಗಿ ಆಗಮಿಸುವ ಮೊದಲು, ರವಿ ಅವರು ನಾಗಾಲ್ಯಾಂಡ್‌ನ ರಾಜ್ಯಪಾಲರಾಗಿದ್ದರು ಮತ್ತು ನಾಗಾ ಶಾಂತಿ ಮಾತುಕತೆಗೆ ಕೇಂದ್ರದ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.  2020 ರಲ್ಲಿ ಕೇಂದ್ರ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲಿಮ್ (ಇಸಾಕ್-ಮುಯಿವಾ) ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡು, ಸಂವಾದಕರಾಗಿದ್ದ ರವಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....