Homeಮುಖಪುಟನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ಪ್ರಣಾಳಿಕೆಯಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಡಾಟಾ ಕಾರ್ಡ್‌ನೊಂದಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್‌ಗಳು ಮತ್ತು ರಾಜ್ಯದಲ್ಲಿ 75% ದಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಒದಗಿಸುವ ಕಾನೂನು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.

- Advertisement -
- Advertisement -

ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಮಿಳುನಾಡಿನ ಪ್ರತಿಪಕ್ಷ ಡಿಎಂಕೆ ಶನಿವಾರ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಡಾಟಾ ಕಾರ್ಡ್‌ನೊಂದಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್‌ಗಳು ಮತ್ತು ರಾಜ್ಯದಲ್ಲಿ 75% ದಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಒದಗಿಸುವ ಕಾನೂನು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.

ಪ್ರಮುಖ ಹಿಂದೂ ದೇವಾಲಯಗಳಿಗೆ ತೀರ್ಥಯಾತ್ರೆಗೆ ಹೋಗುವ ಒಂದು ಲಕ್ಷ ಜನರಿಗೆ 25 ಸಾವಿರ ರೂ.ಗಳ ಆರ್ಥಿಕ ನೆರವು, ಹೆರಿಗೆ ರಜೆ ಅವಧಿ ಮತ್ತು ನೆರವು ಹೆಚ್ಚಳ, ಇಂಧನ ಬೆಲೆಯಲ್ಲಿ ಕಡಿತ ಮತ್ತು ನೀಟ್ ಅನ್ನು ನಿಷೇಧಿಸುವ ಭರವಸೆಯನ್ನು ಡಿಎಂಕೆ ನೀಡಿದೆ.

ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಪಕ್ಷದ ನಾಯಕ ಸ್ಟಾಲಿನ್, ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ, ಮೊದಲ ತಲೆಮಾರಿನ ಪದವೀಧರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಆದ್ಯತೆ ನೀಡಲಾಗುವುದು, ಖಾಸಗಿ ವಲಯದಲ್ಲಿ ಮೀಸಲಾತಿ ನೀಡಲಾಗುವುದು ಮತ್ತು ಸಣ್ಣ ರೈತರಿಗೆ ಸಬ್ಸಿಡಿ ನೀಡುವ ಭರವಸೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಉಚಿತ ಡಾಟಾ ಕಾರ್ಡ್ ಹೊಂದಿರುವ ಟ್ಯಾಬ್ಲೇಟ್‌ಗಳನ್ನು ಸರ್ಕಾರಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಡಲಾಗುವುದು” ಎಂದು ಹೇಳಿದ್ದಾರೆ.

ತಮ್ಮ ಪಕ್ಷವನ್ನು ಗೆಲ್ಲಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ಲೀಟರ್‌ಗೆ 5 ಮತ್ತು 4 ರೂ.ಗಳಷ್ಟು ಕಡಿಮೆ ಮಾಡುತ್ತೇವೆ ಎಂದು ತೆರಿಗೆ ಕಡಿತದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅಲ್ಲದೆ ಎಲ್‌ಪಿಜಿ ಸಿಲಿಂಡರ್‌ಗೆ 100 ರೂ.ಗಳ ಸಬ್ಸಿಡಿ ನೀಡಲಾಗುವುದು ಎಂದು ಹೇಳಿದ್ದಾರೆ.

2016 ರಲ್ಲಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿಗೆ ಕಾರಣವಾದ ಸಂದರ್ಭಗಳ ತನಿಖೆಗಾಗಿ ರಚಿಸಲಾದ ಸಮಿತಿ (ಅರ್ಮುಗಸಾಮಿ ಸಮಿತಿ) ವರದಿಯನ್ನು ತ್ವರಿತವಾಗಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಇದಲ್ಲದೆ, ಡಿಎಂಕೆ ಅಧಿಕಾರಕ್ಕೆ ಬಂದರೆ ಕೈಗಾರಿಕೆಗಳಲ್ಲಿನ 75% ದಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡುವ ಕಾನೂನು ಜಾರಿಗೆ ಬರಲಿದೆ ಎಂದರು.

ಹಿಂದೂ ದೇವಾಲಯಗಳ ನವೀಕರಣ ಮತ್ತು ಪವಿತ್ರೀಕರಣಕ್ಕೆ 1000 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಭರವಸೆ ನೀಡಿದ ಸ್ಟಾಲಿನ್, ಚರ್ಚುಗಳು ಮತ್ತು ಮಸೀದಿಗಳಿಗೆ 200 ಕೋಟಿ ರೂ. ನೀಡುತ್ತೇವೆ ಎಂದು ಹೇಳಿದ್ದಾರೆ.

ಉತ್ತಮ ನೀರು ನಿರ್ವಹಣೆ, ಶುದ್ಧ ಕುಡಿಯುವ ನೀರು ಸರಬರಾಜು, ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ, ವೃದ್ಧಾಪ್ಯ ಪಿಂಚಣಿ ಹೆಚ್ಚಳ ಮತ್ತು ಹಸಿವಿನ ನಿರ್ಮೂಲನೆಯ ಭಾಗವಾಗಿ ‘ಕಲೈನಾರ್ ಉನವಾಗಂ’ ಸ್ಥಾಪಿಸುವುದಾಗಿ ಡಿಎಂಕೆ ನೀಡಿದ ಇತರ ಭರವಸೆಗಳಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...