Homeಮುಖಪುಟನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ಪ್ರಣಾಳಿಕೆಯಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಡಾಟಾ ಕಾರ್ಡ್‌ನೊಂದಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್‌ಗಳು ಮತ್ತು ರಾಜ್ಯದಲ್ಲಿ 75% ದಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಒದಗಿಸುವ ಕಾನೂನು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.

- Advertisement -
- Advertisement -

ಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತಮಿಳುನಾಡಿನ ಪ್ರತಿಪಕ್ಷ ಡಿಎಂಕೆ ಶನಿವಾರ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಡಾಟಾ ಕಾರ್ಡ್‌ನೊಂದಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್‌ಗಳು ಮತ್ತು ರಾಜ್ಯದಲ್ಲಿ 75% ದಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಒದಗಿಸುವ ಕಾನೂನು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.

ಪ್ರಮುಖ ಹಿಂದೂ ದೇವಾಲಯಗಳಿಗೆ ತೀರ್ಥಯಾತ್ರೆಗೆ ಹೋಗುವ ಒಂದು ಲಕ್ಷ ಜನರಿಗೆ 25 ಸಾವಿರ ರೂ.ಗಳ ಆರ್ಥಿಕ ನೆರವು, ಹೆರಿಗೆ ರಜೆ ಅವಧಿ ಮತ್ತು ನೆರವು ಹೆಚ್ಚಳ, ಇಂಧನ ಬೆಲೆಯಲ್ಲಿ ಕಡಿತ ಮತ್ತು ನೀಟ್ ಅನ್ನು ನಿಷೇಧಿಸುವ ಭರವಸೆಯನ್ನು ಡಿಎಂಕೆ ನೀಡಿದೆ.

ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಪಕ್ಷದ ನಾಯಕ ಸ್ಟಾಲಿನ್, ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ, ಮೊದಲ ತಲೆಮಾರಿನ ಪದವೀಧರರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಆದ್ಯತೆ ನೀಡಲಾಗುವುದು, ಖಾಸಗಿ ವಲಯದಲ್ಲಿ ಮೀಸಲಾತಿ ನೀಡಲಾಗುವುದು ಮತ್ತು ಸಣ್ಣ ರೈತರಿಗೆ ಸಬ್ಸಿಡಿ ನೀಡುವ ಭರವಸೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಉಚಿತ ಡಾಟಾ ಕಾರ್ಡ್ ಹೊಂದಿರುವ ಟ್ಯಾಬ್ಲೇಟ್‌ಗಳನ್ನು ಸರ್ಕಾರಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಡಲಾಗುವುದು” ಎಂದು ಹೇಳಿದ್ದಾರೆ.

ತಮ್ಮ ಪಕ್ಷವನ್ನು ಗೆಲ್ಲಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ಲೀಟರ್‌ಗೆ 5 ಮತ್ತು 4 ರೂ.ಗಳಷ್ಟು ಕಡಿಮೆ ಮಾಡುತ್ತೇವೆ ಎಂದು ತೆರಿಗೆ ಕಡಿತದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅಲ್ಲದೆ ಎಲ್‌ಪಿಜಿ ಸಿಲಿಂಡರ್‌ಗೆ 100 ರೂ.ಗಳ ಸಬ್ಸಿಡಿ ನೀಡಲಾಗುವುದು ಎಂದು ಹೇಳಿದ್ದಾರೆ.

2016 ರಲ್ಲಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿಗೆ ಕಾರಣವಾದ ಸಂದರ್ಭಗಳ ತನಿಖೆಗಾಗಿ ರಚಿಸಲಾದ ಸಮಿತಿ (ಅರ್ಮುಗಸಾಮಿ ಸಮಿತಿ) ವರದಿಯನ್ನು ತ್ವರಿತವಾಗಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಇದಲ್ಲದೆ, ಡಿಎಂಕೆ ಅಧಿಕಾರಕ್ಕೆ ಬಂದರೆ ಕೈಗಾರಿಕೆಗಳಲ್ಲಿನ 75% ದಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡುವ ಕಾನೂನು ಜಾರಿಗೆ ಬರಲಿದೆ ಎಂದರು.

ಹಿಂದೂ ದೇವಾಲಯಗಳ ನವೀಕರಣ ಮತ್ತು ಪವಿತ್ರೀಕರಣಕ್ಕೆ 1000 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಭರವಸೆ ನೀಡಿದ ಸ್ಟಾಲಿನ್, ಚರ್ಚುಗಳು ಮತ್ತು ಮಸೀದಿಗಳಿಗೆ 200 ಕೋಟಿ ರೂ. ನೀಡುತ್ತೇವೆ ಎಂದು ಹೇಳಿದ್ದಾರೆ.

ಉತ್ತಮ ನೀರು ನಿರ್ವಹಣೆ, ಶುದ್ಧ ಕುಡಿಯುವ ನೀರು ಸರಬರಾಜು, ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರ ಮೀಸಲಾತಿ ಹೆಚ್ಚಳ, ವೃದ್ಧಾಪ್ಯ ಪಿಂಚಣಿ ಹೆಚ್ಚಳ ಮತ್ತು ಹಸಿವಿನ ನಿರ್ಮೂಲನೆಯ ಭಾಗವಾಗಿ ‘ಕಲೈನಾರ್ ಉನವಾಗಂ’ ಸ್ಥಾಪಿಸುವುದಾಗಿ ಡಿಎಂಕೆ ನೀಡಿದ ಇತರ ಭರವಸೆಗಳಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...