Homeಮುಖಪುಟತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

ತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಇ.ಪಳನಿಸ್ವಾಮಿ ಮತ್ತು ಒ.ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಯ ಪ್ರಯುಕ್ತ ಅಖಿಲ ಭಾರತ ಅಣ್ಣಾ ದ್ರಾವಿಡ ಕಳಗಂನಿಂದ (AIADMK) ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಈ ವಿಷಯವನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಪೈಪೋಟಿ ನಿಡುತ್ತಿದ್ದ ಪಕ್ಷದ ಜಂಟಿ ಸಂಯೋಜಕರಾದ ಒ.ಪನ್ನೀರ್‌ಸೆಲ್ವಂ ಘೋಷಿಸಿರುವುದು ಮಹತ್ವದ್ದಾಗಿದೆ. ಇದು ಇಪಿಎಸ್ (ಇ.ಪಳನಿಸ್ವಾಮಿ) ಮತ್ತು ಒಪಿಎಸ್ (ಒ.ಪನ್ನೀರ್ಸೆಲ್ವಂ) ಬಣಗಳ ಒಗ್ಗೂಡಿಸುವಿಕೆಯನ್ನು ಸೂಚಿಸುತ್ತದೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

11 ಜನ ಸದಸ್ಯರ ಸಮಿತಿಯನ್ನು ಪಕ್ಷವು ಚುನಾವಣೆಯ ಅಭ್ಯರ್ಥಿಗಳನ್ನು ಪರೀಕ್ಷಿಸಲು ಸಭೆಯಲ್ಲಿ ರಚಿಸಿತ್ತು. ಈ ಸಮಿತಿಯು ಇ.ಪಳನಿಸ್ವಾಮಿಯವರನ್ನು ಆಯ್ಕೆ ಮಾಡಿದೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಇ.ಪಳನಿಸ್ವಾಮಿ ಮತ್ತು ಒ.ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...