Homeಮುಖಪುಟತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

ತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಇ.ಪಳನಿಸ್ವಾಮಿ ಮತ್ತು ಒ.ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಯ ಪ್ರಯುಕ್ತ ಅಖಿಲ ಭಾರತ ಅಣ್ಣಾ ದ್ರಾವಿಡ ಕಳಗಂನಿಂದ (AIADMK) ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಈ ವಿಷಯವನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಪೈಪೋಟಿ ನಿಡುತ್ತಿದ್ದ ಪಕ್ಷದ ಜಂಟಿ ಸಂಯೋಜಕರಾದ ಒ.ಪನ್ನೀರ್‌ಸೆಲ್ವಂ ಘೋಷಿಸಿರುವುದು ಮಹತ್ವದ್ದಾಗಿದೆ. ಇದು ಇಪಿಎಸ್ (ಇ.ಪಳನಿಸ್ವಾಮಿ) ಮತ್ತು ಒಪಿಎಸ್ (ಒ.ಪನ್ನೀರ್ಸೆಲ್ವಂ) ಬಣಗಳ ಒಗ್ಗೂಡಿಸುವಿಕೆಯನ್ನು ಸೂಚಿಸುತ್ತದೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

11 ಜನ ಸದಸ್ಯರ ಸಮಿತಿಯನ್ನು ಪಕ್ಷವು ಚುನಾವಣೆಯ ಅಭ್ಯರ್ಥಿಗಳನ್ನು ಪರೀಕ್ಷಿಸಲು ಸಭೆಯಲ್ಲಿ ರಚಿಸಿತ್ತು. ಈ ಸಮಿತಿಯು ಇ.ಪಳನಿಸ್ವಾಮಿಯವರನ್ನು ಆಯ್ಕೆ ಮಾಡಿದೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಇ.ಪಳನಿಸ್ವಾಮಿ ಮತ್ತು ಒ.ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿತ್ತು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...