Homeಮುಖಪುಟತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

- Advertisement -
- Advertisement -

ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು ಫೆಬ್ರವರಿ ಅಂತ್ಯದಲ್ಲಿ ತನ್ನ ಚುನಾವಣಾ ಪ್ರಚಾರವನ್ನು ಹರ್ಷಚಿತ್ತದಿಂದ ಆರಂಭಿಸಿತು. ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು, ವಿದುತಲೈ ಚಿರುಥೈಗಲ್ ಕಚ್ಚಿ (ವಿಸಿಕೆ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಗಳೊಂದಿಗಿನ ಮೈತ್ರಿ ಅಖಂಡವಾಗಿತ್ತು. ಅವರು ಎಐಎಡಿಎಂಕೆ ಮತ್ತು ಅದರ ಮಿತ್ರ ಭಾರತೀಯ ಭಾರತೀಯ ಪಕ್ಷ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡಿದರು.

ಆದರೆ ಸೀಟು ಹಂಚಿಕೆ ಮಾತುಕತೆ ಶುರುವಾಗಿ ಐದು ದಿನಗಳ ನಂತರ, ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ. ಎಲ್ಲವೂ ಸರಿಯಾಗಿಲ್ಲ, ಮತ್ತು ಡಿಎಂಕೆ ಚುನಾವಣಾ ಪ್ರಚಾರ ವ್ಯವಸ್ಥಾಪಕ ಮತ್ತು ರಾಜಕೀಯ ಪ್ರಚಾರ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೀಗ ಘರ್ಷಣೆಗೆ ಕಾರಣರಾಗಿದ್ದಾರೆ ಎಂದು ಡಿಎಂಕೆಯ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್‌ಗೆ ವರದಿ ಮಾಡಿದೆ

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. 30 ಸ್ಥಾನಗಳನ್ನು ಕಾಂಗ್ರೆಸ್ ಕೇಳಿದ್ದರೆ, ವಿಸಿಕೆ, ಸಿಪಿಐ, ಸಿಪಿಐ (ಎಂ) ಮತ್ತು ಐಯುಎಂಎಲ್, ಎಲ್ಲರೂ ತಲಾ 10 ಸ್ಥಾನಗಳನ್ನು ಕೇಳಿದ್ದರು. ಡಿಎಂಕೆ ಬಿಟ್ಟು ಕೊಡಲಿರುವ 54 ಸೀಟುಗಳಲ್ಲಿ ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಸಾಧ್ಯವಿಲ್ಲ. ಈಗಾಗಲೇ, ವಿಸಿಕೆ ಮತ್ತು ಸಿಪಿಐ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿವೆ. ಸಿಪಿಐ (ಎಂ) ಐದು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್‌ಗೆ ಕೇವಲ 18 ಅಥವಾ ಸ್ಥಾನಗಳ ಆಫರ್ ನೀಡಲಾಗಿದೆ. ಐಯುಎಂಎಲ್ ನಾಲ್ಕು ಸ್ಥಾನಗಳನ್ನು ಪಡೆಯಬಹುದು.

ಡಿಎಂಕೆಯ ಈ ಕಠಿಣ ಸಮಾಲೋಚನೆ ಮತ್ತು 180ರಲ್ಲಿ ಸ್ಪರ್ಧಿಸುವ ನಿರ್ಧಾರಕ್ಕೆ ಪ್ರಶಾಂತ್ ಕಿಶೋರ್ ತಂಡದ ಸಲಹೆಗಳೇ ಕಾರಣ ಎನ್ನಲಾಗಿದೆ. ಪ್ರಶಾಂತ್ ತಂಡ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.

180 ಸ್ಥಾನಗಳಿಗೆ ಪಟ್ಟು ಏಕೆ?

ಮೂಲಗಳ ಪ್ರಕಾರ, ಕನಿಷ್ಠ 180 ಸ್ಥಾನಗಳಲ್ಲಿ ಸ್ಪರ್ಧಿಸುವ ಡಿಎಂಕೆ ನಿರ್ಧಾರಕ್ಕೆ ಕಾರಣ: ಕಡಿಮೆ ಸೀಟುಗಳನ್ನು ಗೆದ್ದರೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ನಡೆಸಬಹುದಾದ ಆಪರೇಷನ್ ಕಮಲದ ಭೀತಿ ಎನ್ನಲಾಗಿದೆ. ಮೈತ್ರಿ ಪಕ್ಷದ ಯಾರಾದರೂ ಬಿಜೆಪಿಯೆಡೆಗೆ ವಾಲಿದರೆ ಕಷ್ಟ ಎಂಬುದನ್ನು ಪ್ರಶಾಂತ್ ಕಿಶೋರ್ ಡಿಎಂಕೆಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಅಸೆಂಬ್ಲಿಯಲ್ಲಿ ಬಹುಮತ ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಡಿಎಂಕೆ ಹೊರಹೊಮ್ಮುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶವನ್ನು ಡಿಎಂಕೆ ಪ್ರಚಾರ ತಂತ್ರಜ್ಞ ಹೊಂದಿದ್ದಾರೆ.. ಆದರೆ ಮೈತ್ರಿಕೂಟದ ಒಟ್ಟು ಶಕ್ತಿಯನ್ನು ಏಕೆ ಅವಲಂಬಿಸಬಾರದು? ಎಂಬ ಪ್ರಶ್ನೆ ಏಳುತ್ತದೆ.

“ಮೈತ್ರಿಕೂಟದ ಭಾಗವಾಗಿರುವ ಶಾಸಕರನ್ನು ಬೇಟೆಯಾಡಲು ಬಿಜೆಪಿ ಪ್ರಯತ್ನಿಸುತ್ತದೆ ಎಂದು ಡಿಎಂಕೆ ಆತಂಕ ವ್ಯಕ್ತಪಡಿಸಿದೆ. ಇದನ್ನು ತಡೆಗಟ್ಟಲು, ಡಿಎಂಕೆ ಸ್ವಂತವಾಗಿ ಬಹುಮತವನ್ನು ಗಳಿಸಿದ ಪಕ್ಷವಾಗಿ ಹೊರಹೊಮ್ಮಲು ಬಯಸಿದೆ” ಎಂದು ಡಿಎಂಕೆ ಮೈತ್ರಿ ಮಾತುಕತೆಗಳ ಬಗ್ಗೆ ತಿಳಿದಿರುವ ತಮಿಳುನಾಡಿನ ರಾಜಕೀಯ ಮುಖಂಡರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಡಿಎಂಕೆ ಆರಾಮದಾಯಕವಾಗಿ ಬಹುಮತ ಪಡೆಯಲಿದೆ ಎಂದು ಅವರು ಹೇಳಿದರು.

ಇತರ ರಾಜ್ಯಗಳಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹಾರುತ್ತಲೇ ಇದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಅವಲಂಬಿಸಬೇಡಿ ಎಂದು ಪ್ರಶಾಂತ್ ಕಿಶೋರ್ ಡಿಎಂಕೆಗೆ ಸಲಹೆ ನೀಡಿದ್ದಾರೆ ಎಂದು ಡಿಎಂಕೆ ಹತ್ತಿರದ ಮೂಲವೊಂದು ತಿಳಿಸಿದೆ.

“ಕಾಂಗ್ರೆಸ್‌ನ ಪ್ರಮಾಣವು ಹೆಚ್ಚಾದರೆ ಮತ್ತು ಡಿಎಂಕೆ ಮೈತ್ರಿಕೂಟ 140 ಸ್ಥಾನಗಳ ಹತ್ತಿರದಲ್ಲಿದ್ದರೆ, ಕಾಂಗ್ರೆಸ್ ಸೇರಿ ಮಿತ್ರಪಕ್ಷಗಳ ಹಲವರು ಪಕ್ಷಾಂತರಗೊಂಡರೆ, ಸರ್ಕಾರ ರಚಿಸುವುದು ಕಷ್ಟವಾಗುತ್ತದೆ. ಎಂಬ ಲೆಕ್ಕಾಚಾರ ಈಗ ಡಿಎಂಕೆಯಲ್ಲಿ ನಡೆಯುತ್ತಿದೆ.

2014 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದಾಗಿನಿಂದ, ಕಾಂಗ್ರೆಸ್ ಸ್ಥಿರವಾದ ಪಕ್ಷಾಂತರಗಳನ್ನು ಕಂಡಿದೆ ಮತ್ತು ಅದರ ಉನ್ನತ ನಾಯಕರೂ ಕೂಡ ಉತ್ತಮ ರಾಜಕೀಯ ಭವಿಷ್ಯದ ಹುಡುಕಾಟದಲ್ಲಿ ಬಿಜೆಪಿಗೆ ತೆರಳಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಕಾಂಗ್ರೆಸ್ 2017 ರಲ್ಲಿ ಗೋವಾ ಮತ್ತು ಮಣಿಪುರದಲ್ಲಿ ಮತ್ತು 2020 ರಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಪಕ್ಷಾಂತರಗಳನ್ನು ಕಂಡಿದೆ. ಕಾಂಗ್ರೆಸ್ ಜೊತೆ ಸಡಿಲು ನಿಲುವು ಅನುಸರಿಸಿ ರಿಸ್ಕ್ ತೆಗೆದುಕೊಳ್ಳದಂತೆ ಪ್ರಶಾಂತ್ ರಾಜಕೀಯ ಕಾರ್ಯತಂತ್ರ ತಂಡವು ಪಕ್ಷದ ನಾಯಕತ್ವವನ್ನು ಕೇಳಿದೆ.

ಡಿಎಂಕೆ ತನ್ನದೇ ಆದ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಲು ಕನಿಷ್ಠ 180 ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂದು ನಂಬಿದೆ.

ಕಾಂಗ್ರೆಸ್ ಕಳಪೆ ಸಾಧನೆ

ಡಿಎಂಕೆ ಕಠಿಣ ನಿಲುವು ತಾಳಲು, 2016 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಸಾಧನೆಯೂ ಕಾರಣವಾಗಿದೆ. ಪಕ್ಷವು 40 ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ ಎಂಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಡಿಎಂಕೆ 89 ಗೆದ್ದಿದೆ. ರಾಜ್ಯದಲ್ಲಿ ಎರಡನೇ ಬಾರಿಗೆ ಸರ್ಕಾರ ರಚಿಸಿದ ಎಐಎಡಿಎಂಕೆ 134 ಸ್ಥಾನಗಳನ್ನು ಗೆದ್ದಿತ್ತು.

ಎಬಿಪಿ ಸಿ-ವೋಟರ್ ಸಮೀಕ್ಷೆಯು ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿ ಗೆಲ್ಲುತ್ತದೆ ಎಂದು ಅಂದಾಜಿಸಿದ ನಂತರ, ಪಕ್ಷವು ದುರ್ಬಲ ಮಿತ್ರಪಕ್ಷವನ್ನು ಅವಲಂಬಿಸಲು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. “ರಾಹುಲ್ ಗಾಂಧಿಯವರ ಇತ್ತೀಚಿನ ಭೇಟಿಯು ಕಾಂಗ್ರೆಸ್ ಅಭಿಯಾನವನ್ನು ಹೆಚ್ಚಿಸಿದೆ” ಎಂಬುದು ಡಿಎಂಕೆಯನ್ನು ಮೆಚ್ಚಿಸಿದಂತೆ ಕಾಣುತ್ತಿಲ್ಲ. ‘ಯಾವುದೇ ಡಿಎಂಕೆ ನಾಯಕರು ಈ ಅಭಿಯಾನಗಳಿಗೆ ಹಾಜರಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ಮೂಲವೊಂದು ತಿಳಿಸಿದೆ. ಕಾಂಗ್ರೆಸ್ ಪಕ್ಷವು 2019 ರ ಲೋಕಸಭಾ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ.

ಕಿಶೋರ್ ಪ್ರಚಾರ ತಂತ್ರ ತಂಡವು, ಮೈತ್ರಿಕೂಟವನ್ನು ಪ್ರಬಲ ಪಕ್ಷವು (ಅಂದರೆ ಡಿಎಂಕೆ) ನಿಗದಿಪಡಿಸಿದ ಷರತ್ತುಗಳ ಮೇಲೆ ರೂಪಿಸಬೇಕು ಎಂದು ಸೂಚಿಸಿದೆ.

“ಬಿಜೆಪಿಯನ್ನು ವಿರೋಧಿಸುವ ನಾವೆಲ್ಲರೂ ಒಂದೇ ಶಕ್ತಿಯ ಭಾಗವಾಗಿದ್ದೇವೆ ಎಂಬುದನ್ನು ಡಿಎಂಕೆ ಮರೆತಿದೆ” ಎಂದು ಸ್ಥಾನ ಹಂಚಿಕೆ ಮಾತುಕತೆಗೆ ಹಾಜರಾದ ನಾಯಕರೊಬ್ಬರು ಹೇಳಿದರು. ಡಿಎಂಕೆ ಅತಿಯಾದ ಆತ್ಮವಿಶ್ವಾಸ ಹೊಂದಿದ್ದರೆ, ಅದು ಮೈತ್ರಿಕೂಟದ ಆಂತರಿಕ ಚಲನಶೀಲತೆಗೆ ಹಾನಿಯಾಗಬಹುದು, ಈ ಮಧ್ಯೆ ಕಾಂಗ್ರೆಸ್ ನಾಯಕತ್ವವು “ಮಾತುಕತೆಯಲ್ಲಿ ಅವಮಾನ” ಎಂದು ಭಾವಿಸಿದೆ ಎಂದು ಆ ನಾಯಕ ಹೇಳಿದರು.

ತೋರಿಕೆಯಲ್ಲಿ ಬಿಗಿಯಾಗಿ ಕಾಣುತ್ತಿರುವ ಡಿಎಂಕೆ ತನ್ನ ಶಾಸಕ ಅಭ್ಯರ್ಥಿಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದೆ ಎಂದು ಅದು ನಂಬಿದೆ. “ಪಕ್ಷವು ತನ್ನ ಶಾಸಕರಾರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಖಚಿತವಾಗಿ ನಂಬಿದೆ. ಡಿಎಂಕೆ ನಾಯಕರು ಯಾರಾದರೂ ಬಿಜೆಪಿಯನ್ನು ಬೆಂಬಲಿಸಿದರೆ ರಾಜಕೀಯದಲ್ಲಿ ಬದುಕಲು ಸಾಧ್ಯವಿಲ್ಲ ಎಂದು ದ್ರಾವಿಡ ಪಕ್ಷ ಭಾವಿಸುತ್ತದೆ ”ಎಂದು ಡಿಎಂಕೆಗೆ ಹತ್ತಿರವಾದ ಮೂಲವೊಂದು ತಿಳಿಸಿದೆ.

ಅಂತಹ ಯಾವುದೇ ಪಕ್ಷಾಂತರಗಳ ಸಂಭವನೀಯತೆಯನ್ನು ಕಡಿಮೆ ಮಾಡಲು ಉತ್ತಮ ಸ್ಥಾನ ಗಳಿಕೆ ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. “ನಾವು ಉತ್ತಮ ಸಂಖ್ಯೆಗಳನ್ನು ಪಡೆದರೆ, ಸರ್ಕಾರದ ಭವಿಷ್ಯವು ಸುರಕ್ಷಿತವಾಗಿರುತ್ತದೆ. ಉತ್ತಮ ಬಹುಮತವು ಯಾವುದೇ ಪಕ್ಷವನ್ನು ಉಳಿಸುತ್ತದೆ” ಎಂದು ಮೂಲ ಲೆಕ್ಕಾಚಾರ ಮಾಡಿದೆ.

ಮಾತುಕತೆ ಎರಡು ದಿನಗಳಲ್ಲಿ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. “ಕಾಂಗ್ರೆಸ್ ಈಗ ಕನಿಷ್ಠ 20 ಸ್ಥಾನಗಳನ್ನು ಕೇಳುತ್ತಿದೆ. ಇದು ಕಳೆದ ಚುನಾವಣೆಯಲ್ಲಿ ಸಿಕ್ಕಿದ್ದಕ್ಕಿಂತ 20 ಸ್ಥಾನಗಳು ಕಡಿಮೆ ಮತ್ತು ಈ ಚುನಾವಣೆಗೆ ಅದು ಕೇಳಿದ್ದಕ್ಕಿಂತ 10 ಕಡಿಮೆ ಇದೆ ” ಎಂದು ಸೀಟು ಹಂಚಿಕೆ ಮಾತುಕತೆ ತಿಳಿದ ರಾಜಕೀಯ ನಾಯಕ ಹೇಳಿದರು.

ಕಾಂಗ್ರೆಸ್ ಸಂಕಟವು ತನ್ನ ರಾಷ್ಟ್ರೀಯ ಎದುರಾಳಿ ಬಿಜೆಪಿಗಿಂತ ಕಠಿಣವಾಗಿದೆ. ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೈತ್ರಿಕೂಟದಲ್ಲಿ 20 ಸ್ಥಾನಗಳನ್ನು ಪಡೆದುಕೊಂಡಿದೆ. ಅದರ ಪಾಲಿಗೆ ಅದೇ ದೊಡ್ಡದು. ಚುನಾವಣೆಯ ನಂತರ ಡಿಎಂಕೆ ಎತ್ತರವಾಗಿ ನಿಲ್ಲುತ್ತದೆಯೇ? ಅದರ ಕಠಿಣ ಚೌಕಾಶಿ ಸಮರ್ಥನೀಯವೆಂದು ತೋರುತ್ತದೆಯೇ? ಅಥವಾ ಮಿತ್ರಪಕ್ಷಗಳು ‘ನಾವು ನಿಮಗೆ ಮೊದಲೇ ಹೇಳಿದ್ದೇವು’ ಎಂದು ಹೇಳಲು ಅವಕಾಶ ಸಿಗಲಿದೆಯೇ? ಎಲ್ಲದಕ್ಕೂ ಮೇ 02ರವರೆಗೆ ಕಾಯಬೇಕಿದೆ.

ಕೃಪೆ: ದಿ ಕ್ವಿಂಟ್

ಅನುವಾದ: ಮಲ್ಲನಗೌಡರ್ ಪಿ.ಕೆ


ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...