Homeಮುಖಪುಟತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

- Advertisement -
- Advertisement -

ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು ಫೆಬ್ರವರಿ ಅಂತ್ಯದಲ್ಲಿ ತನ್ನ ಚುನಾವಣಾ ಪ್ರಚಾರವನ್ನು ಹರ್ಷಚಿತ್ತದಿಂದ ಆರಂಭಿಸಿತು. ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು, ವಿದುತಲೈ ಚಿರುಥೈಗಲ್ ಕಚ್ಚಿ (ವಿಸಿಕೆ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಗಳೊಂದಿಗಿನ ಮೈತ್ರಿ ಅಖಂಡವಾಗಿತ್ತು. ಅವರು ಎಐಎಡಿಎಂಕೆ ಮತ್ತು ಅದರ ಮಿತ್ರ ಭಾರತೀಯ ಭಾರತೀಯ ಪಕ್ಷ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡಿದರು.

ಆದರೆ ಸೀಟು ಹಂಚಿಕೆ ಮಾತುಕತೆ ಶುರುವಾಗಿ ಐದು ದಿನಗಳ ನಂತರ, ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ. ಎಲ್ಲವೂ ಸರಿಯಾಗಿಲ್ಲ, ಮತ್ತು ಡಿಎಂಕೆ ಚುನಾವಣಾ ಪ್ರಚಾರ ವ್ಯವಸ್ಥಾಪಕ ಮತ್ತು ರಾಜಕೀಯ ಪ್ರಚಾರ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೀಗ ಘರ್ಷಣೆಗೆ ಕಾರಣರಾಗಿದ್ದಾರೆ ಎಂದು ಡಿಎಂಕೆಯ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್‌ಗೆ ವರದಿ ಮಾಡಿದೆ

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. 30 ಸ್ಥಾನಗಳನ್ನು ಕಾಂಗ್ರೆಸ್ ಕೇಳಿದ್ದರೆ, ವಿಸಿಕೆ, ಸಿಪಿಐ, ಸಿಪಿಐ (ಎಂ) ಮತ್ತು ಐಯುಎಂಎಲ್, ಎಲ್ಲರೂ ತಲಾ 10 ಸ್ಥಾನಗಳನ್ನು ಕೇಳಿದ್ದರು. ಡಿಎಂಕೆ ಬಿಟ್ಟು ಕೊಡಲಿರುವ 54 ಸೀಟುಗಳಲ್ಲಿ ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಸಾಧ್ಯವಿಲ್ಲ. ಈಗಾಗಲೇ, ವಿಸಿಕೆ ಮತ್ತು ಸಿಪಿಐ ತಲಾ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿವೆ. ಸಿಪಿಐ (ಎಂ) ಐದು ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್‌ಗೆ ಕೇವಲ 18 ಅಥವಾ ಸ್ಥಾನಗಳ ಆಫರ್ ನೀಡಲಾಗಿದೆ. ಐಯುಎಂಎಲ್ ನಾಲ್ಕು ಸ್ಥಾನಗಳನ್ನು ಪಡೆಯಬಹುದು.

ಡಿಎಂಕೆಯ ಈ ಕಠಿಣ ಸಮಾಲೋಚನೆ ಮತ್ತು 180ರಲ್ಲಿ ಸ್ಪರ್ಧಿಸುವ ನಿರ್ಧಾರಕ್ಕೆ ಪ್ರಶಾಂತ್ ಕಿಶೋರ್ ತಂಡದ ಸಲಹೆಗಳೇ ಕಾರಣ ಎನ್ನಲಾಗಿದೆ. ಪ್ರಶಾಂತ್ ತಂಡ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.

180 ಸ್ಥಾನಗಳಿಗೆ ಪಟ್ಟು ಏಕೆ?

ಮೂಲಗಳ ಪ್ರಕಾರ, ಕನಿಷ್ಠ 180 ಸ್ಥಾನಗಳಲ್ಲಿ ಸ್ಪರ್ಧಿಸುವ ಡಿಎಂಕೆ ನಿರ್ಧಾರಕ್ಕೆ ಕಾರಣ: ಕಡಿಮೆ ಸೀಟುಗಳನ್ನು ಗೆದ್ದರೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ನಡೆಸಬಹುದಾದ ಆಪರೇಷನ್ ಕಮಲದ ಭೀತಿ ಎನ್ನಲಾಗಿದೆ. ಮೈತ್ರಿ ಪಕ್ಷದ ಯಾರಾದರೂ ಬಿಜೆಪಿಯೆಡೆಗೆ ವಾಲಿದರೆ ಕಷ್ಟ ಎಂಬುದನ್ನು ಪ್ರಶಾಂತ್ ಕಿಶೋರ್ ಡಿಎಂಕೆಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಅಸೆಂಬ್ಲಿಯಲ್ಲಿ ಬಹುಮತ ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಡಿಎಂಕೆ ಹೊರಹೊಮ್ಮುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶವನ್ನು ಡಿಎಂಕೆ ಪ್ರಚಾರ ತಂತ್ರಜ್ಞ ಹೊಂದಿದ್ದಾರೆ.. ಆದರೆ ಮೈತ್ರಿಕೂಟದ ಒಟ್ಟು ಶಕ್ತಿಯನ್ನು ಏಕೆ ಅವಲಂಬಿಸಬಾರದು? ಎಂಬ ಪ್ರಶ್ನೆ ಏಳುತ್ತದೆ.

“ಮೈತ್ರಿಕೂಟದ ಭಾಗವಾಗಿರುವ ಶಾಸಕರನ್ನು ಬೇಟೆಯಾಡಲು ಬಿಜೆಪಿ ಪ್ರಯತ್ನಿಸುತ್ತದೆ ಎಂದು ಡಿಎಂಕೆ ಆತಂಕ ವ್ಯಕ್ತಪಡಿಸಿದೆ. ಇದನ್ನು ತಡೆಗಟ್ಟಲು, ಡಿಎಂಕೆ ಸ್ವಂತವಾಗಿ ಬಹುಮತವನ್ನು ಗಳಿಸಿದ ಪಕ್ಷವಾಗಿ ಹೊರಹೊಮ್ಮಲು ಬಯಸಿದೆ” ಎಂದು ಡಿಎಂಕೆ ಮೈತ್ರಿ ಮಾತುಕತೆಗಳ ಬಗ್ಗೆ ತಿಳಿದಿರುವ ತಮಿಳುನಾಡಿನ ರಾಜಕೀಯ ಮುಖಂಡರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಡಿಎಂಕೆ ಆರಾಮದಾಯಕವಾಗಿ ಬಹುಮತ ಪಡೆಯಲಿದೆ ಎಂದು ಅವರು ಹೇಳಿದರು.

ಇತರ ರಾಜ್ಯಗಳಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹಾರುತ್ತಲೇ ಇದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಅವಲಂಬಿಸಬೇಡಿ ಎಂದು ಪ್ರಶಾಂತ್ ಕಿಶೋರ್ ಡಿಎಂಕೆಗೆ ಸಲಹೆ ನೀಡಿದ್ದಾರೆ ಎಂದು ಡಿಎಂಕೆ ಹತ್ತಿರದ ಮೂಲವೊಂದು ತಿಳಿಸಿದೆ.

“ಕಾಂಗ್ರೆಸ್‌ನ ಪ್ರಮಾಣವು ಹೆಚ್ಚಾದರೆ ಮತ್ತು ಡಿಎಂಕೆ ಮೈತ್ರಿಕೂಟ 140 ಸ್ಥಾನಗಳ ಹತ್ತಿರದಲ್ಲಿದ್ದರೆ, ಕಾಂಗ್ರೆಸ್ ಸೇರಿ ಮಿತ್ರಪಕ್ಷಗಳ ಹಲವರು ಪಕ್ಷಾಂತರಗೊಂಡರೆ, ಸರ್ಕಾರ ರಚಿಸುವುದು ಕಷ್ಟವಾಗುತ್ತದೆ. ಎಂಬ ಲೆಕ್ಕಾಚಾರ ಈಗ ಡಿಎಂಕೆಯಲ್ಲಿ ನಡೆಯುತ್ತಿದೆ.

2014 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದಾಗಿನಿಂದ, ಕಾಂಗ್ರೆಸ್ ಸ್ಥಿರವಾದ ಪಕ್ಷಾಂತರಗಳನ್ನು ಕಂಡಿದೆ ಮತ್ತು ಅದರ ಉನ್ನತ ನಾಯಕರೂ ಕೂಡ ಉತ್ತಮ ರಾಜಕೀಯ ಭವಿಷ್ಯದ ಹುಡುಕಾಟದಲ್ಲಿ ಬಿಜೆಪಿಗೆ ತೆರಳಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಕಾಂಗ್ರೆಸ್ 2017 ರಲ್ಲಿ ಗೋವಾ ಮತ್ತು ಮಣಿಪುರದಲ್ಲಿ ಮತ್ತು 2020 ರಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಪಕ್ಷಾಂತರಗಳನ್ನು ಕಂಡಿದೆ. ಕಾಂಗ್ರೆಸ್ ಜೊತೆ ಸಡಿಲು ನಿಲುವು ಅನುಸರಿಸಿ ರಿಸ್ಕ್ ತೆಗೆದುಕೊಳ್ಳದಂತೆ ಪ್ರಶಾಂತ್ ರಾಜಕೀಯ ಕಾರ್ಯತಂತ್ರ ತಂಡವು ಪಕ್ಷದ ನಾಯಕತ್ವವನ್ನು ಕೇಳಿದೆ.

ಡಿಎಂಕೆ ತನ್ನದೇ ಆದ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಲು ಕನಿಷ್ಠ 180 ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂದು ನಂಬಿದೆ.

ಕಾಂಗ್ರೆಸ್ ಕಳಪೆ ಸಾಧನೆ

ಡಿಎಂಕೆ ಕಠಿಣ ನಿಲುವು ತಾಳಲು, 2016 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಳಪೆ ಸಾಧನೆಯೂ ಕಾರಣವಾಗಿದೆ. ಪಕ್ಷವು 40 ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ ಎಂಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಡಿಎಂಕೆ 89 ಗೆದ್ದಿದೆ. ರಾಜ್ಯದಲ್ಲಿ ಎರಡನೇ ಬಾರಿಗೆ ಸರ್ಕಾರ ರಚಿಸಿದ ಎಐಎಡಿಎಂಕೆ 134 ಸ್ಥಾನಗಳನ್ನು ಗೆದ್ದಿತ್ತು.

ಎಬಿಪಿ ಸಿ-ವೋಟರ್ ಸಮೀಕ್ಷೆಯು ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿ ಗೆಲ್ಲುತ್ತದೆ ಎಂದು ಅಂದಾಜಿಸಿದ ನಂತರ, ಪಕ್ಷವು ದುರ್ಬಲ ಮಿತ್ರಪಕ್ಷವನ್ನು ಅವಲಂಬಿಸಲು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. “ರಾಹುಲ್ ಗಾಂಧಿಯವರ ಇತ್ತೀಚಿನ ಭೇಟಿಯು ಕಾಂಗ್ರೆಸ್ ಅಭಿಯಾನವನ್ನು ಹೆಚ್ಚಿಸಿದೆ” ಎಂಬುದು ಡಿಎಂಕೆಯನ್ನು ಮೆಚ್ಚಿಸಿದಂತೆ ಕಾಣುತ್ತಿಲ್ಲ. ‘ಯಾವುದೇ ಡಿಎಂಕೆ ನಾಯಕರು ಈ ಅಭಿಯಾನಗಳಿಗೆ ಹಾಜರಾಗಿಲ್ಲ” ಎಂದು ರಾಜ್ಯ ಕಾಂಗ್ರೆಸ್ ಮೂಲವೊಂದು ತಿಳಿಸಿದೆ. ಕಾಂಗ್ರೆಸ್ ಪಕ್ಷವು 2019 ರ ಲೋಕಸಭಾ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ.

ಕಿಶೋರ್ ಪ್ರಚಾರ ತಂತ್ರ ತಂಡವು, ಮೈತ್ರಿಕೂಟವನ್ನು ಪ್ರಬಲ ಪಕ್ಷವು (ಅಂದರೆ ಡಿಎಂಕೆ) ನಿಗದಿಪಡಿಸಿದ ಷರತ್ತುಗಳ ಮೇಲೆ ರೂಪಿಸಬೇಕು ಎಂದು ಸೂಚಿಸಿದೆ.

“ಬಿಜೆಪಿಯನ್ನು ವಿರೋಧಿಸುವ ನಾವೆಲ್ಲರೂ ಒಂದೇ ಶಕ್ತಿಯ ಭಾಗವಾಗಿದ್ದೇವೆ ಎಂಬುದನ್ನು ಡಿಎಂಕೆ ಮರೆತಿದೆ” ಎಂದು ಸ್ಥಾನ ಹಂಚಿಕೆ ಮಾತುಕತೆಗೆ ಹಾಜರಾದ ನಾಯಕರೊಬ್ಬರು ಹೇಳಿದರು. ಡಿಎಂಕೆ ಅತಿಯಾದ ಆತ್ಮವಿಶ್ವಾಸ ಹೊಂದಿದ್ದರೆ, ಅದು ಮೈತ್ರಿಕೂಟದ ಆಂತರಿಕ ಚಲನಶೀಲತೆಗೆ ಹಾನಿಯಾಗಬಹುದು, ಈ ಮಧ್ಯೆ ಕಾಂಗ್ರೆಸ್ ನಾಯಕತ್ವವು “ಮಾತುಕತೆಯಲ್ಲಿ ಅವಮಾನ” ಎಂದು ಭಾವಿಸಿದೆ ಎಂದು ಆ ನಾಯಕ ಹೇಳಿದರು.

ತೋರಿಕೆಯಲ್ಲಿ ಬಿಗಿಯಾಗಿ ಕಾಣುತ್ತಿರುವ ಡಿಎಂಕೆ ತನ್ನ ಶಾಸಕ ಅಭ್ಯರ್ಥಿಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದೆ ಎಂದು ಅದು ನಂಬಿದೆ. “ಪಕ್ಷವು ತನ್ನ ಶಾಸಕರಾರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಖಚಿತವಾಗಿ ನಂಬಿದೆ. ಡಿಎಂಕೆ ನಾಯಕರು ಯಾರಾದರೂ ಬಿಜೆಪಿಯನ್ನು ಬೆಂಬಲಿಸಿದರೆ ರಾಜಕೀಯದಲ್ಲಿ ಬದುಕಲು ಸಾಧ್ಯವಿಲ್ಲ ಎಂದು ದ್ರಾವಿಡ ಪಕ್ಷ ಭಾವಿಸುತ್ತದೆ ”ಎಂದು ಡಿಎಂಕೆಗೆ ಹತ್ತಿರವಾದ ಮೂಲವೊಂದು ತಿಳಿಸಿದೆ.

ಅಂತಹ ಯಾವುದೇ ಪಕ್ಷಾಂತರಗಳ ಸಂಭವನೀಯತೆಯನ್ನು ಕಡಿಮೆ ಮಾಡಲು ಉತ್ತಮ ಸ್ಥಾನ ಗಳಿಕೆ ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. “ನಾವು ಉತ್ತಮ ಸಂಖ್ಯೆಗಳನ್ನು ಪಡೆದರೆ, ಸರ್ಕಾರದ ಭವಿಷ್ಯವು ಸುರಕ್ಷಿತವಾಗಿರುತ್ತದೆ. ಉತ್ತಮ ಬಹುಮತವು ಯಾವುದೇ ಪಕ್ಷವನ್ನು ಉಳಿಸುತ್ತದೆ” ಎಂದು ಮೂಲ ಲೆಕ್ಕಾಚಾರ ಮಾಡಿದೆ.

ಮಾತುಕತೆ ಎರಡು ದಿನಗಳಲ್ಲಿ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. “ಕಾಂಗ್ರೆಸ್ ಈಗ ಕನಿಷ್ಠ 20 ಸ್ಥಾನಗಳನ್ನು ಕೇಳುತ್ತಿದೆ. ಇದು ಕಳೆದ ಚುನಾವಣೆಯಲ್ಲಿ ಸಿಕ್ಕಿದ್ದಕ್ಕಿಂತ 20 ಸ್ಥಾನಗಳು ಕಡಿಮೆ ಮತ್ತು ಈ ಚುನಾವಣೆಗೆ ಅದು ಕೇಳಿದ್ದಕ್ಕಿಂತ 10 ಕಡಿಮೆ ಇದೆ ” ಎಂದು ಸೀಟು ಹಂಚಿಕೆ ಮಾತುಕತೆ ತಿಳಿದ ರಾಜಕೀಯ ನಾಯಕ ಹೇಳಿದರು.

ಕಾಂಗ್ರೆಸ್ ಸಂಕಟವು ತನ್ನ ರಾಷ್ಟ್ರೀಯ ಎದುರಾಳಿ ಬಿಜೆಪಿಗಿಂತ ಕಠಿಣವಾಗಿದೆ. ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೈತ್ರಿಕೂಟದಲ್ಲಿ 20 ಸ್ಥಾನಗಳನ್ನು ಪಡೆದುಕೊಂಡಿದೆ. ಅದರ ಪಾಲಿಗೆ ಅದೇ ದೊಡ್ಡದು. ಚುನಾವಣೆಯ ನಂತರ ಡಿಎಂಕೆ ಎತ್ತರವಾಗಿ ನಿಲ್ಲುತ್ತದೆಯೇ? ಅದರ ಕಠಿಣ ಚೌಕಾಶಿ ಸಮರ್ಥನೀಯವೆಂದು ತೋರುತ್ತದೆಯೇ? ಅಥವಾ ಮಿತ್ರಪಕ್ಷಗಳು ‘ನಾವು ನಿಮಗೆ ಮೊದಲೇ ಹೇಳಿದ್ದೇವು’ ಎಂದು ಹೇಳಲು ಅವಕಾಶ ಸಿಗಲಿದೆಯೇ? ಎಲ್ಲದಕ್ಕೂ ಮೇ 02ರವರೆಗೆ ಕಾಯಬೇಕಿದೆ.

ಕೃಪೆ: ದಿ ಕ್ವಿಂಟ್

ಅನುವಾದ: ಮಲ್ಲನಗೌಡರ್ ಪಿ.ಕೆ


ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...