Homeಮುಖಪುಟತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿ ಉದಯಾನಿಧಿ ಸ್ಟಾಲಿನ್ ಮತ್ತು ಇತ್ತೀಚೆಗೆ ಬಿಜೆಪಿ ಸೇರಿರುವ ಖುಷ್ಬೂ ನಡುವೆ ಮುಖಾಮುಖಿ ಸ್ಪರ್ಧೆ ಇರುವ ಕಾರಣ ಚೆಪಾಕ್ ವಿಧಾನಸಭಾ ಕ್ಷೇತ್ರ ಹೆಚ್ಚಿನ ಗಮನ ಸೆಳೆಯಬಹುದು

- Advertisement -
- Advertisement -

ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ನಟಿ ಖುಷ್ಬೂ ಸುಂದರ್ ಅವರನ್ನು ಚೆನ್ನೈನ ಚೆಪಾಕ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿ ಮತ್ತು ದಿವಂಗತ ಕರುಣಾನಿಧಿಯವರ ಮೊಮ್ಮಗ ಉದಯನಿಧಿ ಸ್ಟಾಲಿನ್ ಅವರು ಚೆಪಾಕ್‌ನಿಂದ ಸ್ಪರ್ಧಿಸಲು ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಎಂಕೆ ಭದ್ರಕೋಟೆಯಾದ ಚೆಪಾಕ್ ಕ್ಷೇತ್ರವನ್ನು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರು ಮೂರು ಬಾರಿ ಪ್ರತಿನಿಧಿಸಿದ್ದರು. ಹಾಗಾಗಿ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿ ಉದಯಾನಿಧಿ ಸ್ಟಾಲಿನ್ ಮತ್ತು ಖುಷ್ಬೂ ನಡುವಿನ ಮುಖಾಮುಖಿ ಸ್ಪರ್ಧೆ ಇರುವ ಕಾರಣ ಈ ಕ್ಷೇತ್ರ ಹೆಚ್ಚಿನ ಗಮನ ಸೆಳೆಯಬಹುದು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ನಂತರ ಚುನಾವಣೆ ನಡೆದಾಗ 1991 ರಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದ್ದರು. ಆಗ ಹೊರತುಪಡಿಸಿ ಉಳಿದ ಎಲ್ಲಾ ವಿಧಾನಸಭಾ ಚುನಾವಣೆಗಳಲ್ಲಿಯೂ ಇಲ್ಲಿ ಡಿಎಂಕೆ ಗೆದ್ದಿದೆ.

ಕರುಣಾನಿಧಿ ಅವರು 1996, 2001 ಮತ್ತು 2006 ರಲ್ಲಿ ಈ ಕ್ಷೇತ್ರದಿಂದ ಗೆದ್ದಿದ್ದರು. ನಂತರ ಕರುಣಾನಿಧಿ ನಿಧನರಾಗುವವರೆಗೂ ಈ ಕ್ಷೇತ್ರವನ್ನು ಡಿಎಂಕೆಯ ಜೆ ಅನ್ಬಳಗನ್ ಪ್ರತಿನಿಧಿಸುತ್ತಿದ್ದರು.

ಕಾಂಗ್ರೆಸ್ ಪಕ್ಷದಿಂದ ದಿಢೀರ್ ಅಂತ ಬಿಜೆಪಿಗೆ ಸೇರಿರುವ ಖುಷ್ಬೂ ಈ ಚುನಾವಣೆಯಲ್ಲಿ ಚೆಪಾಕ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ಇದು ಡಿಎಂಕೆ ಪಕ್ಷದ ಪ್ರತಿಷ್ಟೆಯ ಕ್ಷೇತ್ರವಾಗಿರುವುದರಿಂದ ರಾಜ್ಯದ ಉಳಿದ ಕ್ಷೇತ್ರಗಳಿಗಿಂತ ಇಲ್ಲಿ ಚುನಾವಣೆಯ ಕಾವು ಹೆಚ್ಚಿರಲಿದೆ ಎಂದು ಅಂದಾಜಿಸಲಾಗುತ್ತಿದೆ. ವಿಶೇಷವೆಂದರೆ ಇಬ್ಬರು ಸ್ಪರ್ಧಿಗಳೂ ಕೂಡ ಸಿನಿಮಾ ಕ್ಷೇತ್ರದಲ್ಲಿ ಹೆಚ್ಚಿನ ವರ್ಚಸ್ಸುಳ್ಳವರಾಗಿದ್ದಾರೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....