Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...