Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...