Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...