Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...