Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...