Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...