Homeಮುಖಪುಟದೆಹಲಿ: ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಹಿಡಿದು ತಮಿಳುನಾಡಿನ ರೈತರಿಂದ ಪ್ರತಿಭಟನೆ

ದೆಹಲಿ: ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಹಿಡಿದು ತಮಿಳುನಾಡಿನ ರೈತರಿಂದ ಪ್ರತಿಭಟನೆ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡಿನ ಸುಮಾರು 200ರೈತರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಮತ್ತು ಮೂಳೆಗಳನ್ನು ತಮಿಳುನಾಡಿನಿಂದ ದೆಹಲಿಗೆ ಹೊತ್ತೊಯ್ದಿದ್ದಾರೆ.

ಕೃಷಿಯಲ್ಲಿ ಆದಾಯ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರೂ ಬೆಳೆಗಳ ಬೆಲೆ ಏರಿಕೆ ಮಾಡಿಲ್ಲ, ನದಿಗಳ ಜೋಡಣೆ ವಿಚಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ನ್ಯಾಷನಲ್ ಸೌತ್ ಇಂಡಿಯಾ ರಿವರ್ ಇಂಟರ್‌ಲಿಂಕಿಂಗ್ ಫಾರ್ಮರ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಅಯ್ಯಕಣ್ಣು ಈ ಕುರಿತು ಮಾತನಾಡಿದ್ದು, 2019ರ ಚುನಾವಣೆಯ ಸಮಯದಲ್ಲಿ, ಪ್ರಧಾನಿ ಬೆಳೆಗಳ ಲಾಭವನ್ನು ದ್ವಿಗುಣಗೊಳಿಸುವುದಾಗಿ ಮತ್ತು ನದಿಗಳನ್ನು ಪರಸ್ಪರ ಜೋಡಿಸುವುದಾಗಿ ಘೋಷಿಸಿದ್ದರು, ಆದರೆ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಸರ್ಕಾರ ತಮ್ಮ ಬೇಡಿಕೆಗೆ ಕಿವಿಗೊಡದಿದ್ದರೆ ವಾರಣಾಸಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ.

ಸರ್ಕಾರ ನಮ್ಮ ಮಾತು ಕೇಳದಿದ್ದರೆ ವಾರಣಾಸಿಗೆ ತೆರಳಿ ಪ್ರಧಾನಿ ಮೋದಿ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತೇವೆ  ಎಂದು ರೈತರು ಹೇಳಿದ್ದಾರೆ. ನಾವು ಬೇಡಿಕೆಗಳ ಈಡೇರಿಕೆಗೆ ಈ ಹಿಂದೆ ಪ್ರತಿಭಟನೆ ನಡೆಸಿದ್ದೇವೆ. ನಾವು ಪ್ರಧಾನಿ ವಿರುದ್ಧವಾಗಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ, ನಮಗೆ ಅವರ ಸಹಾಯ ಮಾತ್ರ ಬೇಕು ಎಂದು ಅಯ್ಯಕಣ್ಣು ಹೇಳಿದರು. ಈ ಮೊದಲು ಪ್ರತಿಭಟನೆಗೆ ಅವಕಾಶ ನೀಡದಿದ್ದರೂ ನಂತರ ನ್ಯಾಯಾಲಯದ ಅನುಮತಿ ಪಡೆದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಪ್ರತಿಭಟನೆಯ ವೇಳೆ ಕೆಲವು ರೈತರು ಮೊಬೈಲ್ ಟವರ್ ಮತ್ತು ಮರಗಳನ್ನು ಹತ್ತಿದ್ದಾರೆ. ನೇಗಿಲು ಮತ್ತು ಧ್ವಜಗಳೊಂದಿಗೆ ರೈತರ ತಲೆಬುರುಡೆ ಮತ್ತು ಮೂಳೆಗಳನ್ನು ಸಹ ತಂದಿದ್ದಾರೆ. ಇದು ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ತಲೆ ಬುರುಡೆಗಳು ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...