Homeಮುಖಪುಟತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಪೋಟ; 7 ಮಹಿಳೆಯರ ದಾರುಣ ಸಾವು

ಉತ್ಸವಗಳು ಮತ್ತು ಮುಂದಿನ ತಿಂಗಳು ದೀಪಾವಳಿ ಹಬ್ಬ ಇರುವುದರಿಂದ ಕಾರ್ಖಾನೆಗಳು ಪಟಾಕಿ ತಯಾರಿಸುವಲ್ಲಿ ನಿರತರಾಗಿದ್ದವು.

- Advertisement -
- Advertisement -

ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್ನಾರ್ಕೋಯಿಲ್ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಏಳು ಮಹಿಳೆಯರು ಸಾವನ್ನಪ್ಪಿದ್ದಾರೆ.

ಕಟ್ಟುಮನ್ನಾರ್ಕೋಯಿಲ್‌ನ ಕುರುಂಗುಡಿ ಗ್ರಾಮದಲ್ಲಿ 10 ಕ್ಕೂ ಹೆಚ್ಚು ಸಣ್ಣ ಪಟಾಕಿ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ಕರ್ಫ್ಯೂ ಕಾರಣದಿಂದಾಗಿ ಮುಚ್ಚಲ್ಪಟ್ಟಿದ್ದ ಪಟಾಕಿ ಕಾರ್ಖಾನೆಗಳು ಸೆಪ್ಟೆಂಬರ್ 1 ರಂದು ಕರ್ಫ್ಯೂ ಸಡಿಲಿಸಿದ ನಂತರ ಮತ್ತೆ ತೆರೆಯಲ್ಪಟ್ಟಿದ್ದವು.

ಇದನ್ನೂ ಓದಿ: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ಉತ್ಸವಗಳು ಮತ್ತು ಮುಂದಿನ ತಿಂಗಳು ದೀಪಾವಳಿ ಹಬ್ಬ ಇರುವುದರಿಂದ ಕಾರ್ಖಾನೆಗಳು ಪಟಾಕಿ ತಯಾರಿಸುವಲ್ಲಿ ನಿರತರಾಗಿದ್ದವು.

ಘಟನೆಯು ಕುರುಂಗುಡಿ ಗ್ರಾಮದ ಚಿನ್ನತುರೈ ಅವರ ಪತ್ನಿ ಗಾಂಧಿಮತಿ ಒಡೆತನದ ಪೊಟ್ಯಾಶ್ ಕಾರ್ಖಾನೆಯಲ್ಲಿ ನಡೆದಿದ್ದು ಮಾಲಕಿ ಸೇರಿದಂತೆ 9 ಮಹಿಳೆಯರು ಇಂದು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಕಾರ್ಖಾನೆಯಲ್ಲಿದ್ದ ಪಟಾಕಿ ಸಿಡಿದಿದ್ದು, ಪರಿಣಾಮವಾಗಿ ಅಲ್ಲಿ ಕೆಲಸ ಮಾಡುತ್ತಿದ್ದ ಮಾಲಕಿ ಮತ್ತು ಸಿಬ್ಬಂದಿ ಸೇರಿದಂತೆ 5 ಮಹಿಳೆಯರು ಘಟನಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ನಂತರ ಇನ್ನೂ ಇಬ್ಬರು ಮಹಿಳೆಯರು ಮೃತರಾಗಿದ್ದಾರೆ.

ಅಪಘಾತದಲ್ಲಿ 7 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಕಡಲೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಬ್ರಿಟಿಶರ ಎದೆ ನಡುಗಿಸಿದ್ದ ಆ ದಲಿತ ಸೇನಾಧಿಪತಿ ಹೆಣ್ಣಿನ ಹೆಸರು ವೀರಮಂಗೈ ಕುಯಿಲಿ

ಅಲ್ಲದೆ 2 ಜನರನ್ನು ಗಂಭೀರ ಗಾಯಗಳೊಂದಿಗೆ ಚಿದಂಬರಂ ರಾಜ ಮುತ್ಯಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕಾರ್ಖಾನೆ ಕಟ್ಟಡ ಸಂಪೂರ್ಣವಾಗಿ ಕುಸಿದಿದೆ. ಅವಶೇಷಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಇನ್ನೂ ಕೆಲಸ ಮಾಡುತ್ತಿದ್ದಾರೆ.

ಪರಿಹಾರಕ್ಕೆ ಸೂಚನೆ

ಅಪಘಾತದಲ್ಲಿ ಪ್ರಾಣ ಕಳೆದುಕೊಂಡ 7 ಮಹಿಳೆಯರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಾದ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತೂತ್ತುಕುಡಿಯ ನರಮೇಧದ ಪಾಠಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....