HomeUncategorizedತಮಿಳುನಾಡು: 'ಜಾತಿ ದೌರ್ಜನ್ಯ ಎಸಗಿದ ಸವರ್ಣೀಯರನ್ನು ಸರ್ಕಾರ ರಕ್ಷಿಸುತ್ತಿದೆ..' ಎಂದು ಚುನಾವಣೆ ಬಹಿಷ್ಕರಿಸಿದ ದಲಿತ ಕುಟುಂಬಗಳು

ತಮಿಳುನಾಡು: ‘ಜಾತಿ ದೌರ್ಜನ್ಯ ಎಸಗಿದ ಸವರ್ಣೀಯರನ್ನು ಸರ್ಕಾರ ರಕ್ಷಿಸುತ್ತಿದೆ..’ ಎಂದು ಚುನಾವಣೆ ಬಹಿಷ್ಕರಿಸಿದ ದಲಿತ ಕುಟುಂಬಗಳು

- Advertisement -
- Advertisement -

ತಾವು ಕುಡಿಯುವ ನೀರನ್ನು ಮಲದಿಂದ ಕಲುಷಿತಗೊಳಿಸಿದ ಅಪರಾಧಿಗಳ ವಿರುದ್ಧ ತಮಿಳುನಾಡು ಸರ್ಕಾರ ತೋರಿದ ನಿಷ್ಕ್ರಿಯತೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪುದುಕೊಟ್ಟೈನ ವೆಂಗವಯಲ್ ಗ್ರಾಮದ ದಲಿತ ನಿವಾಸಿಗಳು, ಇಂದು ನಡೆದ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್. ವರದಿ ಮಾಡಿದೆ.

ಜಾತಿ ದೌರ್ಜನ್ಯ ಎಸಗಿದ ಪ್ರಬಲ ಜಾತಿಗಳ ಗುಂಪುಗಳನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದು,. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವವರೆಗೂ ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಧರಣಿ ನಿರತ ನಿವಾಸಿಗಳು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. “ನಾವು ಮಲ ಮಿಶ್ರಿತ ನೀರನ್ನು ಪಡೆಯುತ್ತೇವೆ; ನಮ್ಮ ಮತಗಳು ನಿಮಗೆ ಬೇಕೇ? ಮಲ ಮಿಶ್ರಿತ ನೀರು ಕುಡಿದ ಮೇಲೆ ನಿಮಗೆ ನಮ್ಮ ಮತ ಬೇಕೇ?” ಎಂದು ಪೋಸ್ಟರ್‌ನಲ್ಲಿ ಬರೆದಿದ್ದಾರೆ.

ವೆಂಗವಯಲ್ ನಿವಾಸಿ ಕನಕರಾಜ್ ಮಾತನಾಡಿ, ಸ್ಥಳೀಯ ಪಂಚಾಯಿತಿ ಚುನಾವಣೆ ಸೇರಿದಂತೆ ಪ್ರತಿ ಚುನಾವಣೆಯನ್ನು ತಪ್ಪಿತಸ್ಥರನ್ನು ಬಂಧಿಸುವವರೆಗೆ ಬಹಿಷ್ಕರಿಸುತ್ತಿದ್ದೇವೆ ಎಂದ ಹೇಳಿದ್ದಾರೆ. ಕಲುಷಿತ ನೀರು ಕುಡಿದು ಅಸ್ವಸ್ಥರಾದ ಮಕ್ಕಳಲ್ಲಿ ಅವರ ಮಗಳೂ ಸೇರಿದ್ದಾಳೆ.

“ನಮ್ಮ ಗ್ರಾಮದ 20 ಕುಟುಂಬಗಳು ಮತ್ತು ಸುಮಾರು 106 ಜನರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಪೊಲೀಸರು ನಮ್ಮ ಜನರನ್ನು ಹಿಂಬಾಲಿಸಿ, ಅವರ ಕೆಲವು ಫೋನ್ ಗಳನ್ನು ಜಪ್ತಿ ಮಾಡಿದ್ದಾರೆ. ಅವರು ನಮ್ಮ ಮತವನ್ನು ಹೇಗೆ ನಿರೀಕ್ಷಿಸುತ್ತಾರೆ? ಸರ್ಕಾರವು ಒದಗಿಸಿದ ನಮ್ಮ ಪಡಿತರ ಚೀಟಿಗಳನ್ನು ಸಹ ಒಪ್ಪಿಸಲು ನಾವು ಸಿದ್ಧರಿದ್ದೇವೆ. ಏಕೆಂದರೆ, ಅವರು ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಿದರು ಎಂಬ ಬಗ್ಗೆ ನಮಗೆ ಅತ್ಯಂತ ನಿರಾಶೆಯಾಗಿದೆ” ಎಂದು ಕನಕರಾಜ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಚುನಾವಣಾ ಬಹಿಷ್ಕಾರದ ವಿರುದ್ಧ ಮನವರಿಕೆ ಮಾಡಲು ಯಾವುದೇ ರಾಜಕೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಹೇಳಿದ ಕನಕರಾಜ್, ಯಾವುದೇ ಪಕ್ಷವು ನಮಗೆ ಭರವಸೆ ನೀಡಲು ಅಥವಾ ತಪ್ಪಿತಸ್ಥರನ್ನು ಹಿಡಿಯುವುದಾಗಿ ಭರವಸೆ ನೀಡಲು ಪ್ರಯತ್ನಿಸಲಿಲ್ಲ. ಒಬ್ಬ ಸರ್ಕಾರಿ ಅಧಿಕಾರಿ ಮಾತ್ರ ನಮ್ಮನ್ನು ಭೇಟಿ ಮಾಡಿ ನಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡರು. ಆದರೆ, ನಾವು ನಮ್ಮ ನಿಲುವಿನಲ್ಲಿ ದೃಢವಾಗಿದ್ದೇವೆ ಮತ್ತು ನಮಗೆ ನ್ಯಾಯ ಸಿಗುವವರೆಗೂ ಮತ ಚಲಾಯಿಸುವುದಿಲ್ಲ ಎಂದರು.

ಡಿಸೆಂಬರ್ 2022 ರಲ್ಲಿ ವೆಂಗವಯಲ್‌ನ ದಲಿತ ಕುಟುಂಬಗಳ ಐದು ಮಕ್ಕಳು ನೀರು ಕಲುಷಿತಗೊಂಡಿದ್ದರಿಂದ ಅಸ್ವಸ್ಥರಾಗಿದ್ದರು. ನಿವಾಸಿಗಳು ನೀರಿನ ಟ್ಯಾಂಕ್ ಅನ್ನು ಪರಿಶೀಲಿಸಿದಾಗ, ಟ್ಯಾಂಕ್ ನೀರು ಮಾನವ ಮಲದಿಂದ ಕಲುಷಿತವಾಗಿರುವುದನ್ನು ಕಂಡು ಬೆಚ್ಚಿಬಿದ್ದರು. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ, ಟ್ಯಾಂಕ್ ಅನ್ನು ಸ್ಚ್ಛಗೊಳಿಸಿ, ಮನೆಗಳನ್ನು ಸಂಪರ್ಕಿಸುವ ಪೈಪ್‌ಗಳನ್ನು ಬದಲಾಯಿಸಲಾಯಿತು.

ಆದರೆ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಬದಲಾಗಿ ಪೊಲೀಸರು ಮತ್ತು ತನಿಖಾಧಿಕಾರಿಗಳು ತಮ್ಮ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ; ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ: ‘ಲವ್ ಜಿಹಾದ್’ ಆರೋಪ ನಿರಾಕರಿಸಿದ ಸರ್ಕಾರ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...