HomeಮುಖಪುಟNEET ವಿರುದ್ಧ ಮಸೂದೆ ಅಂಗೀಕರಿಸಿದ ತಮಿಳುನಾಡು ಸರ್ಕಾರ; ಸಿಎಂ ಸ್ಟಾಲಿನ್ ಹೇಳಿದ್ದೇನು?

NEET ವಿರುದ್ಧ ಮಸೂದೆ ಅಂಗೀಕರಿಸಿದ ತಮಿಳುನಾಡು ಸರ್ಕಾರ; ಸಿಎಂ ಸ್ಟಾಲಿನ್ ಹೇಳಿದ್ದೇನು?

ತಮಿಳುನಾಡು ಸರ್ಕಾರದ ಈ ನಿರ್ಣಯ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಅಶಕ್ತ ಸಮುದಾಯಗಳ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ.

- Advertisement -
- Advertisement -

ನ್ಯಾಷನಲ್ ಎಲಿಜಬಿಲಿಟಿ ಕಮ್ ಎಂಟ್ರೆನ್ಸ್‌ ಟೆಸ್ಟ್‌ (NEET)ನಿಂದ ಸಂಪೂರ್ಣ ವಿನಾಯಿತಿ ನೀಡುವ ಮಸೂದೆಯನ್ನು ತಮಿಳುನಾಡು ಸರ್ಕಾರ ಅಂಗೀಕರಿಸಿದೆ. ನೀಟ್‌ನಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳ ಬದುಕು ದುಸ್ತರವಾಗಿದೆ ಎಂದಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌, ನೀಟ್ ಪರೀಕ್ಷೆಯಿಂದ ಸಂಪೂರ್ಣ ವಿನಾಯಿತಿ ನೀಡುವ ಮಸೂದೆಗೆ ಅಂಗೀಕಾರ ಹಾಕಿದ್ದಾರೆ. ಈ ವೇಳೆ ತಮಿಳುನಾಡು ವಿರೋಧ ಪಕ್ಷ ಎಐಎಡಿಎಂಕೆ ಸಭಾತ್ಯಾಗ ಮಾಡಿದೆ.

“ನೀಟ್ ವಿರುದ್ಧದ ಮಸೂದೆಯನ್ನು ಇಂದು ಅಂಗೀಕರಿಸಲಾಗಿದೆ. ಇದಕ್ಕೆ ನೀವು (ಎಐಎಡಿಎಂಕೆ) ಸಹಕಾರ ನೀಡಬೇಕು. ಎಲ್ಲ ವಿರೋಧ ಪಕ್ಷಗಳಲ್ಲೂ ಇದನ್ನುಒಪ್ಪಿಕೊಳ್ಳಬೇಕು” ಎಂದು ಸ್ಟಾಲಿನ್‌ ಕೋರಿದ್ದಾರೆ. “ನೀಟ್ ವಿರುದ್ಧ ಕಾನೂನು ಸಮರ ಆರಂಭವಾಗಿದೆ. ತಮಿಳುನಾಡು ಸರ್ಕಾರ ನೀಟ್‌ ವಿರುದ್ಧ ನಿರ್ಣಯ ಕೈಗೊಳ್ಳಲಿದೆ” ಎಂದು ಸ್ಟಾಲಿನ್ ಭಾನುವಾರ ಘೋಷಿಸಿದ್ದರು.

“ಪೋಷಕರು ಹಾಗೂ ವಿದ್ಯಾರ್ಥಿಗಳು ತಮಿಳುನಾಡು ಸರ್ಕಾರದ ನಿರ್ಧಾರದಿಂದ ಸಂಪೂರ್ಣ ಗೊಂದಲಕ್ಕೀಡಾಗಿದ್ದಾರೆ. ನೀಟ್ ತಮಿಳುನಾಡಿನಲ್ಲಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲ ಉಂಟಾಗಿದೆ. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ವೈದ್ಯಕೀಯ ಪರೀಕ್ಷೆಯ ಆಕಾಂಕ್ಷಿಯ ಸಾವಿನ ಕುರಿತು ಚರ್ಚೆಗೆ ಸರ್ಕಾರ ಅವಕಾಶ ನೀಡಿಲ್ಲ” ಎಂದು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಆರೋಪಿಸಿದ್ದಾರೆ.

“ಸರ್ಕಾರ NEET ರದ್ದುಗೊಳಿಸುವುದಾಗಿ ಹೇಳಿದ್ದರಿಂದ ವಿದ್ಯಾರ್ಥಿಗಳು ಸರಿಯಾಗಿ ಸಿದ್ಧರಾಗಿರಲಿಲ್ಲ” ಎಂದು ಅವರು ಆಪಾದಿಸಿದ್ದಾರೆ.

ಈ ಬಾರಿಯ ನೀಟ್‌ ಪರೀಕ್ಷೆಗೆ ಮುನ್ನ ಸೇಲಂನಲ್ಲಿ ಧನುಷ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದನು. 19 ವರ್ಷದ ಧನುಷ್ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದರೂ ಸಹ ಎರಡು ಭಾರಿ ನೀಟ್ ಪರೀಕ್ಷೆ ಬರೆದು ಅಗತ್ಯ ಅಂಕಗಳನ್ನು ಪಡೆಯದೆ ಮನನೊಂದಿದ್ದರು. ಅದೇ ರೀತಿ ನೀಟ್‌ನಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದೆ ಹಲವು ವಿದ್ಯಾರ್ಥಿಗಳು ಸಾವಿಗೆ ಶರಣಾಗುತ್ತಿರುವುದನ್ನು ಗಮನಿಸಬಹುದು.

ಮಸೂದೆ ಹೇಳುವುದೇನು?

12ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ವೈದ್ಯಕೀಯ, ದಂತವೈದ್ಯಕೀಯ, ಭಾರತೀಯ ವೈದ್ಯಕೀಯ, ಹೋಮಿಯೋಪತಿ ವಿಷಯಗಳಿಗೆ ಸಂಬಂಧಿಸಿದ ಸ್ನಾತಕ ಪದವಿ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುವುದು. ಪದವಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ನೀಡುವಾಗ ನೀಟ್ ಅವಶ್ಯವಿಲ್ಲ. 12ನೇ ತರಗತಿಯಲ್ಲಿ ನಡೆಸುವ ಅರ್ಹತಾ ಪರೀಕ್ಷೆಗಳ ಅಂಕಗಳನ್ನು ಪರಿಗಣಿಸಿ “ಸಾಮಾನ್ಯ ವಿಧಾನ”ದಲ್ಲಿ ವೈದ್ಯಕೀಯ ಪದವಿ ಕಾಲೇಜುಗಳು ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು.

 ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ತಮಿಳುನಾಡಿನ ನಿರ್ಣಯ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಅಶಕ್ತ ಸಮುದಾಯಗಳ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣದಿಂದ ದೂರ ಉಳಿದು, ಮುಖ್ಯವಾಹಿನಿ ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ತಮಿಳುನಾಡು ಕೈಗೊಂಡಿರುವ ಈ ನಿರ್ಧಾರ ಗ್ರಾಮೀಣ ವಿದ್ಯಾರ್ಥಿಗಳು ವೈದ್ಯರಾಗಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಲವರು ಸ್ಟಾಲಿನ್ ನಿರ್ಧಾರವನ್ನು ಬೆಂಬಲಿಸಿದ್ದಾರೆ.

ಅಂದಹಾಗೆ ಪಳನಿಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ನೀಟ್ ಪರೀಕ್ಷೆಯನ್ನು ತಮಿಳುನಾಡಿನಲ್ಲಿ ಪರಿಚಯಿಸಲಾಯಿತು. ಜಯಲಲಿತಾ ಅವರ ಅವಧಿಯಲ್ಲೂ ನೀಟ್ ಇರಲಿಲ್ಲ ಎಂದು ಸ್ಟಾಲಿನ್‌ ಟೀಕಿಸಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ನೀಟ್ ಪರೀಕ್ಷೆಯಲ್ಲಿ 6 ಅಂಕ ಗಳಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...