Homeಮುಖಪುಟಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

- Advertisement -
- Advertisement -

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸ ನಿಯಮದಂತೆ ಕಾರ್ಡ್ ಪಡೆಯಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ಹೇಳಿದ್ದು, ಅದರ ನಂತರ ತಾಜಾ ಕಾರ್ಡ್‌ಗಳನ್ನು ನೀಡಲಾಗುತ್ತದೆ.

ದಂಪತಿಗಳು ಬೇರೆಯಾಗಲು ಬಯಸಿ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದಾಗ ಪಡಿತರ ಕಾರ್ಡ್‌ನಲ್ಲಿ ಹೆಂಡತಿಯ ಹೆಸರು ಹಾಗೆ ಉಳಿದುಕೊಳ್ಳತ್ತದೆ. ಈ ಸಮಯದಲ್ಲಿ ತನ್ನ ಹೆಂಡತಿಯ ಹೆಸರನ್ನು ತೆಗೆದುಹಾಕಲು ಪತಿ ಸಿದ್ಧನಿಲ್ಲದಿದ್ದರೆ, ಮಹಿಳೆಗೆ ಅರ್ಹವಾದ ಮೂಲಭೂತ ಪ್ರಯೋಜನಗಳು ದಕ್ಕುವುದಿಲ್ಲ. ಆದ್ದರಿಂದ, ಈ ಸಂದರ್ಭದಲ್ಲಿ ಮಹಿಳೆ ಹಿಂದಿನ ಕಾರ್ಡ್‌ನಲ್ಲಿರುವ ಹೆಸರನ್ನು ತೆಗೆದು ಹೊಸ ಕಾರ್ಡ್‌ಗಾಗಿ ಅರ್ಜಿ ಹಾಕಬಹುದು.

ಇದನ್ನೂ ಓದಿ: ‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’ – ಯುಪಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಛೀಮಾರಿ

ಕಂದಾಯ ನಿರೀಕ್ಷಕರ ಪರಿಶೀಲನೆಯ ನಂತರ, ನಾಗರಿಕ ಸರಬರಾಜು ವಲಯದ ಅಧಿಕಾರಿಯು ಈಗಿರುವ ಹೆಸರನ್ನು ತೆಗೆದುಹಾಕಿ, ಮಹಿಳೆಯನ್ನು ‘ಕುಟುಂಬ’ ಎಂದು ನಮೂದಿಸಿ ಹೊಸ ಕಾರ್ಡ್ ನೀಡುವ ಅಧಿಕಾರವನ್ನು ಹೊಂದಿರುತ್ತಾರೆ. ಈ ಸಡಿಲಿಕೆಯು ಅವಿವಾಹಿತ ಒಂಟಿ ಮಹಿಳೆಯರು ಕೂಡ ಅರ್ಹರಾಗಿದ್ದು, ಜೊತೆಗೆ ಇದಕ್ಕೆ ವಿಚ್ಛೇದನ ಕೂಡಾ ಕಡ್ಡಾಯವಲ್ಲ ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಅಸ್ತಿತ್ವದಲ್ಲಿರುವ Vs ಪರಿಷ್ಕೃತ

ಈ ಹಿಂದೆ, ಬೇರ್ಪಟ್ಟ ಮಹಿಳೆ, ತನ್ನ ಮಕ್ಕಳೊಂದಿಗೆ ಅಥವಾ ಇತರ ಅವಲಂಬಿತರೊಂದಿಗೆ ವಾಸಿಸುತ್ತಿದ್ದರೆ, ಅವರು ಕಾನೂನುಬದ್ಧವಾಗಿ ವಿಚ್ಛೇದನ ಪಡೆಯದ ಹೊರತು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸದ ಹೊರತು ಪಡಿತರ ಚೀಟಿಗೆ ಅರ್ಹರಾಗಿರಲಿಲ್ಲ.

ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಅವಿವಾಹಿತ ಮಹಿಳೆಯರು ಪಡಿತರ ಚೀಟಿ ಪಡೆಯಲು ಅರ್ಹರಲ್ಲ, ಮತ್ತು ಅವರು ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದಾಗ ಮಾತ್ರ ಅವರನ್ನು ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಯುಪಿ: 2 ನೇ ತರಗತಿ ಬಾಲಕನನ್ನು ಶಾಲಾ ಕಟ್ಟಡದ ಮೇಲಿಂದ ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ

ಪ್ರತ್ಯೇಕವಾಗಿ ವಾಸಿಸುವ ಒಂಟಿ ಮಹಿಳೆಯರು ಯಾವುದೇ ತೊಂದರೆಯಿಲ್ಲದೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಪರಿಷ್ಕೃತ ನಿಯಮ ಹೇಳುತ್ತದೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ (AIDWA) ತಮಿಳುನಾಡು ಸರ್ಕಾರದ ಈ ತೀರ್ಮಾನವನ್ನು ಸ್ವಾಗತಿಸಿದ್ದು, ಈ ನಿರ್ಧಾರವನ್ನು ಪ್ರಗತಿಪರ ಎಂದು ಶ್ಲಾಘಿಸಿದೆ.

AIDWA ರಾಜ್ಯ ಕಾರ್ಯದರ್ಶಿ ಎಸ್‌ಕೆ ಪೊನ್ನುತ್ತಾಯಿ ಮಾತನಾಡಿ, ಪಡಿತರ ಚೀಟಿ ಇಲ್ಲದ ಕಾರಣ ಕೆಳ ಆರ್ಥಿಕ ವರ್ಗದ ಒಂಟಿ ಮಹಿಳೆಯರು ಪೊಂಗಲ್ ಮತ್ತು ಲಾಕ್‌ಡೌನ್ ಸಮಯದಲ್ಲಿ ನೀಡಲಾದ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆಹಾರ ಭದ್ರತೆಯ ಜೊತೆಗೆ, ಸರ್ಕಾರವು ನೀಡುವ ಎಲ್ಲಾ ಪ್ರಯೋಜನಗಳು ಅಗತ್ಯವಿರುವ ಜನರಿಗೆ ತಲುಪುವುದನ್ನು ಈ ನಿರ್ಧಾರವು ಖಚಿತಪಡಿಸುತ್ತದೆ  ಹೇಳಿದ್ದಾರೆ.

ಒಂಟಿ ಮಹಿಳೆಯರಿಗೆ ಪಡಿತರ ಚೀಟಿ ನೀಡುವಂತೆ ಒತ್ತಾಯಿಸಿ ಹಲವಾರು ಹೋರಾಟಗಳನ್ನು ಸಂಘಟನೆಯು ಮಾಡುತ್ತಾ ಬರುತ್ತಿದೆ.

ಇದನ್ನೂ ಓದಿ: ಅಜೀಂ ಪ್ರೇಮ್‌ಜಿ ದೇಶದ ಅತಿ ದೊಡ್ಡ ದಾನಿ: ದಿನಕ್ಕೆ 27 ಕೋಟಿ ರೂ. ದೇಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...