Homeಮುಖಪುಟಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

- Advertisement -
- Advertisement -

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸ ನಿಯಮದಂತೆ ಕಾರ್ಡ್ ಪಡೆಯಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ಹೇಳಿದ್ದು, ಅದರ ನಂತರ ತಾಜಾ ಕಾರ್ಡ್‌ಗಳನ್ನು ನೀಡಲಾಗುತ್ತದೆ.

ದಂಪತಿಗಳು ಬೇರೆಯಾಗಲು ಬಯಸಿ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದಾಗ ಪಡಿತರ ಕಾರ್ಡ್‌ನಲ್ಲಿ ಹೆಂಡತಿಯ ಹೆಸರು ಹಾಗೆ ಉಳಿದುಕೊಳ್ಳತ್ತದೆ. ಈ ಸಮಯದಲ್ಲಿ ತನ್ನ ಹೆಂಡತಿಯ ಹೆಸರನ್ನು ತೆಗೆದುಹಾಕಲು ಪತಿ ಸಿದ್ಧನಿಲ್ಲದಿದ್ದರೆ, ಮಹಿಳೆಗೆ ಅರ್ಹವಾದ ಮೂಲಭೂತ ಪ್ರಯೋಜನಗಳು ದಕ್ಕುವುದಿಲ್ಲ. ಆದ್ದರಿಂದ, ಈ ಸಂದರ್ಭದಲ್ಲಿ ಮಹಿಳೆ ಹಿಂದಿನ ಕಾರ್ಡ್‌ನಲ್ಲಿರುವ ಹೆಸರನ್ನು ತೆಗೆದು ಹೊಸ ಕಾರ್ಡ್‌ಗಾಗಿ ಅರ್ಜಿ ಹಾಕಬಹುದು.

ಇದನ್ನೂ ಓದಿ: ‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’ – ಯುಪಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಛೀಮಾರಿ

ಕಂದಾಯ ನಿರೀಕ್ಷಕರ ಪರಿಶೀಲನೆಯ ನಂತರ, ನಾಗರಿಕ ಸರಬರಾಜು ವಲಯದ ಅಧಿಕಾರಿಯು ಈಗಿರುವ ಹೆಸರನ್ನು ತೆಗೆದುಹಾಕಿ, ಮಹಿಳೆಯನ್ನು ‘ಕುಟುಂಬ’ ಎಂದು ನಮೂದಿಸಿ ಹೊಸ ಕಾರ್ಡ್ ನೀಡುವ ಅಧಿಕಾರವನ್ನು ಹೊಂದಿರುತ್ತಾರೆ. ಈ ಸಡಿಲಿಕೆಯು ಅವಿವಾಹಿತ ಒಂಟಿ ಮಹಿಳೆಯರು ಕೂಡ ಅರ್ಹರಾಗಿದ್ದು, ಜೊತೆಗೆ ಇದಕ್ಕೆ ವಿಚ್ಛೇದನ ಕೂಡಾ ಕಡ್ಡಾಯವಲ್ಲ ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಅಸ್ತಿತ್ವದಲ್ಲಿರುವ Vs ಪರಿಷ್ಕೃತ

ಈ ಹಿಂದೆ, ಬೇರ್ಪಟ್ಟ ಮಹಿಳೆ, ತನ್ನ ಮಕ್ಕಳೊಂದಿಗೆ ಅಥವಾ ಇತರ ಅವಲಂಬಿತರೊಂದಿಗೆ ವಾಸಿಸುತ್ತಿದ್ದರೆ, ಅವರು ಕಾನೂನುಬದ್ಧವಾಗಿ ವಿಚ್ಛೇದನ ಪಡೆಯದ ಹೊರತು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸದ ಹೊರತು ಪಡಿತರ ಚೀಟಿಗೆ ಅರ್ಹರಾಗಿರಲಿಲ್ಲ.

ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಅವಿವಾಹಿತ ಮಹಿಳೆಯರು ಪಡಿತರ ಚೀಟಿ ಪಡೆಯಲು ಅರ್ಹರಲ್ಲ, ಮತ್ತು ಅವರು ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದಾಗ ಮಾತ್ರ ಅವರನ್ನು ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಯುಪಿ: 2 ನೇ ತರಗತಿ ಬಾಲಕನನ್ನು ಶಾಲಾ ಕಟ್ಟಡದ ಮೇಲಿಂದ ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ

ಪ್ರತ್ಯೇಕವಾಗಿ ವಾಸಿಸುವ ಒಂಟಿ ಮಹಿಳೆಯರು ಯಾವುದೇ ತೊಂದರೆಯಿಲ್ಲದೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಪರಿಷ್ಕೃತ ನಿಯಮ ಹೇಳುತ್ತದೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ (AIDWA) ತಮಿಳುನಾಡು ಸರ್ಕಾರದ ಈ ತೀರ್ಮಾನವನ್ನು ಸ್ವಾಗತಿಸಿದ್ದು, ಈ ನಿರ್ಧಾರವನ್ನು ಪ್ರಗತಿಪರ ಎಂದು ಶ್ಲಾಘಿಸಿದೆ.

AIDWA ರಾಜ್ಯ ಕಾರ್ಯದರ್ಶಿ ಎಸ್‌ಕೆ ಪೊನ್ನುತ್ತಾಯಿ ಮಾತನಾಡಿ, ಪಡಿತರ ಚೀಟಿ ಇಲ್ಲದ ಕಾರಣ ಕೆಳ ಆರ್ಥಿಕ ವರ್ಗದ ಒಂಟಿ ಮಹಿಳೆಯರು ಪೊಂಗಲ್ ಮತ್ತು ಲಾಕ್‌ಡೌನ್ ಸಮಯದಲ್ಲಿ ನೀಡಲಾದ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆಹಾರ ಭದ್ರತೆಯ ಜೊತೆಗೆ, ಸರ್ಕಾರವು ನೀಡುವ ಎಲ್ಲಾ ಪ್ರಯೋಜನಗಳು ಅಗತ್ಯವಿರುವ ಜನರಿಗೆ ತಲುಪುವುದನ್ನು ಈ ನಿರ್ಧಾರವು ಖಚಿತಪಡಿಸುತ್ತದೆ  ಹೇಳಿದ್ದಾರೆ.

ಒಂಟಿ ಮಹಿಳೆಯರಿಗೆ ಪಡಿತರ ಚೀಟಿ ನೀಡುವಂತೆ ಒತ್ತಾಯಿಸಿ ಹಲವಾರು ಹೋರಾಟಗಳನ್ನು ಸಂಘಟನೆಯು ಮಾಡುತ್ತಾ ಬರುತ್ತಿದೆ.

ಇದನ್ನೂ ಓದಿ: ಅಜೀಂ ಪ್ರೇಮ್‌ಜಿ ದೇಶದ ಅತಿ ದೊಡ್ಡ ದಾನಿ: ದಿನಕ್ಕೆ 27 ಕೋಟಿ ರೂ. ದೇಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...