Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

- Advertisement -
- Advertisement -

ತಮಿಳುನಾಡು ವಿಧಾನಸಭೆ ಇಂದು (ಜ.6) ಮತ್ತೊಮ್ಮೆ ಕೋಲಾಹಲಕ್ಕೆ ಸಾಕ್ಷಿಯಾಯಿತು. ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲ ಆರ್‌.ಎನ್‌ ರವಿ ಅವರು ಭಾಷಣ ಮಾಡದೆ ಸದನದಿಂದ ಹೊರ ನಡೆದರು.

ವಿಧಾನಸಭೆ ಕಲಾಪ ಆರಂಭಗೊಂಡಾಗ ತಮಿಳುನಾಡು ನಾಡಗೀತೆ ‘ತಮಿಳ್ ತಾಯಿ ವಝುತ್ತು’ ಮಾತ್ರ ನುಡಿಸಲಾಗಿದೆ. ರಾಷ್ಟ್ರಗೀತೆ ನುಡಿಸಿಲ್ಲ. ಈ ಮೂಲಕ ರಾಷ್ಟ್ರಗೀತೆ ಮತ್ತು ಸಂವಿಧಾನಕ್ಕೆ ಸರ್ಕಾರ ಅವಮಾನ ಮಾಡಿದೆ ಎಂದು ರಾಜ್ಯಪಾಲರ ಕಚೇರಿ ಆರೋಪಿಸಿದೆ.

ವರದಿಗಳ ಪ್ರಕಾರ, ಇಂದು ಬೆಳಿಗ್ಗೆ 9.29ಕ್ಕೆ ನಾಡಗೀತೆ ‘ತಮಿಳ್ ತಾಯಿ ವಝುತ್ತು’ ನುಡಿಸುವ ಮೂಲಕ ವಿಧಾನಸಭೆಯ ಕಲಾಪ ಆರಂಭಗೊಂಡಿತು. ಇದಾದ ತಕ್ಷಣ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ವಿಷಯವೊಂದರ ಸಂಬಂಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಎಐಎಡಿಎಂಕೆ ಶಾಸಕರು ಕೂಡ ಬಾವಿಗಿಳಿದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಈ ಗದ್ದಲದ ನಡುವೆಯೇ ರಾಜ್ಯಪಾಲರು ಅಲ್ಲಿದ್ದವರಿಗೆ ಕೇಳಿಸದಂತೆ ಮಾತುಗಳನ್ನು ಹೇಳಿ 9:32ಕ್ಕೆ ವಿಧಾನಸಭೆಯಿಂದ ನಿರ್ಗಮಿಸಿದರು.

ರಾಜ್ಯಪಾಲರ ನಿರ್ಗಮನದ ನಂತರ, ಸ್ಪೀಕರ್ ಎಂ. ಅಪ್ಪಾವು ಅವರು ರಾಜ್ಯ ಸರ್ಕಾರ ಸಾಂಪ್ರದಾಯಿಕವಾಗಿ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಎಐಎಡಿಎಂಕೆ ಶಾಸಕರು ಪ್ರತಿಭಟನೆ ವ್ಯಕ್ತಪಡಿಸುತ್ತ ಹೊರ ಹೋದರು. ಈ ವೇಳೆ ಬಿಜೆಪಿ, ಪಿಎಂಕೆ ಮತ್ತು ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಸದಸ್ಯರು ಕೂಡ ಪ್ರತ್ಯೇಕ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ವ್ಯಕ್ತಪಡಿಸಿ ಸದನದಿಂದ ಹೊರ ನಡೆದರು.

ವಿಧಾನಸಭೆಯ ಕೋಲಾಹಲದ ಕುರಿತು ಎಕ್ಸ್‌ ಪೋಸ್ಟ್‌ ಮೂಲಕ ರಾಜಭವನ ಪ್ರತಿಕ್ರಿಯಿಸಿದ್ದು, “ಇಂದು ತಮಿಳುನಾಡು ವಿಧಾನಸಭೆಯಲ್ಲಿ ಭಾರತದ ಸಂವಿಧಾನ ಮತ್ತು ರಾಷ್ಟ್ರಗೀತೆಯನ್ನು ಮತ್ತೊಮ್ಮೆ ಅವಮಾನಿಸಲಾಗಿದೆ. ರಾಷ್ಟ್ರಗೀತೆಯನ್ನು ಗೌರವಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೊದಲ ಮೂಲಭೂತ ಕರ್ತವ್ಯವಾಗಿದೆ. ರಾಜ್ಯಪಾಲರ ಭಾಷಣದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ಇದನ್ನು ನುಡಿಸಲಾಗುತ್ತದೆ” ಎಂದು ಬರೆದುಕೊಂಡಿದೆ.

ಮುಂದುವರಿದು, ವಿಧಾನಸಭೆಯಲ್ಲಿ ರಾಜ್ಯಪಾಲರ ಆಗಮನದ ನಂತರ ತಮಿಳು ನಾಡಗೀತೆ ಮಾತ್ರ ನುಡಿಸಲಾಗಿದೆ. ರಾಜ್ಯಗೀತೆಯ ಮೊದಲು ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ರಾಜ್ಯಪಾಲರು ಪದೇ ಪದೇ ಒತ್ತಾಯಿಸಿದರು. ರಾಜ್ಯಪಾಲರು ಸದನದ ಸಾಂವಿಧಾನಿಕ ಕರ್ತವ್ಯವನ್ನು ಗೌರವಯುತವಾಗಿ ನೆನಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಸ್ಪೀಕರ್ ಎಂ. ಅಪ್ಪಾವು ಅವರಿಗೆ ರಾಷ್ಟ್ರಗೀತೆ ನುಡಿಸುವಂತೆ ಕೋರಿದ್ದಾರೆ. ಅವರ ನಿರಾಕರಣೆಯು ರಾಜ್ಯಪಾಲರ ಬೇಸರಕ್ಕೆ ಕಾರಣವಾಗಿದೆ. ಹಾಗಾಗಿ, ಅವರು ಸದನದಿಂದ ಹೊರನಡೆದರು” ಎಂದು ಹೇಳಿದೆ.

ತಮಿಳುನಾಡು ವಿಧಾನಸಭೆಯ ಸ್ಥಾಪಿತ ನಿಯಮಗಳ ಪ್ರಕಾರ, ಕಲಾಪಗಳ ಪ್ರಾರಂಭದಲ್ಲಿ ತಮಿಳು ನಾಡಗೀತೆಯನ್ನು ನುಡಿಸಲಾಗುತ್ತದೆ. ಸ್ಪೀಕರ್ ಅವರು ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಿದ ನಂತರ ದಿನದ ವ್ಯವಹಾರದ ಮುಕ್ತಾಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ ಎಂದು ವರದಿಗಳು ಹೇಳಿವೆ.

ತಮ್ಮ ಅನುಮತಿ ಇಲ್ಲದೆ ವಿಧಾನಸಭೆಯೊಳಗೆ ನಡೆದ ಯಾವುದೇ ಬೆಳವಣಿಗೆಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಸ್ಪೀಕರ್ ಅಪ್ಪಾವು ಸೂಚಿಸಿದ್ದು, ಉಲ್ಲಂಘನೆಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...