Homeಮುಖಪುಟತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಗೆ ಸಂಬಂಧಿಸಿದ ಗಮನಾರ್ಹ ಅಂಶವೊಂದು ಹೊರಬಿದ್ದಿದ್ದು, ಸಮಿತಿಯು ಸ್ವೀಕರಿಸಿದ 2,741 ಪ್ರತಿಕ್ರಿಯೆಗಳಲ್ಲಿ 1,400 ಪ್ರತಿಕ್ರಿಯೆಗಳು ಒಂದೇ ರೀತಿಯದ್ದಾಗಿತ್ತು. ಅವುಗಳು ಜಾತಿ ಆಧಾರಿತ ಮೀಸಲಾತಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಿರುನಲ್ವೇಲಿಯ ಕಾಲೇಜೊಂದರಿಂದ ಬಂದಿರುವ ಈ ಪ್ರತಿಕ್ರಿಯೆಗಳಿಂದ ನ್ಯಾಯಮೂರ್ತಿ ಚಂದ್ರು ಸಮಿತಿಯು ದಿಗ್ಭ್ರಮೆಗೊಂಡಿದೆ. ಇದು “ತಮಿಳುನಾಡಿನ ಸಾಮಾಜಿಕ ನ್ಯಾಯದ ಇತಿಹಾಸದ ಅಜ್ಞಾನ ಮತ್ತು ಸಂಪೂರ್ಣ ತಿಳುವಳಿಕೆಯ ಕೊರತೆ” ಎಂದು ವಿಷಾದಿಸಿದೆ. ಹಲವಾರು ಇತರ ಪ್ರತಿಕ್ರಿಯೆಗಳು ಸಹ ನಿರಾಶಾದಾಯಕವಾಗಿದ್ದವು. ಅವುಗಳನ್ನು ಚಾಟ್‌ ಜಿಪಿಟಿ – ಎಐ ಬೋಟ್‌ನ ಸಹಾಯದಿಂದ ಬರೆಯಲಾಗಿದೆ ಎಂದು ವರದಿ ತಿಳಿಸಿದೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಚಂದ್ರು ಸಮಿತಿ ತನ್ನ 600 ಪುಟಗಳ ವರದಿಯನ್ನು ಜೂನ್ 18, 2024 ರಂದು ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ. ತಮ್ಮ ವರದಿಯಲ್ಲಿ, ನ್ಯಾಯಮೂರ್ತಿ ಚಂದ್ರು ಅವರು ಆಗಸ್ಟ್ 9, 2023 ರಂದು ದಲಿತ ಮಕ್ಕಳ ಮೇಲಿನ ದಾಳಿಯ ದಿನವನ್ನು “ತಮಿಳುನಾಡು ಶಾಲಾ ಶಿಕ್ಷಣದ ಇತಿಹಾಸದಲ್ಲಿ ಕರಾಳ ದಿನ” ಎಂದು ಖಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯವನ್ನು ಪರಿಹರಿಸಲು ಕ್ರಮಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಹೊತ್ತಿದ್ದ ಚಂದ್ರು ಅವರು, ಜಾತಿ ಭಿನ್ನತೆಗಳು ವ್ಯಾಪಕವಾಗಿವೆ ಎಂದು ಕಂಡುಕೊಂಡಿದ್ದಾರೆ. ಇದು “ಶೈಕ್ಷಣಿಕ ವ್ಯವಸ್ಥೆಯ ಮಿತಿಗಳನ್ನು ಮೀರಿ ಸಮಾಜವನ್ನು ತೀವ್ರವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ಶಾಲೆಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿದರೆ ಸಾಲುವುದಿಲ್ಲ. ಶಾಶ್ವತ ಪರಿಹಾರ ಬೇಕು ಮತ್ತು ಜಾತಿರಹಿತ ಸಮಾಜವನ್ನು ಸಾಧಿಸಲು ಸಮಗ್ರ ವಿಧಾನ ಬೇಕು ಎಂದು ವರದಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರು ಸಮಿತಿಗೆ 2,741 ಪ್ರತಿಕ್ರಿಯೆಗಳು ಸರ್ಕಾರಿ ಇಲಾಖೆಗಳು, ವಿಶ್ವವಿದ್ಯಾಲಯಗಳು, ಕಾಲೇಜುಗಳು, ಶಾಲೆಗಳು, ಎನ್‌ಜಿಒಗಳು ಮತ್ತು ಇತರ ವ್ಯಕ್ತಿಗಳಿಂದ ಬಂದಿವೆ. ಇದರಲ್ಲಿ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಘಟನೆಗಳು ಮತ್ತು ದೊಡ್ಡ ರಾಜಕೀಯ ಪಕ್ಷಗಳ ಹೊರತಾಗಿ ತಿರುನೆಲ್ವೇಲಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಿಂದ ಗಮನಾರ್ಹ ಮತ್ತು ಗಂಭೀರವಾದ ಪ್ರತಿಕ್ರಿಯೆಗಳು ಬಂದಿವೆ ಎಂದು ವರದಿ ಹೇಳಿದೆ.

ಈ ಕಾಲೇಜಿನಿಂದ ಬಂದಿರುವ 1,300ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳಿಂದ ಇಂತಹ ಅಭಿಯಾನ ನಡೆಸಿದ್ದಕ್ಕಾಗಿ ವರದಿಯು ಪ್ರಾಂಶುಪಾಲರನ್ನು ಟೀಕಿಸಿದೆ. ಏಕೆಂದರೆ, 1,340 ಪ್ರತಿಕ್ರಿಯೆಗಳನ್ನು ಒಂದೇ ರೀತಿಯ ಪೋಸ್ಟ್ ಕಾರ್ಡ್‌ಗಳಲ್ಲಿ ಕಳುಹಿಸಲಾಗಿತ್ತು. ಅವುಗಳು ಮೀಸಲಾತಿಯನ್ನು ಅಂತ್ಯಗೊಳಿಸಿ ಎಂಬ ಒಂದೇ ರೀತಿಯ ಸಂದೇಶಗಳನ್ನು ಒಳಗೊಂಡಿತ್ತು. ಗಮನಾರ್ಹವಾಗಿ, ಪೋಸ್ಟ್‌ ಕಾರ್ಡ್‌ಗಳಲ್ಲಿ”ಜಾತಿ ಆಧಾರಿತ ಯಾವುದೇ ಶೈಕ್ಷಣಿಕ, ಉದ್ಯೋಗ/ಸವಲತ್ತುಗಳನ್ನು ಯಾರಿಗೂ ನೀಡಬಾರದು. ಆರ್ಥಿಕ ಪ್ರೋತ್ಸಾಹ ನೀಡಬಹುದು” ಎಂಬ ಒಂದೇ ರೀತಿಯ ಸಾಲುಗಳಿದ್ದವು ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಿಪಡಿಸಲು ಪ್ರೋತ್ಸಾಹಿಸುವುದು ಉತ್ತೇಜನಕಾರಿಯಾದರೂ, ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಒತ್ತಾಯಿಸುವುದು ಸರಿಯಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೋರಿ ನಾವು ಕಳುಹಿಸಿರುವ ನೋಟಿಸ್‌ಗೆ ವೈಯಕ್ತಿವಾಗಿ ಪ್ರತಿಕ್ರಿಯಿಸಲು ಕಾಲೇಜಿನ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಪ್ರಾಂಶುಪಾಲರು ತಮ್ಮದೇ ಅಭಿಪ್ರಾಯ ಹೊಂದಿರಬಹುದು. ಆದರೆ, ಅದನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸರಿಯಲ್ಲ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಅಭಿಪ್ರಾಯ ತಿಳಿಸಬೇಕಿತ್ತು. ಮೀಸಲಾತಿ ರದ್ದತಿಯ ಕೂಗು ನ್ಯಾಯಸಮ್ಮತವಲ್ಲ ಎಂದು ಕಂಡುಬಂದಿದೆ. ಹಾಗಾಗಿ, ಆ ಸಲಹೆಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್ ವಿವರಿಸಿದೆ.

ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಮಾಡಿರುವ ಪ್ರಮುಖ ಶಿಫಾರಸುಗಳ ವಿವರಣೆ ಕೆಳಗಿದೆ. ಓದಲು ಲಿಂಕ್ ಒತ್ತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...