Homeಮುಖಪುಟತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಗೆ ಸಂಬಂಧಿಸಿದ ಗಮನಾರ್ಹ ಅಂಶವೊಂದು ಹೊರಬಿದ್ದಿದ್ದು, ಸಮಿತಿಯು ಸ್ವೀಕರಿಸಿದ 2,741 ಪ್ರತಿಕ್ರಿಯೆಗಳಲ್ಲಿ 1,400 ಪ್ರತಿಕ್ರಿಯೆಗಳು ಒಂದೇ ರೀತಿಯದ್ದಾಗಿತ್ತು. ಅವುಗಳು ಜಾತಿ ಆಧಾರಿತ ಮೀಸಲಾತಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಿರುನಲ್ವೇಲಿಯ ಕಾಲೇಜೊಂದರಿಂದ ಬಂದಿರುವ ಈ ಪ್ರತಿಕ್ರಿಯೆಗಳಿಂದ ನ್ಯಾಯಮೂರ್ತಿ ಚಂದ್ರು ಸಮಿತಿಯು ದಿಗ್ಭ್ರಮೆಗೊಂಡಿದೆ. ಇದು “ತಮಿಳುನಾಡಿನ ಸಾಮಾಜಿಕ ನ್ಯಾಯದ ಇತಿಹಾಸದ ಅಜ್ಞಾನ ಮತ್ತು ಸಂಪೂರ್ಣ ತಿಳುವಳಿಕೆಯ ಕೊರತೆ” ಎಂದು ವಿಷಾದಿಸಿದೆ. ಹಲವಾರು ಇತರ ಪ್ರತಿಕ್ರಿಯೆಗಳು ಸಹ ನಿರಾಶಾದಾಯಕವಾಗಿದ್ದವು. ಅವುಗಳನ್ನು ಚಾಟ್‌ ಜಿಪಿಟಿ – ಎಐ ಬೋಟ್‌ನ ಸಹಾಯದಿಂದ ಬರೆಯಲಾಗಿದೆ ಎಂದು ವರದಿ ತಿಳಿಸಿದೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಚಂದ್ರು ಸಮಿತಿ ತನ್ನ 600 ಪುಟಗಳ ವರದಿಯನ್ನು ಜೂನ್ 18, 2024 ರಂದು ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ. ತಮ್ಮ ವರದಿಯಲ್ಲಿ, ನ್ಯಾಯಮೂರ್ತಿ ಚಂದ್ರು ಅವರು ಆಗಸ್ಟ್ 9, 2023 ರಂದು ದಲಿತ ಮಕ್ಕಳ ಮೇಲಿನ ದಾಳಿಯ ದಿನವನ್ನು “ತಮಿಳುನಾಡು ಶಾಲಾ ಶಿಕ್ಷಣದ ಇತಿಹಾಸದಲ್ಲಿ ಕರಾಳ ದಿನ” ಎಂದು ಖಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯವನ್ನು ಪರಿಹರಿಸಲು ಕ್ರಮಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಹೊತ್ತಿದ್ದ ಚಂದ್ರು ಅವರು, ಜಾತಿ ಭಿನ್ನತೆಗಳು ವ್ಯಾಪಕವಾಗಿವೆ ಎಂದು ಕಂಡುಕೊಂಡಿದ್ದಾರೆ. ಇದು “ಶೈಕ್ಷಣಿಕ ವ್ಯವಸ್ಥೆಯ ಮಿತಿಗಳನ್ನು ಮೀರಿ ಸಮಾಜವನ್ನು ತೀವ್ರವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ಶಾಲೆಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿದರೆ ಸಾಲುವುದಿಲ್ಲ. ಶಾಶ್ವತ ಪರಿಹಾರ ಬೇಕು ಮತ್ತು ಜಾತಿರಹಿತ ಸಮಾಜವನ್ನು ಸಾಧಿಸಲು ಸಮಗ್ರ ವಿಧಾನ ಬೇಕು ಎಂದು ವರದಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರು ಸಮಿತಿಗೆ 2,741 ಪ್ರತಿಕ್ರಿಯೆಗಳು ಸರ್ಕಾರಿ ಇಲಾಖೆಗಳು, ವಿಶ್ವವಿದ್ಯಾಲಯಗಳು, ಕಾಲೇಜುಗಳು, ಶಾಲೆಗಳು, ಎನ್‌ಜಿಒಗಳು ಮತ್ತು ಇತರ ವ್ಯಕ್ತಿಗಳಿಂದ ಬಂದಿವೆ. ಇದರಲ್ಲಿ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಘಟನೆಗಳು ಮತ್ತು ದೊಡ್ಡ ರಾಜಕೀಯ ಪಕ್ಷಗಳ ಹೊರತಾಗಿ ತಿರುನೆಲ್ವೇಲಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಿಂದ ಗಮನಾರ್ಹ ಮತ್ತು ಗಂಭೀರವಾದ ಪ್ರತಿಕ್ರಿಯೆಗಳು ಬಂದಿವೆ ಎಂದು ವರದಿ ಹೇಳಿದೆ.

ಈ ಕಾಲೇಜಿನಿಂದ ಬಂದಿರುವ 1,300ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳಿಂದ ಇಂತಹ ಅಭಿಯಾನ ನಡೆಸಿದ್ದಕ್ಕಾಗಿ ವರದಿಯು ಪ್ರಾಂಶುಪಾಲರನ್ನು ಟೀಕಿಸಿದೆ. ಏಕೆಂದರೆ, 1,340 ಪ್ರತಿಕ್ರಿಯೆಗಳನ್ನು ಒಂದೇ ರೀತಿಯ ಪೋಸ್ಟ್ ಕಾರ್ಡ್‌ಗಳಲ್ಲಿ ಕಳುಹಿಸಲಾಗಿತ್ತು. ಅವುಗಳು ಮೀಸಲಾತಿಯನ್ನು ಅಂತ್ಯಗೊಳಿಸಿ ಎಂಬ ಒಂದೇ ರೀತಿಯ ಸಂದೇಶಗಳನ್ನು ಒಳಗೊಂಡಿತ್ತು. ಗಮನಾರ್ಹವಾಗಿ, ಪೋಸ್ಟ್‌ ಕಾರ್ಡ್‌ಗಳಲ್ಲಿ”ಜಾತಿ ಆಧಾರಿತ ಯಾವುದೇ ಶೈಕ್ಷಣಿಕ, ಉದ್ಯೋಗ/ಸವಲತ್ತುಗಳನ್ನು ಯಾರಿಗೂ ನೀಡಬಾರದು. ಆರ್ಥಿಕ ಪ್ರೋತ್ಸಾಹ ನೀಡಬಹುದು” ಎಂಬ ಒಂದೇ ರೀತಿಯ ಸಾಲುಗಳಿದ್ದವು ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಿಪಡಿಸಲು ಪ್ರೋತ್ಸಾಹಿಸುವುದು ಉತ್ತೇಜನಕಾರಿಯಾದರೂ, ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಒತ್ತಾಯಿಸುವುದು ಸರಿಯಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೋರಿ ನಾವು ಕಳುಹಿಸಿರುವ ನೋಟಿಸ್‌ಗೆ ವೈಯಕ್ತಿವಾಗಿ ಪ್ರತಿಕ್ರಿಯಿಸಲು ಕಾಲೇಜಿನ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಪ್ರಾಂಶುಪಾಲರು ತಮ್ಮದೇ ಅಭಿಪ್ರಾಯ ಹೊಂದಿರಬಹುದು. ಆದರೆ, ಅದನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸರಿಯಲ್ಲ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಅಭಿಪ್ರಾಯ ತಿಳಿಸಬೇಕಿತ್ತು. ಮೀಸಲಾತಿ ರದ್ದತಿಯ ಕೂಗು ನ್ಯಾಯಸಮ್ಮತವಲ್ಲ ಎಂದು ಕಂಡುಬಂದಿದೆ. ಹಾಗಾಗಿ, ಆ ಸಲಹೆಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್ ವಿವರಿಸಿದೆ.

ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಮಾಡಿರುವ ಪ್ರಮುಖ ಶಿಫಾರಸುಗಳ ವಿವರಣೆ ಕೆಳಗಿದೆ. ಓದಲು ಲಿಂಕ್ ಒತ್ತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...