Homeಮುಖಪುಟತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಗೆ ಸಂಬಂಧಿಸಿದ ಗಮನಾರ್ಹ ಅಂಶವೊಂದು ಹೊರಬಿದ್ದಿದ್ದು, ಸಮಿತಿಯು ಸ್ವೀಕರಿಸಿದ 2,741 ಪ್ರತಿಕ್ರಿಯೆಗಳಲ್ಲಿ 1,400 ಪ್ರತಿಕ್ರಿಯೆಗಳು ಒಂದೇ ರೀತಿಯದ್ದಾಗಿತ್ತು. ಅವುಗಳು ಜಾತಿ ಆಧಾರಿತ ಮೀಸಲಾತಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಿರುನಲ್ವೇಲಿಯ ಕಾಲೇಜೊಂದರಿಂದ ಬಂದಿರುವ ಈ ಪ್ರತಿಕ್ರಿಯೆಗಳಿಂದ ನ್ಯಾಯಮೂರ್ತಿ ಚಂದ್ರು ಸಮಿತಿಯು ದಿಗ್ಭ್ರಮೆಗೊಂಡಿದೆ. ಇದು “ತಮಿಳುನಾಡಿನ ಸಾಮಾಜಿಕ ನ್ಯಾಯದ ಇತಿಹಾಸದ ಅಜ್ಞಾನ ಮತ್ತು ಸಂಪೂರ್ಣ ತಿಳುವಳಿಕೆಯ ಕೊರತೆ” ಎಂದು ವಿಷಾದಿಸಿದೆ. ಹಲವಾರು ಇತರ ಪ್ರತಿಕ್ರಿಯೆಗಳು ಸಹ ನಿರಾಶಾದಾಯಕವಾಗಿದ್ದವು. ಅವುಗಳನ್ನು ಚಾಟ್‌ ಜಿಪಿಟಿ – ಎಐ ಬೋಟ್‌ನ ಸಹಾಯದಿಂದ ಬರೆಯಲಾಗಿದೆ ಎಂದು ವರದಿ ತಿಳಿಸಿದೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಚಂದ್ರು ಸಮಿತಿ ತನ್ನ 600 ಪುಟಗಳ ವರದಿಯನ್ನು ಜೂನ್ 18, 2024 ರಂದು ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ. ತಮ್ಮ ವರದಿಯಲ್ಲಿ, ನ್ಯಾಯಮೂರ್ತಿ ಚಂದ್ರು ಅವರು ಆಗಸ್ಟ್ 9, 2023 ರಂದು ದಲಿತ ಮಕ್ಕಳ ಮೇಲಿನ ದಾಳಿಯ ದಿನವನ್ನು “ತಮಿಳುನಾಡು ಶಾಲಾ ಶಿಕ್ಷಣದ ಇತಿಹಾಸದಲ್ಲಿ ಕರಾಳ ದಿನ” ಎಂದು ಖಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯವನ್ನು ಪರಿಹರಿಸಲು ಕ್ರಮಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಹೊತ್ತಿದ್ದ ಚಂದ್ರು ಅವರು, ಜಾತಿ ಭಿನ್ನತೆಗಳು ವ್ಯಾಪಕವಾಗಿವೆ ಎಂದು ಕಂಡುಕೊಂಡಿದ್ದಾರೆ. ಇದು “ಶೈಕ್ಷಣಿಕ ವ್ಯವಸ್ಥೆಯ ಮಿತಿಗಳನ್ನು ಮೀರಿ ಸಮಾಜವನ್ನು ತೀವ್ರವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ಶಾಲೆಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿದರೆ ಸಾಲುವುದಿಲ್ಲ. ಶಾಶ್ವತ ಪರಿಹಾರ ಬೇಕು ಮತ್ತು ಜಾತಿರಹಿತ ಸಮಾಜವನ್ನು ಸಾಧಿಸಲು ಸಮಗ್ರ ವಿಧಾನ ಬೇಕು ಎಂದು ವರದಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರು ಸಮಿತಿಗೆ 2,741 ಪ್ರತಿಕ್ರಿಯೆಗಳು ಸರ್ಕಾರಿ ಇಲಾಖೆಗಳು, ವಿಶ್ವವಿದ್ಯಾಲಯಗಳು, ಕಾಲೇಜುಗಳು, ಶಾಲೆಗಳು, ಎನ್‌ಜಿಒಗಳು ಮತ್ತು ಇತರ ವ್ಯಕ್ತಿಗಳಿಂದ ಬಂದಿವೆ. ಇದರಲ್ಲಿ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಘಟನೆಗಳು ಮತ್ತು ದೊಡ್ಡ ರಾಜಕೀಯ ಪಕ್ಷಗಳ ಹೊರತಾಗಿ ತಿರುನೆಲ್ವೇಲಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಿಂದ ಗಮನಾರ್ಹ ಮತ್ತು ಗಂಭೀರವಾದ ಪ್ರತಿಕ್ರಿಯೆಗಳು ಬಂದಿವೆ ಎಂದು ವರದಿ ಹೇಳಿದೆ.

ಈ ಕಾಲೇಜಿನಿಂದ ಬಂದಿರುವ 1,300ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳಿಂದ ಇಂತಹ ಅಭಿಯಾನ ನಡೆಸಿದ್ದಕ್ಕಾಗಿ ವರದಿಯು ಪ್ರಾಂಶುಪಾಲರನ್ನು ಟೀಕಿಸಿದೆ. ಏಕೆಂದರೆ, 1,340 ಪ್ರತಿಕ್ರಿಯೆಗಳನ್ನು ಒಂದೇ ರೀತಿಯ ಪೋಸ್ಟ್ ಕಾರ್ಡ್‌ಗಳಲ್ಲಿ ಕಳುಹಿಸಲಾಗಿತ್ತು. ಅವುಗಳು ಮೀಸಲಾತಿಯನ್ನು ಅಂತ್ಯಗೊಳಿಸಿ ಎಂಬ ಒಂದೇ ರೀತಿಯ ಸಂದೇಶಗಳನ್ನು ಒಳಗೊಂಡಿತ್ತು. ಗಮನಾರ್ಹವಾಗಿ, ಪೋಸ್ಟ್‌ ಕಾರ್ಡ್‌ಗಳಲ್ಲಿ”ಜಾತಿ ಆಧಾರಿತ ಯಾವುದೇ ಶೈಕ್ಷಣಿಕ, ಉದ್ಯೋಗ/ಸವಲತ್ತುಗಳನ್ನು ಯಾರಿಗೂ ನೀಡಬಾರದು. ಆರ್ಥಿಕ ಪ್ರೋತ್ಸಾಹ ನೀಡಬಹುದು” ಎಂಬ ಒಂದೇ ರೀತಿಯ ಸಾಲುಗಳಿದ್ದವು ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಿಪಡಿಸಲು ಪ್ರೋತ್ಸಾಹಿಸುವುದು ಉತ್ತೇಜನಕಾರಿಯಾದರೂ, ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಒತ್ತಾಯಿಸುವುದು ಸರಿಯಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೋರಿ ನಾವು ಕಳುಹಿಸಿರುವ ನೋಟಿಸ್‌ಗೆ ವೈಯಕ್ತಿವಾಗಿ ಪ್ರತಿಕ್ರಿಯಿಸಲು ಕಾಲೇಜಿನ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಪ್ರಾಂಶುಪಾಲರು ತಮ್ಮದೇ ಅಭಿಪ್ರಾಯ ಹೊಂದಿರಬಹುದು. ಆದರೆ, ಅದನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸರಿಯಲ್ಲ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಅಭಿಪ್ರಾಯ ತಿಳಿಸಬೇಕಿತ್ತು. ಮೀಸಲಾತಿ ರದ್ದತಿಯ ಕೂಗು ನ್ಯಾಯಸಮ್ಮತವಲ್ಲ ಎಂದು ಕಂಡುಬಂದಿದೆ. ಹಾಗಾಗಿ, ಆ ಸಲಹೆಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್ ವಿವರಿಸಿದೆ.

ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಮಾಡಿರುವ ಪ್ರಮುಖ ಶಿಫಾರಸುಗಳ ವಿವರಣೆ ಕೆಳಗಿದೆ. ಓದಲು ಲಿಂಕ್ ಒತ್ತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...