Homeಮುಖಪುಟತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಗೆ ಸಂಬಂಧಿಸಿದ ಗಮನಾರ್ಹ ಅಂಶವೊಂದು ಹೊರಬಿದ್ದಿದ್ದು, ಸಮಿತಿಯು ಸ್ವೀಕರಿಸಿದ 2,741 ಪ್ರತಿಕ್ರಿಯೆಗಳಲ್ಲಿ 1,400 ಪ್ರತಿಕ್ರಿಯೆಗಳು ಒಂದೇ ರೀತಿಯದ್ದಾಗಿತ್ತು. ಅವುಗಳು ಜಾತಿ ಆಧಾರಿತ ಮೀಸಲಾತಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಿರುನಲ್ವೇಲಿಯ ಕಾಲೇಜೊಂದರಿಂದ ಬಂದಿರುವ ಈ ಪ್ರತಿಕ್ರಿಯೆಗಳಿಂದ ನ್ಯಾಯಮೂರ್ತಿ ಚಂದ್ರು ಸಮಿತಿಯು ದಿಗ್ಭ್ರಮೆಗೊಂಡಿದೆ. ಇದು “ತಮಿಳುನಾಡಿನ ಸಾಮಾಜಿಕ ನ್ಯಾಯದ ಇತಿಹಾಸದ ಅಜ್ಞಾನ ಮತ್ತು ಸಂಪೂರ್ಣ ತಿಳುವಳಿಕೆಯ ಕೊರತೆ” ಎಂದು ವಿಷಾದಿಸಿದೆ. ಹಲವಾರು ಇತರ ಪ್ರತಿಕ್ರಿಯೆಗಳು ಸಹ ನಿರಾಶಾದಾಯಕವಾಗಿದ್ದವು. ಅವುಗಳನ್ನು ಚಾಟ್‌ ಜಿಪಿಟಿ – ಎಐ ಬೋಟ್‌ನ ಸಹಾಯದಿಂದ ಬರೆಯಲಾಗಿದೆ ಎಂದು ವರದಿ ತಿಳಿಸಿದೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಚಂದ್ರು ಸಮಿತಿ ತನ್ನ 600 ಪುಟಗಳ ವರದಿಯನ್ನು ಜೂನ್ 18, 2024 ರಂದು ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ. ತಮ್ಮ ವರದಿಯಲ್ಲಿ, ನ್ಯಾಯಮೂರ್ತಿ ಚಂದ್ರು ಅವರು ಆಗಸ್ಟ್ 9, 2023 ರಂದು ದಲಿತ ಮಕ್ಕಳ ಮೇಲಿನ ದಾಳಿಯ ದಿನವನ್ನು “ತಮಿಳುನಾಡು ಶಾಲಾ ಶಿಕ್ಷಣದ ಇತಿಹಾಸದಲ್ಲಿ ಕರಾಳ ದಿನ” ಎಂದು ಖಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯವನ್ನು ಪರಿಹರಿಸಲು ಕ್ರಮಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಹೊತ್ತಿದ್ದ ಚಂದ್ರು ಅವರು, ಜಾತಿ ಭಿನ್ನತೆಗಳು ವ್ಯಾಪಕವಾಗಿವೆ ಎಂದು ಕಂಡುಕೊಂಡಿದ್ದಾರೆ. ಇದು “ಶೈಕ್ಷಣಿಕ ವ್ಯವಸ್ಥೆಯ ಮಿತಿಗಳನ್ನು ಮೀರಿ ಸಮಾಜವನ್ನು ತೀವ್ರವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ಶಾಲೆಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿದರೆ ಸಾಲುವುದಿಲ್ಲ. ಶಾಶ್ವತ ಪರಿಹಾರ ಬೇಕು ಮತ್ತು ಜಾತಿರಹಿತ ಸಮಾಜವನ್ನು ಸಾಧಿಸಲು ಸಮಗ್ರ ವಿಧಾನ ಬೇಕು ಎಂದು ವರದಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರು ಸಮಿತಿಗೆ 2,741 ಪ್ರತಿಕ್ರಿಯೆಗಳು ಸರ್ಕಾರಿ ಇಲಾಖೆಗಳು, ವಿಶ್ವವಿದ್ಯಾಲಯಗಳು, ಕಾಲೇಜುಗಳು, ಶಾಲೆಗಳು, ಎನ್‌ಜಿಒಗಳು ಮತ್ತು ಇತರ ವ್ಯಕ್ತಿಗಳಿಂದ ಬಂದಿವೆ. ಇದರಲ್ಲಿ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಘಟನೆಗಳು ಮತ್ತು ದೊಡ್ಡ ರಾಜಕೀಯ ಪಕ್ಷಗಳ ಹೊರತಾಗಿ ತಿರುನೆಲ್ವೇಲಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಿಂದ ಗಮನಾರ್ಹ ಮತ್ತು ಗಂಭೀರವಾದ ಪ್ರತಿಕ್ರಿಯೆಗಳು ಬಂದಿವೆ ಎಂದು ವರದಿ ಹೇಳಿದೆ.

ಈ ಕಾಲೇಜಿನಿಂದ ಬಂದಿರುವ 1,300ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳಿಂದ ಇಂತಹ ಅಭಿಯಾನ ನಡೆಸಿದ್ದಕ್ಕಾಗಿ ವರದಿಯು ಪ್ರಾಂಶುಪಾಲರನ್ನು ಟೀಕಿಸಿದೆ. ಏಕೆಂದರೆ, 1,340 ಪ್ರತಿಕ್ರಿಯೆಗಳನ್ನು ಒಂದೇ ರೀತಿಯ ಪೋಸ್ಟ್ ಕಾರ್ಡ್‌ಗಳಲ್ಲಿ ಕಳುಹಿಸಲಾಗಿತ್ತು. ಅವುಗಳು ಮೀಸಲಾತಿಯನ್ನು ಅಂತ್ಯಗೊಳಿಸಿ ಎಂಬ ಒಂದೇ ರೀತಿಯ ಸಂದೇಶಗಳನ್ನು ಒಳಗೊಂಡಿತ್ತು. ಗಮನಾರ್ಹವಾಗಿ, ಪೋಸ್ಟ್‌ ಕಾರ್ಡ್‌ಗಳಲ್ಲಿ”ಜಾತಿ ಆಧಾರಿತ ಯಾವುದೇ ಶೈಕ್ಷಣಿಕ, ಉದ್ಯೋಗ/ಸವಲತ್ತುಗಳನ್ನು ಯಾರಿಗೂ ನೀಡಬಾರದು. ಆರ್ಥಿಕ ಪ್ರೋತ್ಸಾಹ ನೀಡಬಹುದು” ಎಂಬ ಒಂದೇ ರೀತಿಯ ಸಾಲುಗಳಿದ್ದವು ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಿಪಡಿಸಲು ಪ್ರೋತ್ಸಾಹಿಸುವುದು ಉತ್ತೇಜನಕಾರಿಯಾದರೂ, ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಒತ್ತಾಯಿಸುವುದು ಸರಿಯಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೋರಿ ನಾವು ಕಳುಹಿಸಿರುವ ನೋಟಿಸ್‌ಗೆ ವೈಯಕ್ತಿವಾಗಿ ಪ್ರತಿಕ್ರಿಯಿಸಲು ಕಾಲೇಜಿನ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಪ್ರಾಂಶುಪಾಲರು ತಮ್ಮದೇ ಅಭಿಪ್ರಾಯ ಹೊಂದಿರಬಹುದು. ಆದರೆ, ಅದನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸರಿಯಲ್ಲ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಅಭಿಪ್ರಾಯ ತಿಳಿಸಬೇಕಿತ್ತು. ಮೀಸಲಾತಿ ರದ್ದತಿಯ ಕೂಗು ನ್ಯಾಯಸಮ್ಮತವಲ್ಲ ಎಂದು ಕಂಡುಬಂದಿದೆ. ಹಾಗಾಗಿ, ಆ ಸಲಹೆಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್ ವಿವರಿಸಿದೆ.

ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಮಾಡಿರುವ ಪ್ರಮುಖ ಶಿಫಾರಸುಗಳ ವಿವರಣೆ ಕೆಳಗಿದೆ. ಓದಲು ಲಿಂಕ್ ಒತ್ತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...