Homeಮುಖಪುಟತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

ತಮಿಳುನಾಡು : ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ವರದಿಗೆ ಸಂಬಂಧಿಸಿದ ಗಮನಾರ್ಹ ಅಂಶವೊಂದು ಹೊರಬಿದ್ದಿದ್ದು, ಸಮಿತಿಯು ಸ್ವೀಕರಿಸಿದ 2,741 ಪ್ರತಿಕ್ರಿಯೆಗಳಲ್ಲಿ 1,400 ಪ್ರತಿಕ್ರಿಯೆಗಳು ಒಂದೇ ರೀತಿಯದ್ದಾಗಿತ್ತು. ಅವುಗಳು ಜಾತಿ ಆಧಾರಿತ ಮೀಸಲಾತಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ತಿರುನಲ್ವೇಲಿಯ ಕಾಲೇಜೊಂದರಿಂದ ಬಂದಿರುವ ಈ ಪ್ರತಿಕ್ರಿಯೆಗಳಿಂದ ನ್ಯಾಯಮೂರ್ತಿ ಚಂದ್ರು ಸಮಿತಿಯು ದಿಗ್ಭ್ರಮೆಗೊಂಡಿದೆ. ಇದು “ತಮಿಳುನಾಡಿನ ಸಾಮಾಜಿಕ ನ್ಯಾಯದ ಇತಿಹಾಸದ ಅಜ್ಞಾನ ಮತ್ತು ಸಂಪೂರ್ಣ ತಿಳುವಳಿಕೆಯ ಕೊರತೆ” ಎಂದು ವಿಷಾದಿಸಿದೆ. ಹಲವಾರು ಇತರ ಪ್ರತಿಕ್ರಿಯೆಗಳು ಸಹ ನಿರಾಶಾದಾಯಕವಾಗಿದ್ದವು. ಅವುಗಳನ್ನು ಚಾಟ್‌ ಜಿಪಿಟಿ – ಎಐ ಬೋಟ್‌ನ ಸಹಾಯದಿಂದ ಬರೆಯಲಾಗಿದೆ ಎಂದು ವರದಿ ತಿಳಿಸಿದೆ.

2023ರ ಆಗಸ್ಟ್‌ನಲ್ಲಿ ತಮಿಳುನಾಡಿನ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಚಂದ್ರು ಸಮಿತಿ ತನ್ನ 600 ಪುಟಗಳ ವರದಿಯನ್ನು ಜೂನ್ 18, 2024 ರಂದು ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ. ತಮ್ಮ ವರದಿಯಲ್ಲಿ, ನ್ಯಾಯಮೂರ್ತಿ ಚಂದ್ರು ಅವರು ಆಗಸ್ಟ್ 9, 2023 ರಂದು ದಲಿತ ಮಕ್ಕಳ ಮೇಲಿನ ದಾಳಿಯ ದಿನವನ್ನು “ತಮಿಳುನಾಡು ಶಾಲಾ ಶಿಕ್ಷಣದ ಇತಿಹಾಸದಲ್ಲಿ ಕರಾಳ ದಿನ” ಎಂದು ಖಂಡಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯವನ್ನು ಪರಿಹರಿಸಲು ಕ್ರಮಗಳನ್ನು ಶಿಫಾರಸು ಮಾಡುವ ಜವಾಬ್ದಾರಿ ಹೊತ್ತಿದ್ದ ಚಂದ್ರು ಅವರು, ಜಾತಿ ಭಿನ್ನತೆಗಳು ವ್ಯಾಪಕವಾಗಿವೆ ಎಂದು ಕಂಡುಕೊಂಡಿದ್ದಾರೆ. ಇದು “ಶೈಕ್ಷಣಿಕ ವ್ಯವಸ್ಥೆಯ ಮಿತಿಗಳನ್ನು ಮೀರಿ ಸಮಾಜವನ್ನು ತೀವ್ರವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ಶಾಲೆಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿದರೆ ಸಾಲುವುದಿಲ್ಲ. ಶಾಶ್ವತ ಪರಿಹಾರ ಬೇಕು ಮತ್ತು ಜಾತಿರಹಿತ ಸಮಾಜವನ್ನು ಸಾಧಿಸಲು ಸಮಗ್ರ ವಿಧಾನ ಬೇಕು ಎಂದು ವರದಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರು ಸಮಿತಿಗೆ 2,741 ಪ್ರತಿಕ್ರಿಯೆಗಳು ಸರ್ಕಾರಿ ಇಲಾಖೆಗಳು, ವಿಶ್ವವಿದ್ಯಾಲಯಗಳು, ಕಾಲೇಜುಗಳು, ಶಾಲೆಗಳು, ಎನ್‌ಜಿಒಗಳು ಮತ್ತು ಇತರ ವ್ಯಕ್ತಿಗಳಿಂದ ಬಂದಿವೆ. ಇದರಲ್ಲಿ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರು ಸೇರಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಘಟನೆಗಳು ಮತ್ತು ದೊಡ್ಡ ರಾಜಕೀಯ ಪಕ್ಷಗಳ ಹೊರತಾಗಿ ತಿರುನೆಲ್ವೇಲಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಿಂದ ಗಮನಾರ್ಹ ಮತ್ತು ಗಂಭೀರವಾದ ಪ್ರತಿಕ್ರಿಯೆಗಳು ಬಂದಿವೆ ಎಂದು ವರದಿ ಹೇಳಿದೆ.

ಈ ಕಾಲೇಜಿನಿಂದ ಬಂದಿರುವ 1,300ಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ. ವಿದ್ಯಾರ್ಥಿಗಳಿಂದ ಇಂತಹ ಅಭಿಯಾನ ನಡೆಸಿದ್ದಕ್ಕಾಗಿ ವರದಿಯು ಪ್ರಾಂಶುಪಾಲರನ್ನು ಟೀಕಿಸಿದೆ. ಏಕೆಂದರೆ, 1,340 ಪ್ರತಿಕ್ರಿಯೆಗಳನ್ನು ಒಂದೇ ರೀತಿಯ ಪೋಸ್ಟ್ ಕಾರ್ಡ್‌ಗಳಲ್ಲಿ ಕಳುಹಿಸಲಾಗಿತ್ತು. ಅವುಗಳು ಮೀಸಲಾತಿಯನ್ನು ಅಂತ್ಯಗೊಳಿಸಿ ಎಂಬ ಒಂದೇ ರೀತಿಯ ಸಂದೇಶಗಳನ್ನು ಒಳಗೊಂಡಿತ್ತು. ಗಮನಾರ್ಹವಾಗಿ, ಪೋಸ್ಟ್‌ ಕಾರ್ಡ್‌ಗಳಲ್ಲಿ”ಜಾತಿ ಆಧಾರಿತ ಯಾವುದೇ ಶೈಕ್ಷಣಿಕ, ಉದ್ಯೋಗ/ಸವಲತ್ತುಗಳನ್ನು ಯಾರಿಗೂ ನೀಡಬಾರದು. ಆರ್ಥಿಕ ಪ್ರೋತ್ಸಾಹ ನೀಡಬಹುದು” ಎಂಬ ಒಂದೇ ರೀತಿಯ ಸಾಲುಗಳಿದ್ದವು ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಿಪಡಿಸಲು ಪ್ರೋತ್ಸಾಹಿಸುವುದು ಉತ್ತೇಜನಕಾರಿಯಾದರೂ, ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಲು ಒತ್ತಾಯಿಸುವುದು ಸರಿಯಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೋರಿ ನಾವು ಕಳುಹಿಸಿರುವ ನೋಟಿಸ್‌ಗೆ ವೈಯಕ್ತಿವಾಗಿ ಪ್ರತಿಕ್ರಿಯಿಸಲು ಕಾಲೇಜಿನ ಪ್ರಾಂಶುಪಾಲರು ವಿಫಲರಾಗಿದ್ದಾರೆ. ಪ್ರಾಂಶುಪಾಲರು ತಮ್ಮದೇ ಅಭಿಪ್ರಾಯ ಹೊಂದಿರಬಹುದು. ಆದರೆ, ಅದನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸರಿಯಲ್ಲ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಅಭಿಪ್ರಾಯ ತಿಳಿಸಬೇಕಿತ್ತು. ಮೀಸಲಾತಿ ರದ್ದತಿಯ ಕೂಗು ನ್ಯಾಯಸಮ್ಮತವಲ್ಲ ಎಂದು ಕಂಡುಬಂದಿದೆ. ಹಾಗಾಗಿ, ಆ ಸಲಹೆಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯೂಸ್‌ ಮಿನಿಟ್ ವಿವರಿಸಿದೆ.

ನ್ಯಾಯಮೂರ್ತಿ ಚಂದ್ರು ವರದಿಯಲ್ಲಿ ಮಾಡಿರುವ ಪ್ರಮುಖ ಶಿಫಾರಸುಗಳ ವಿವರಣೆ ಕೆಳಗಿದೆ. ಓದಲು ಲಿಂಕ್ ಒತ್ತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...