Homeಮುಖಪುಟಅಂಬಾಸಮುದ್ರಂ ಕಸ್ಟಡಿ ಹಿಂಸೆ ಪ್ರಕರಣ: ಆರೋಪಿತ ಪೊಲೀಸ್‌ ಅಧಿಕಾರಿಯ ಅಮಾನತು ರದ್ದು

ಅಂಬಾಸಮುದ್ರಂ ಕಸ್ಟಡಿ ಹಿಂಸೆ ಪ್ರಕರಣ: ಆರೋಪಿತ ಪೊಲೀಸ್‌ ಅಧಿಕಾರಿಯ ಅಮಾನತು ರದ್ದು

- Advertisement -
- Advertisement -

ತಮಿಳುನಾಡಿನಲ್ಲಿ ಭಾರೀ ಸುದ್ದು ಮಾಡಿದ್ದ ಅಂಬಾಸಮುದ್ರಂ ಕಸ್ಟಡಿ ಹಿಂಸೆ ಪ್ರಕರಣದ ಆರೋಪಿತ ಐಪಿಎಸ್ ಅಧಿಕಾರಿ ಬಲ್ವೀರ್ ಸಿಂಗ್ ಅವರ ಅಮಾನತು ಆದೇಶವನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ.

2023ರಲ್ಲಿಈ ಕ್ರೂರ ಚಿತ್ರಹಿಂಸೆ ಬೆಳಕಿಗೆ ಬಂದಿತ್ತು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ಜಗಳದ ವಿಚಾರವಾಗಿ ಆರು ಮಂದಿಯನ್ನು ಅಂಬಾಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಬಂಧಿಸಿದ್ದ ವೇಳೆ ಎಎಸ್‌ಪಿ ಬಲ್ವೀರ್ ಸಿಂಗ್ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಮೂವರು ಆರೋಪಿಗಳು ತಮ್ಮ ಮೇಲಾದ ದೌರ್ಜನ್ಯವನ್ನು ವಿವರಿಸುವ ವಿಡಿಯೋ ವೈರಲ್‌ ಆಗಿತ್ತು. ವಿಡಿಯೋದಲ್ಲಿ ಚೆಲ್ಲಪ್ಪ ಎಂಬಾತ, ತನ್ನ ಸಹೋದರನ ಮೇಲೆ ಪೊಲೀಸ್ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಎದೆಗೆ ಒದ್ದಿದ್ದಾರೆ ಎಂದು ಆರೋಪಿಸಿದ್ದರು. ಪೊಲೀಸ್ ಅಧಿಕಾರಿಗಳು ತಮ್ಮ ಬಟ್ಟೆ ಬಿಚ್ಚಿಸಿ ಲಾಠಿಯಿಂದ ಹಲ್ಲೆ ಮಾಡಿದ್ದಾರೆ, ಇದಲ್ಲದೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಚಿತ್ರಹಿಂಸೆಯ ಬಗ್ಗೆ ಬಾಯ್ಬಿಡದಂತೆ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಎಸ್ಪಿ ಬಲ್ವೀರ್ ಆರೋಪಿಗಳನ್ನು ಕೋಣೆಗೆ ಕರೆದೊಯ್ದು ಕಟ್ಟಿಂಗ್‌ ಪಿಲ್ಲರ್‌ನಿಂದ ಅವರ ಹಲ್ಲುಗಳನ್ನು ಕಿತ್ತುಹಾಕಿದ್ದು, ಈ ವೇಳೆ ಇತರ ಪೊಲೀಸರು ಅವರ ಕಾಲು ಮತ್ತು ತೋಳುಗಳನ್ನು ಹಿಡಿದಿದ್ದರು ಇದಲ್ಲದೆ ಬಂಧನಕ್ಕೊಳಗಾಗಿದ್ದ ಇಬ್ಬರ ವೃಷಣಗಳನ್ನು ಕೂಡ ತುಳಿದಿದ್ದಾರೆ ಎಂದು ಆರೋಪಿಸಲಾಗಿದೆ.

ಶೋಷಿತ ಸಮುದಾಯಕ್ಕೆ ಸೇರಿದ್ದ ಮೂವರು ಆರೋಪಿಗಳ ಮೇಲೆ ನಡೆದ ಪೊಲೀಸ್‌ ದೌರ್ಜನ್ಯ ಕೋಲಾಹಲಕ್ಕೆ ಕಾರಣವಾಗಿತ್ತು. ಬಲ್ವೀರ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿತ್ತು ಮತ್ತು ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕಲ್ಲಿಡೈಕುರಿಚಿ, ವಿಕ್ರಮಸಿಂಗಪುರಂ ಮತ್ತು ಅಂಬಾಸಮುದ್ರಂ  ಮೂರು ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 15 ಮಂದಿಗೆ ಬಲ್ವೀರ್ ಸಿಂಗ್ ಚಿತ್ರಹಿಂಸೆ ನೀಡಿದ್ದರು ಎಂದು ಅವರ ವಿರುದ್ಧ ಆರೋಪ ಕೇಳಿ ಬಂದಿತ್ತು.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಶಂಕರ್ ಜಿವಾಲ್ ಅವರಿಗೆ ಮಾ.1, 2024ರಂದು ಹಾಜರಾಗುವಂತೆ ಸಮನ್ಸ್ ನೀಡಿದ ಕೆಲವು ದಿನಗಳ ನಂತರ ಬಲ್ವೀರ್ ಅವರ ಅಮಾನತು ಹಿಂಪಡೆಯಲಾಗಿದೆ. ಡಿಜಿಪಿಗೆ ಕಳುಹಿಸಿದ ಮೇಲ್‌ನಲ್ಲಿ, ಎನ್‌ಎಚ್‌ಆರ್‌ಸಿ ಬಲ್ವೀರ್ ಸಿಂಗ್ ಕಸ್ಟಡಿಯಲ್ಲಿ ಅಪ್ರಾಪ್ತರನ್ನು ಹಿಂಸಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಾಜರಾಗುವಂತೆ ಕೋರಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿ ಬಲ್ವೀರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324 (ಆಯುಧಗಳಿಂದ ಗಾಯಗೊಳಿಸುವುದು), 326 (ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ಗಂಭೀರ ಗಾಯ) ಮತ್ತು 506/1 ರಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹಿಂತೆಗೆದುಕೊಳ್ಳಲಾಗಿತ್ತು. ಎಫ್‌ಐಆರ್ ದಾಖಲಾದ ಮೂರು ದಿನಗಳ ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.

ಇದನ್ನು ಓದಿ: 2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...