Homeಮುಖಪುಟತಮಿಳುನಾಡು: ಆರ್‌ಎಸ್‌ಎಸ್‌‌ ಹಮ್ಮಿಕೊಂಡಿದ್ದ ರಸ್ತೆ ಮೆರವಣಿಗೆಗೆ ಹೈಕೋರ್ಟ್ ತಡೆ

ತಮಿಳುನಾಡು: ಆರ್‌ಎಸ್‌ಎಸ್‌‌ ಹಮ್ಮಿಕೊಂಡಿದ್ದ ರಸ್ತೆ ಮೆರವಣಿಗೆಗೆ ಹೈಕೋರ್ಟ್ ತಡೆ

- Advertisement -
- Advertisement -

ತಮಿಳುನಾಡು ರಾಜ್ಯಾದ್ಯಂತ ಆರ್‌ಎಸ್‌ಎಸ್‌ ನಾಳೆ ಹಮ್ಮಿಕೊಳ್ಳಲು ಹೊರಟಿದ್ದ ರಸ್ತೆ ಮೆರವಣಿಗೆಗೆ ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಮೈದಾನ ಅಥವಾ ಕ್ರೀಡಾಂಗಣದಂತಹ ಕಾಂಪೌಂಡ್ ಆವರಣದಲ್ಲಿ ಮಾತ್ರ ಮೆರವಣಿಗೆ ನಡೆಸಲು ಕೋರ್ಟ್ ಸೂಚಿಸಿದ್ದು, ರಸ್ತೆ ಮೆರವಣಿಗೆಯನ್ನು ನಡೆಸುವುದಿಲ್ಲ ಎಂದು ಆರ್‌ಎಸ್‌ಎಸ್ ಹೇಳಿದೆ.

ತನ್ನ ಹೇಳಿಕೆಯಲ್ಲಿ ಹಿಂದುತ್ವವಾದಿ ಸಂಘಟನೆ “ಈ ಆದೇಶವು ಸ್ವೀಕಾರಾರ್ಹವಲ್ಲ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು” ಎಂದಿದೆ.

ತಮಿಳುನಾಡಿನಾದ್ಯಂತ ನವೆಂಬರ್ 6ರ ಭಾನುವಾರದಂದು 44 ಸ್ಥಳಗಳಲ್ಲಿ ಮೆರವಣಿಗೆ ನಡೆಸಲು ಮದ್ರಾಸ್ ಹೈಕೋರ್ಟ್ ಆರ್‌ಎಸ್‌ಎಸ್‌ಗೆ ಷರತ್ತುಬದ್ಧ ಅನುಮತಿ ನೀಡಿದೆ. ಬಲಪಂಥೀಯ ಸಂಘಟನೆಯು ಕೋರಿದ್ದ 50 ಸ್ಥಳಗಳ ಪೈಕಿ ಮೂರರಲ್ಲಿ ಮಾತ್ರ ರಾಜ್ಯ ಸರ್ಕಾರವು ಈ ಹಿಂದೆ ಮೆರವಣಿಗೆಗೆ ಅನುಮತಿ ನೀಡಿತ್ತು. ಆರ್‌ಎಸ್‌ಎಸ್, ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಬೇಕು, ಇಲ್ಲದಿದ್ದರೆ ಪರಿಣಾಮ ಎದುರಿಸಬೇಕು ಎಂದು ಕೋರ್ಟ್‌ ಎಚ್ಚರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಶ್ಮೀರ, ಪಶ್ಚಿಮ ಬಂಗಾಳ, ಕೇರಳ ಮತ್ತು ಇತರ ಸ್ಥಳಗಳಲ್ಲಿ ರಸ್ತೆ ಮೆರವಣಿಗೆಗಳು ನಡೆಯುತ್ತವೆ. ನಾವು ನವೆಂಬರ್ 6 ರಂದು ನಮ್ಮ ತಮಿಳುನಾಡಿನಲ್ಲಿ ರಸ್ತೆ ಮೆರವಣಿಗೆಗಳನ್ನು ನಡೆಸುತ್ತಿಲ್ಲ. ನಾವು ಮನವಿ ಮಾಡುತ್ತೇವೆ” ಎಂದು ಆರ್‌ಎಸ್‌ಎಸ್ ಹೇಳಿಕೆ ತಿಳಿಸಿದೆ.

ಗುಪ್ತಚರ ಮಾಹಿತಿಯ ಮೇರೆಗೆ ಕೊಯಮತ್ತೂರು, ಪೊಲ್ಲಾಚಿ ಮತ್ತು ನಾಗರ್‌ಕೋಯಿಲ್ ಸೇರಿದಂತೆ ಆರು ಕೋಮು ಸೂಕ್ಷ್ಮ ಸ್ಥಳಗಳಲ್ಲಿ ಮೆರವಣಿಗೆಗೆ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು.

ಎರಡು ತಿಂಗಳ ನಂತರ ಇತರ ಆರು ಸ್ಥಳಗಳಲ್ಲಿ ಮೆರವಣಿಗೆಗೆ ಅನುಮತಿ ಪಡೆಯಲು ಆರ್‌ಎಸ್‌ಎಸ್‌ಗೆ ಕೋರ್ಟ್ ಅನುಮತಿ ನೀಡಿದೆ.

ಕೊಯಮತ್ತೂರಿನಲ್ಲಿ ಇತ್ತೀಚೆಗೆ ದೀಪಾವಳಿಯ ಒಂದು ದಿನದ ಮೊದಲು ಕಾರ್ ಸ್ಫೋಟ ನಡೆದಿತ್ತು. ಇದರಲ್ಲಿ ಜಮೀಶಾ ಮುಬಿನ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಅಕ್ಟೋಬರ್ 2ರಂದು ನ್ಯಾಯಾಲಯವು ಅನುಮತಿ ನೀಡಿದ್ದರೂ ತಮಿಳುನಾಡು ಸರ್ಕಾರವು ಈ ಹಿಂದೆ ಅನುಮತಿ ನಿರಾಕರಿಸಿತ್ತು. ಆರ್‌ಎಸ್‌ಎಸ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಲು ಮುಂದಾಯಿತು.

ಇದನ್ನೂ ಓದಿರಿ: ಗುಜರಾತ್ ಚುನಾವಣೆ: ಬಿಜೆಪಿ ತೊರೆದ ಹಿರಿಯ ಮುಖಂಡ ಜಯ್ ನಾರಾಯಣ್ ವ್ಯಾಸ್

ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮತ್ತು ಪೊಲೀಸ್ ಕಮಿಷನರ್‌ಗಳಿಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸುತ್ತೋಲೆಯನ್ನು ಹೊರಡಿಸಿದ್ದು, ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗಳಿಗೆ ಒಳಪಟ್ಟು ಅನುಮತಿ ನೀಡುವಂತೆ ತಿಳಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲಿನ ನಿಷೇಧದ ನಂತರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವಿಚಾರವನ್ನು ಸರ್ಕಾರ ಪ್ರಸ್ತಾಪಿಸುತ್ತಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿದುತಲೈ ಚಿರುತೈಗಲ್ ಕೂಡ ಅದೇ ದಿನ ಶಾಂತಿಗಾಗಿ ಮಾನವ ಸರಪಳಿ ನಿರ್ಮಿಸಲು ಅನುಮತಿ ಕೋರಿದ್ದರು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ, ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರ ಮತ್ತು ಗಾಂಧಿಯವರ ಮರಣವನ್ನು ಹೇಗೆ ಸಂಭ್ರಮಿಸಲಾಗಿದೆ ಎಂಬುದನ್ನು ಪಕ್ಷವು ಉಲ್ಲೇಖಿಸಿದೆ. ಈ ಕಾರ್ಯಕ್ರಮಕ್ಕೆ ಗಾಂಧಿ ಜಯಂತಿಯನ್ನು ಆಯ್ಕೆ ಮಾಡಿಕೊಂಡಿರುವುದು ಸರಿಯಲ್ಲ ಎಂದು ಪಕ್ಷವು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...